<p><strong>ಬೆಂಗಳೂರು: </strong>‘ಬಿಬಿಎಂಪಿ ಚುನಾವಣೆಯನ್ನು ಮತ್ತಷ್ಟು ಮುಂದೂಡಬಾರದು. ಆದಷ್ಟು ಬೇಗ ಚುನಾವಣೆ ನಡೆಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಬೇಕು’ ಎಂದು ಪಾಲಿಕೆಯ ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್ ಆಗ್ರಹಿಸಿದರು.</p>.<p>ಸುದ್ದಿಗಾರರ ಜೊತೆ ಶುಕ್ರವಾರ ಇಲ್ಲಿ ಮಾತನಾಡಿದ ಅವರು, 'ಈ ಹಿಂದೆಯೂ ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಬಿಬಿಎಂಪಿಗೆ 3 ವರ್ಷಗಳ ಕಾಲ ಆಡಳಿತಾಧಿಕಾರಿಯನ್ನು ನೇಮಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಡೆಗಣಿಸಲಾಗಿತ್ತು. ಈ ಬಾರಿ ಅದಕ್ಕೆ ಅವಕಾಶ ನೀಡುವುದಿಲ್ಲ. ಚುನಾವಣೆಯನ್ನು ಸಕಾಲದಲ್ಲಿ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಹೈಕೋರ್ಟ್ ಮೊರೆ ಹೋಗುತ್ತೇವೆ' ಎಂದು ತಿಳಿಸಿದರು.</p>.<p>’ಬಿಬಿಎಂಪಿಗೆ 27 ವಾರ್ಡ್ಗಳನ್ನು ಸೇರ್ಪಡೆ ಗೊಳಿಸುವ ಮೂಲಕ ವಾರ್ಡ್ಗಳ ಸಂಖ್ಯೆಯನ್ನು 225ಕ್ಕೆ ಹೆಚ್ಚಿಸುವುದು ಮತ್ತು ಬಿಬಿಎಂಪಿ ಮಸೂದೆಯನ್ನು ಜಂಟಿ ಸಲಹಾ ಸಮಿತಿಯ ಪರಿಶೀಲನೆಗೆ ಒಳಪಡಿಸಲು ಕಾಲಾವಕಾಶ ಕೇಳುವುದು ಚುನಾವಣೆ ಮುಂದೂಡಲು ಸರ್ಕಾರ ಅನುಸರಿಸುತ್ತಿರುವ ಕಾರ್ಯತಂತ್ರದ ಭಾಗ’ ಎಂದು ಅವರು ಆರೋಪಿಸಿದರು.</p>.<p>‘ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಗೊಂಡ ವಾರ್ಡ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ, ಹದಗೆಟ್ಟ ರಸ್ತೆಗಳ ಸಮಸ್ಯೆ ಹಾಗೆಯೇ ಇದೆ. ಬಿಬಿಎಂಪಿಗೆ ಮತ್ತೆ 60 ಹಳ್ಳಿಗಳ ಸೇರ್ಪಡೆ ಮಾಡಲು ಸರ್ಕಾರ ಹೊರಟಿದ್ದೇಕೆ’ ಎಂದು ಪ್ರಶ್ನಿಸಿದರು.</p>.<p>‘198 ವಾರ್ಡ್ಗಳ ಮರುವಿಂಗಡಣೆ ಇತ್ತೀಚೆಗಷ್ಟೇ ನಡೆದಿದೆ. ನ.30ಕ್ಕೆ ಮತದಾರರ ಪರಿಷ್ಕೃತ ಪಟ್ಟಿಯೂ ಸಿದ್ದವಾಗಲಿದೆ. ಮೀಸಲಾತಿ ಅಂತಿಮಗೊಳಿಸಲು ಒಂದು ವಾರ ಸಮಯ ಸಾಕು. ಇದಾದ ತಕ್ಷಣ ಚುನಾವಣೆ ನಡೆಸಬಹುದು' ಎಂದು ಅಭಿಪ್ರಾಯಪಟ್ಟರು.</p>.<p><strong>‘ಸೋಲುವ ಭೀತಿಯಿಂದ ಈ ನಿರ್ಧಾರ’</strong></p>.<p>‘ಸರ್ಕಾರವು ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ವಾರ್ಡ್ಗಳ ಸಂಖ್ಯೆಯನ್ನು 225ಕ್ಕೆ ಏರಿಸಲು ಮುಂದಾಗಿದೆ. ಕೊರೊನಾ ಸೋಂಕು ನಿರ್ವಹಣೆಯಲ್ಲಿ ವಿಫಲವಾಗಿರುವ ಬಿಜೆಪಿ ಜನರ ಆಕ್ರೋಶಕ್ಕೆ ಗುರಿಯಾಗಿದೆ. ಹಾಗಾಗಿ ಈಗಾಗಲೇ ವಾರ್ಡ್ಗಳ ಮರುವಿಂಗಡಣೆ ಮಾಡಿದ್ದರೂ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಈ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂಬುದು ಸ್ಪಷ್ಟ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಟ್ವೀಟ್ ಮಾಡಿದ್ದಾರೆ.</p>.<p>‘ಪ್ರಜಾವಾಣಿ’ಯ ಶುಕ್ರವಾರದ ಸಂಚಿಕೆಯಲ್ಲಿ ಪ್ರಕಟವಾದ ವರದಿಯನ್ನೂ ಅವರು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಬಿಬಿಎಂಪಿ ಚುನಾವಣೆಯನ್ನು ಮತ್ತಷ್ಟು ಮುಂದೂಡಬಾರದು. ಆದಷ್ಟು ಬೇಗ ಚುನಾವಣೆ ನಡೆಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಬೇಕು’ ಎಂದು ಪಾಲಿಕೆಯ ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್ ಆಗ್ರಹಿಸಿದರು.</p>.<p>ಸುದ್ದಿಗಾರರ ಜೊತೆ ಶುಕ್ರವಾರ ಇಲ್ಲಿ ಮಾತನಾಡಿದ ಅವರು, 'ಈ ಹಿಂದೆಯೂ ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಬಿಬಿಎಂಪಿಗೆ 3 ವರ್ಷಗಳ ಕಾಲ ಆಡಳಿತಾಧಿಕಾರಿಯನ್ನು ನೇಮಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಡೆಗಣಿಸಲಾಗಿತ್ತು. ಈ ಬಾರಿ ಅದಕ್ಕೆ ಅವಕಾಶ ನೀಡುವುದಿಲ್ಲ. ಚುನಾವಣೆಯನ್ನು ಸಕಾಲದಲ್ಲಿ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಹೈಕೋರ್ಟ್ ಮೊರೆ ಹೋಗುತ್ತೇವೆ' ಎಂದು ತಿಳಿಸಿದರು.</p>.<p>’ಬಿಬಿಎಂಪಿಗೆ 27 ವಾರ್ಡ್ಗಳನ್ನು ಸೇರ್ಪಡೆ ಗೊಳಿಸುವ ಮೂಲಕ ವಾರ್ಡ್ಗಳ ಸಂಖ್ಯೆಯನ್ನು 225ಕ್ಕೆ ಹೆಚ್ಚಿಸುವುದು ಮತ್ತು ಬಿಬಿಎಂಪಿ ಮಸೂದೆಯನ್ನು ಜಂಟಿ ಸಲಹಾ ಸಮಿತಿಯ ಪರಿಶೀಲನೆಗೆ ಒಳಪಡಿಸಲು ಕಾಲಾವಕಾಶ ಕೇಳುವುದು ಚುನಾವಣೆ ಮುಂದೂಡಲು ಸರ್ಕಾರ ಅನುಸರಿಸುತ್ತಿರುವ ಕಾರ್ಯತಂತ್ರದ ಭಾಗ’ ಎಂದು ಅವರು ಆರೋಪಿಸಿದರು.</p>.<p>‘ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಗೊಂಡ ವಾರ್ಡ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ, ಹದಗೆಟ್ಟ ರಸ್ತೆಗಳ ಸಮಸ್ಯೆ ಹಾಗೆಯೇ ಇದೆ. ಬಿಬಿಎಂಪಿಗೆ ಮತ್ತೆ 60 ಹಳ್ಳಿಗಳ ಸೇರ್ಪಡೆ ಮಾಡಲು ಸರ್ಕಾರ ಹೊರಟಿದ್ದೇಕೆ’ ಎಂದು ಪ್ರಶ್ನಿಸಿದರು.</p>.<p>‘198 ವಾರ್ಡ್ಗಳ ಮರುವಿಂಗಡಣೆ ಇತ್ತೀಚೆಗಷ್ಟೇ ನಡೆದಿದೆ. ನ.30ಕ್ಕೆ ಮತದಾರರ ಪರಿಷ್ಕೃತ ಪಟ್ಟಿಯೂ ಸಿದ್ದವಾಗಲಿದೆ. ಮೀಸಲಾತಿ ಅಂತಿಮಗೊಳಿಸಲು ಒಂದು ವಾರ ಸಮಯ ಸಾಕು. ಇದಾದ ತಕ್ಷಣ ಚುನಾವಣೆ ನಡೆಸಬಹುದು' ಎಂದು ಅಭಿಪ್ರಾಯಪಟ್ಟರು.</p>.<p><strong>‘ಸೋಲುವ ಭೀತಿಯಿಂದ ಈ ನಿರ್ಧಾರ’</strong></p>.<p>‘ಸರ್ಕಾರವು ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ವಾರ್ಡ್ಗಳ ಸಂಖ್ಯೆಯನ್ನು 225ಕ್ಕೆ ಏರಿಸಲು ಮುಂದಾಗಿದೆ. ಕೊರೊನಾ ಸೋಂಕು ನಿರ್ವಹಣೆಯಲ್ಲಿ ವಿಫಲವಾಗಿರುವ ಬಿಜೆಪಿ ಜನರ ಆಕ್ರೋಶಕ್ಕೆ ಗುರಿಯಾಗಿದೆ. ಹಾಗಾಗಿ ಈಗಾಗಲೇ ವಾರ್ಡ್ಗಳ ಮರುವಿಂಗಡಣೆ ಮಾಡಿದ್ದರೂ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಈ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂಬುದು ಸ್ಪಷ್ಟ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಟ್ವೀಟ್ ಮಾಡಿದ್ದಾರೆ.</p>.<p>‘ಪ್ರಜಾವಾಣಿ’ಯ ಶುಕ್ರವಾರದ ಸಂಚಿಕೆಯಲ್ಲಿ ಪ್ರಕಟವಾದ ವರದಿಯನ್ನೂ ಅವರು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>