ಪ್ರಮಾಣ ಪತ್ರದಲ್ಲೇನಿದೆ?:ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ನ್ಯಾಯಮೂರ್ತಿ ಭಕ್ತವತ್ಸಲ ಆಯೋಗ ವರದಿ ಸಲ್ಲಿಸಿತ್ತು. ಆದರೆ, ಹೈಕೋರ್ಟ್ ನಿರ್ದೇಶನಗಳ ಆಧಾರದಲ್ಲಿ ವರದಿಯನ್ನು ಪುನರ್ ಪರಿಶೀಲಿಸಿ ಪರಿಷ್ಕೃತ ವರದಿ ಸಲ್ಲಿ ಸಲು ನ್ಯಾಯಮೂರ್ತಿ ಭಕ್ತವತ್ಸಲ ಆಯೋಗಕ್ಕೆ ಮನವಿ ಮಾಡಲಾಗಿತ್ತು. ಅದರಂತೆ, ಅಕ್ಟೋಬರ್ 31ಕ್ಕೆ ಪೂರಕ ವರದಿ ಸಲ್ಲಿಸಿದ ಆಯೋಗ, ‘ಈ ಹಿಂದೆ ಸಲ್ಲಿಸಿದ್ದ ವರದಿ ಕಾನೂನುಬದ್ಧವಾಗಿದ್ದು, ಬದಲಾವಣೆಯ ಅವಶ್ಯಕತೆ ಇಲ್ಲ’ ಎಂದು ಸ್ಪಷ್ಟಪಡಿಸಿತ್ತು.