ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಶಿವಾಜಿನಗರ, ಚಿಕ್ಕಪೇಟೆ, ಮಹದೇವಪುರ ವಿಧಾನಸಭೆ ಕ್ಷೇತ್ರಗಳ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ವೇಳಾಪಟ್ಟಿಯನ್ನು ಪರಿಷ್ಕರಿಸಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಪರಿಷ್ಕೃತ ವೇಳಾಪಟ್ಟಿಪ್ರಕಾರ ಹಕ್ಕುಗಳು ಮತ್ತು ಆಕ್ಷೇಪಗಳನ್ನು ಡಿ.24ರವರೆಗೆ ಸಲ್ಲಿಸಬಹುದು. ಈ ಆಕ್ಷೇಪಣೆಗಳನ್ನು ಜ.6ರೊಳಗೆ ವಿಲೇವಾರಿ ಮಾಡಲಾಗುತ್ತದೆ. ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸುವ ಮುನ್ನ ಆಯೋಗದ ಅನುಮತಿಯನ್ನು ಪಡೆಯಬೇಕು. ಡೇಟಾಬೇಸ್ ನವೀಕರಣ ಮತ್ತು ಪೂರಕ ಪಟ್ಟಿ ಮುದ್ರಣವನ್ನು ಜ.13ರೊಳಗೆ ಪೂರೈಸಬೇಕು. ಅಂತಿಮ ಮತದಾರರ ಪಟ್ಟಿಯನ್ನು ಜ.15ರಂದು ಪ್ರಕಟಿಸಬೇಕು ಎಂದು ತಿಳಿಸಲಾಗಿದೆ.
ಚುನಾವಣೆ ಆಯೋಗದ ವೆಬ್ಸೈಟ್ www.ceokarnataka.gov.inನಲ್ಲಿಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದೆಯೇ, ಹೆಸರು ಸರಿಯಾಗಿ ನಮೂದಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬಹುದು. ಹೊಸದಾಗಿ ಹೆಸರು ಸೇರಿಸುವವರು ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಬೇಕು ಎಂದುತಿಳಿಸಲಾಗಿದೆ.