<p><strong>ರಾಜರಾಜೇಶ್ವರಿನಗರ: </strong>‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನುಅಕ್ಟೋಬರ್ ಒಳಗೆ ನಡೆಸಲಾಗುವುದು’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.</p>.<p>ಅಂದ್ರಹಳ್ಳಿಯಲ್ಲಿ ಬೆಸ್ಕಾಂ ಹಾಗೂ ವಿದ್ಯುತ್ ವಾಣಿ ಪರಿಸರ ಸಂಘಟನೆ ಆಶ್ರಯದಲ್ಲಿ ಶನಿವಾರ ನಡೆದ ಸಸಿ ನೆಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸುಪ್ರೀಂ ಕೋರ್ಟ್ ಆದೇಶದಂತೆ ಅಕ್ಟೋಬರ್ ಒಳಗಾಗಿ ಬಿಬಿಎಂಪಿಗೆ ಚುನಾವಣೆ ನಡೆಸಬೇಕು. ವಾರ್ಡ್ಗಳ ಸಂಖ್ಯೆ ಹೆಚ್ಚಿಸಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ತಕರಾರು ಸಲ್ಲಿಸಲು ಸಾರ್ವಜನಿಕರಿಗೆ ಹದಿನೈದು ದಿನಗಳ ಕಾಲಾವಕಾಶ ನೀಡಲಾಗಿದೆ. ಆ ನಂತರ<br />ಮತ್ತೊಮ್ಮೆ ಕರಡು ಪರಿಶೀಲಿಸಿ ವಾರ್ಡ್ಗಳಿಗೆ ಮೀಸಲಾತಿ ಪ್ರಕಟಿಸಲಾಗುತ್ತದೆ’ ಎಂದರು.</p>.<p>‘ಚುನಾವಣೆ ಮುಂದೂಡುವ ಉದ್ದೇಶ ಸರ್ಕಾರಕ್ಕೆ ಇಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.</p>.<p>‘ಹೊರವಲಯ ದೊಡ್ಡ ಬಿದರಕಲ್ಲು ವಾರ್ಡ್ನಲ್ಲಿ ಮೂಲಸೌಕರ್ಯ ಕಲ್ಪಿಸಲು ಸಿದ್ಧತೆಗಳು ನಡೆದಿದೆ. ಇಡೀ ವಾರ್ಡ್ಗೆ ಕಾವೇರಿ ನೀರು ಸರಬರಾಜು ಮಾಡಲಾಗುತ್ತದೆ. ನಂತರ, ಡಾಂಬರೀಕರಣ ನಡೆಯ<br />ಲಿದೆ. ಜಲಮಂಡಳಿ ಕಾಮಗಾರಿ ಮುಗಿದಿರುವ ರಸ್ತೆಗಳಲ್ಲಿ ಡಾಂಬರೀಕರಣ ಆರಂಭವಾಗಿದೆ. ಎರಡು ತಿಂಗಳಲ್ಲಿ ನೀರು ಸರಬರಾಜು ಮತ್ತು ಡಾಂಬರೀಕರಣ ನಡೆಯಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿನಗರ: </strong>‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನುಅಕ್ಟೋಬರ್ ಒಳಗೆ ನಡೆಸಲಾಗುವುದು’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.</p>.<p>ಅಂದ್ರಹಳ್ಳಿಯಲ್ಲಿ ಬೆಸ್ಕಾಂ ಹಾಗೂ ವಿದ್ಯುತ್ ವಾಣಿ ಪರಿಸರ ಸಂಘಟನೆ ಆಶ್ರಯದಲ್ಲಿ ಶನಿವಾರ ನಡೆದ ಸಸಿ ನೆಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸುಪ್ರೀಂ ಕೋರ್ಟ್ ಆದೇಶದಂತೆ ಅಕ್ಟೋಬರ್ ಒಳಗಾಗಿ ಬಿಬಿಎಂಪಿಗೆ ಚುನಾವಣೆ ನಡೆಸಬೇಕು. ವಾರ್ಡ್ಗಳ ಸಂಖ್ಯೆ ಹೆಚ್ಚಿಸಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ತಕರಾರು ಸಲ್ಲಿಸಲು ಸಾರ್ವಜನಿಕರಿಗೆ ಹದಿನೈದು ದಿನಗಳ ಕಾಲಾವಕಾಶ ನೀಡಲಾಗಿದೆ. ಆ ನಂತರ<br />ಮತ್ತೊಮ್ಮೆ ಕರಡು ಪರಿಶೀಲಿಸಿ ವಾರ್ಡ್ಗಳಿಗೆ ಮೀಸಲಾತಿ ಪ್ರಕಟಿಸಲಾಗುತ್ತದೆ’ ಎಂದರು.</p>.<p>‘ಚುನಾವಣೆ ಮುಂದೂಡುವ ಉದ್ದೇಶ ಸರ್ಕಾರಕ್ಕೆ ಇಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.</p>.<p>‘ಹೊರವಲಯ ದೊಡ್ಡ ಬಿದರಕಲ್ಲು ವಾರ್ಡ್ನಲ್ಲಿ ಮೂಲಸೌಕರ್ಯ ಕಲ್ಪಿಸಲು ಸಿದ್ಧತೆಗಳು ನಡೆದಿದೆ. ಇಡೀ ವಾರ್ಡ್ಗೆ ಕಾವೇರಿ ನೀರು ಸರಬರಾಜು ಮಾಡಲಾಗುತ್ತದೆ. ನಂತರ, ಡಾಂಬರೀಕರಣ ನಡೆಯ<br />ಲಿದೆ. ಜಲಮಂಡಳಿ ಕಾಮಗಾರಿ ಮುಗಿದಿರುವ ರಸ್ತೆಗಳಲ್ಲಿ ಡಾಂಬರೀಕರಣ ಆರಂಭವಾಗಿದೆ. ಎರಡು ತಿಂಗಳಲ್ಲಿ ನೀರು ಸರಬರಾಜು ಮತ್ತು ಡಾಂಬರೀಕರಣ ನಡೆಯಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>