<p><strong>ಬೆಂಗಳೂರು:</strong> ಬಿಬಿಎಂಪಿಯ ವಿದ್ಯುತ್ ವಿಭಾಗದ ಎಂಜಿನಿಯರ್ಗಳು ಹಾಗೂ ಅಧಿಕಾರಿಗಳು ರಾತ್ರಿ 8.30ರವರೆಗೂ ಕಾರ್ಯನಿರ್ವಹಿಸಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶಿಸಿದ್ದಾರೆ.</p><p>ವಿದ್ಯುತ್ ವಿಭಾಗಕ್ಕೆ ಸಂಬಂಧಿಸಿದಂತೆ, ಸಾರ್ವಜನಿಕರ ವಲಯದಿಂದ ದೂರುಗಳು ಬರುತ್ತಿವೆ. ಈ ದೂರುಗಳು ಸಂಜೆ 6ರಿಂದ ರಾತ್ರಿ 9ರವರೆಗೆ ಹೆಚ್ಚು ಬರುತ್ತಿವೆ. ಬೀದಿ ದೀಪಗಳ ನಿರ್ವಹಣೆಗೆ ನಿಯೋಜಿಸಲ್ಪಟ್ಟ ಗುತ್ತಿಗೆದಾರರು ನಿಗದಿಪಡಿಸಲಾದ ಸಮಯಕ್ಕೆ ಅವುಗಳನ್ನು ಸರಿಪಡಿಸದಿರುವುದು ಕಂಡುಬಂದಿದೆ. ಬಿಬಿಎಂಪಿ ವಿದ್ಯುತ್ ವಿಭಾಗದ ಮೇಲುಸ್ತುವಾರಿಯಲ್ಲಿ ಕಾರ್ಯಕ್ಷಮತೆ ಇಲ್ಲದಿರುವುದು ಕಂಡುಬಂದಿದೆ.</p><p>ಆದ್ದರಿಂದ, ವಿದ್ಯುತ್ ವಿಭಾಗದ ಕಾರ್ಯ ಅವಧಿಯನ್ನು ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಹಾಗೂ ಸಂಜೆ 5ರಿಂದ ರಾತ್ರಿ 8.30ರವರೆಗೆ ನಿಗದಿಪಡಿಸಲಾಗಿದೆ. ವಿದ್ಯುತ್ ವಿಭಾಗದ ಎಲ್ಲ ಅಧೀಕ್ಷಕ ಎಂಜಿನಿಯರ್, ಕಾರ್ಯಪಾಲಕ ಎಂಜಿನಿಯರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಸಹಾಯಕ/ ಕಿರಿಯ ಎಂಜಿನಿಯರ್, ಗುತ್ತಿಗೆ ಎಂಜಿನಿಯರ್ಗಳು ಈ ಅವಧಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದ್ದಾರೆ.</p>.<p><strong>ಮಳೆ: ಮುಂಜಾಗ್ರತಾ ಕ್ರಮಕ್ಕೆ ಸೂಚನೆ</strong></p><p>ಬೆಂಗಳೂರು: ನಗರದಲ್ಲಿ ಮಳೆಗಾಲದ ವೇಳೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p><p>ಮೆಟ್ರೊ ಕಾಮಗಾರಿ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಮಳೆ ನೀರಿನ ಸರಾಗ ಹರಿವಿಗೆ ಕ್ರಮ ಕೈಗೊಳ್ಳಬೇಕು. ರಾಜಕಾಲುವೆ ಹಾಗೂ ರಸ್ತೆ ಬದಿ ಚರಂಡಿಗಳಲ್ಲಿ ಹೂಳನ್ನು ತ್ವರಿತಗತಿಯಲ್ಲಿ<br>ತೆರವುಗೊಳಿಸಬೇಕು. ಜೋರು ಮಳೆ ಸಮಯದಲ್ಲಿ ರಸ್ತೆಗಳ ಮೇಲೆ ಹೆಚ್ಚು ನೀರು ನಿಂತು ವಾಹನಗಳ ಸಂಚಾರಕ್ಕೆ ಹೆಚ್ಚು ಸಮಸ್ಯೆಯಾದಂತೆ ನೋಡಿಕೊಳ್ಳಬೇಕು ಎಂದರು.</p><p>ಮಳೆ ಸಂದರ್ಭದಲ್ಲಿ ಬಿದ್ದಂತಹ ಮರಗಳು ಹಾಗೂ ರೆಂಬೆ/ಕೊಂಬೆಗಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸಲು 28 ತಂಡಗಳು ಕಾರ್ಯನಿರ್ವಹಿಸುತ್ತಿವೆ. ಜೊತೆಗೆ ಹೆಚ್ಚುವರಿಯಾಗಿ 6 ತಂಡ ಗಳನ್ನು ನಿಯೋಜಿಸಲಾಗಿದೆ. ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ದೃಷ್ಠಿಯಿಂದ ವಲಯವಾರು 8 ದ್ವಿಚಕ್ರ ವಾಹನಗಳ ತಂಡಗಳನ್ನು ನಿಯೋಜಿಸಲಾಗುತ್ತಿದೆ ಎಂದು ಹೇಳಿದರು.</p><p>ಅಗ್ನಿಶಾಮಕ ಠಾಣೆ ಹಾಗೂ ಎಸ್.ಡಿ.ಆರ್.ಎಫ್ ಇಲಾಖೆಗಳ ಜೊತೆ ಆಯಾ ವಲಯ ಅಧಿಕಾರಿಗಳು ಸಂಪರ್ಕ ದಲ್ಲಿರಬೇಕು. ಬೆಸ್ಕಾಂ, ಜಲಮಂಡಳಿ ಸೇರಿದಂತೆ ಇನ್ನಿತರೆ ಇಲಾಖೆಗಳನ್ನು ಒಳಗೊಂಡಂತೆ ಆಯಾ ವಲಯದ ಉಪ ವಿಭಾಗವಾರು ವ್ಯಾಟ್ಸ್ಆ್ಯಪ್ ಗ್ರೂಪ್ ರಚಿಸಿಕೊಂಡು, ಆ ಮೂಲಕ ಬಂದಂತಹ ದೂರು, ಸಮಸ್ಯೆಗಳನ್ನು ಕೂಡಲೆ ಇತ್ಯರ್ಥ<br>ಪಡಿಸಬೇಕೆಂದು ಸೂಚಿಸಿದರು.</p><p>ರಸ್ತೆ ಬದಿ, ರಾಜಕಾಲುವೆಗಳ ಪಕ್ಕದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಭಗ್ನಾವಶೇಷಗಳನ್ನು ಹಾಕಿದರೆ ದಂಡ ವಿಧಿಸಬೇಕು. ಈ ಬಗ್ಗೆ ಘನತ್ಯಾಜ್ಯ ವಿಭಾಗವು ಸಕ್ರಿಯವಾಗಿ ನಿಗಾವಹಿ ಸಬೇಕು ಎಂದರು. ಯೋಜನಾ ವಿಭಾಗದ ವಿಶೇಷ ಆಯುಕ್ತ ಡಾ.ಕೆ.ಹರೀಶ್ ಕುಮಾರ್, ವಿಪತ್ತು ನಿರ್ವಹಣೆಯ ವಿಶೇಷ ಆಯುಕ್ತ ಸುರೋಳ್ಕರ್ ವಿಕಾಸ್ ಕಿಶೋರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಬಿಎಂಪಿಯ ವಿದ್ಯುತ್ ವಿಭಾಗದ ಎಂಜಿನಿಯರ್ಗಳು ಹಾಗೂ ಅಧಿಕಾರಿಗಳು ರಾತ್ರಿ 8.30ರವರೆಗೂ ಕಾರ್ಯನಿರ್ವಹಿಸಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶಿಸಿದ್ದಾರೆ.</p><p>ವಿದ್ಯುತ್ ವಿಭಾಗಕ್ಕೆ ಸಂಬಂಧಿಸಿದಂತೆ, ಸಾರ್ವಜನಿಕರ ವಲಯದಿಂದ ದೂರುಗಳು ಬರುತ್ತಿವೆ. ಈ ದೂರುಗಳು ಸಂಜೆ 6ರಿಂದ ರಾತ್ರಿ 9ರವರೆಗೆ ಹೆಚ್ಚು ಬರುತ್ತಿವೆ. ಬೀದಿ ದೀಪಗಳ ನಿರ್ವಹಣೆಗೆ ನಿಯೋಜಿಸಲ್ಪಟ್ಟ ಗುತ್ತಿಗೆದಾರರು ನಿಗದಿಪಡಿಸಲಾದ ಸಮಯಕ್ಕೆ ಅವುಗಳನ್ನು ಸರಿಪಡಿಸದಿರುವುದು ಕಂಡುಬಂದಿದೆ. ಬಿಬಿಎಂಪಿ ವಿದ್ಯುತ್ ವಿಭಾಗದ ಮೇಲುಸ್ತುವಾರಿಯಲ್ಲಿ ಕಾರ್ಯಕ್ಷಮತೆ ಇಲ್ಲದಿರುವುದು ಕಂಡುಬಂದಿದೆ.</p><p>ಆದ್ದರಿಂದ, ವಿದ್ಯುತ್ ವಿಭಾಗದ ಕಾರ್ಯ ಅವಧಿಯನ್ನು ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಹಾಗೂ ಸಂಜೆ 5ರಿಂದ ರಾತ್ರಿ 8.30ರವರೆಗೆ ನಿಗದಿಪಡಿಸಲಾಗಿದೆ. ವಿದ್ಯುತ್ ವಿಭಾಗದ ಎಲ್ಲ ಅಧೀಕ್ಷಕ ಎಂಜಿನಿಯರ್, ಕಾರ್ಯಪಾಲಕ ಎಂಜಿನಿಯರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಸಹಾಯಕ/ ಕಿರಿಯ ಎಂಜಿನಿಯರ್, ಗುತ್ತಿಗೆ ಎಂಜಿನಿಯರ್ಗಳು ಈ ಅವಧಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದ್ದಾರೆ.</p>.<p><strong>ಮಳೆ: ಮುಂಜಾಗ್ರತಾ ಕ್ರಮಕ್ಕೆ ಸೂಚನೆ</strong></p><p>ಬೆಂಗಳೂರು: ನಗರದಲ್ಲಿ ಮಳೆಗಾಲದ ವೇಳೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p><p>ಮೆಟ್ರೊ ಕಾಮಗಾರಿ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಮಳೆ ನೀರಿನ ಸರಾಗ ಹರಿವಿಗೆ ಕ್ರಮ ಕೈಗೊಳ್ಳಬೇಕು. ರಾಜಕಾಲುವೆ ಹಾಗೂ ರಸ್ತೆ ಬದಿ ಚರಂಡಿಗಳಲ್ಲಿ ಹೂಳನ್ನು ತ್ವರಿತಗತಿಯಲ್ಲಿ<br>ತೆರವುಗೊಳಿಸಬೇಕು. ಜೋರು ಮಳೆ ಸಮಯದಲ್ಲಿ ರಸ್ತೆಗಳ ಮೇಲೆ ಹೆಚ್ಚು ನೀರು ನಿಂತು ವಾಹನಗಳ ಸಂಚಾರಕ್ಕೆ ಹೆಚ್ಚು ಸಮಸ್ಯೆಯಾದಂತೆ ನೋಡಿಕೊಳ್ಳಬೇಕು ಎಂದರು.</p><p>ಮಳೆ ಸಂದರ್ಭದಲ್ಲಿ ಬಿದ್ದಂತಹ ಮರಗಳು ಹಾಗೂ ರೆಂಬೆ/ಕೊಂಬೆಗಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸಲು 28 ತಂಡಗಳು ಕಾರ್ಯನಿರ್ವಹಿಸುತ್ತಿವೆ. ಜೊತೆಗೆ ಹೆಚ್ಚುವರಿಯಾಗಿ 6 ತಂಡ ಗಳನ್ನು ನಿಯೋಜಿಸಲಾಗಿದೆ. ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ದೃಷ್ಠಿಯಿಂದ ವಲಯವಾರು 8 ದ್ವಿಚಕ್ರ ವಾಹನಗಳ ತಂಡಗಳನ್ನು ನಿಯೋಜಿಸಲಾಗುತ್ತಿದೆ ಎಂದು ಹೇಳಿದರು.</p><p>ಅಗ್ನಿಶಾಮಕ ಠಾಣೆ ಹಾಗೂ ಎಸ್.ಡಿ.ಆರ್.ಎಫ್ ಇಲಾಖೆಗಳ ಜೊತೆ ಆಯಾ ವಲಯ ಅಧಿಕಾರಿಗಳು ಸಂಪರ್ಕ ದಲ್ಲಿರಬೇಕು. ಬೆಸ್ಕಾಂ, ಜಲಮಂಡಳಿ ಸೇರಿದಂತೆ ಇನ್ನಿತರೆ ಇಲಾಖೆಗಳನ್ನು ಒಳಗೊಂಡಂತೆ ಆಯಾ ವಲಯದ ಉಪ ವಿಭಾಗವಾರು ವ್ಯಾಟ್ಸ್ಆ್ಯಪ್ ಗ್ರೂಪ್ ರಚಿಸಿಕೊಂಡು, ಆ ಮೂಲಕ ಬಂದಂತಹ ದೂರು, ಸಮಸ್ಯೆಗಳನ್ನು ಕೂಡಲೆ ಇತ್ಯರ್ಥ<br>ಪಡಿಸಬೇಕೆಂದು ಸೂಚಿಸಿದರು.</p><p>ರಸ್ತೆ ಬದಿ, ರಾಜಕಾಲುವೆಗಳ ಪಕ್ಕದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಭಗ್ನಾವಶೇಷಗಳನ್ನು ಹಾಕಿದರೆ ದಂಡ ವಿಧಿಸಬೇಕು. ಈ ಬಗ್ಗೆ ಘನತ್ಯಾಜ್ಯ ವಿಭಾಗವು ಸಕ್ರಿಯವಾಗಿ ನಿಗಾವಹಿ ಸಬೇಕು ಎಂದರು. ಯೋಜನಾ ವಿಭಾಗದ ವಿಶೇಷ ಆಯುಕ್ತ ಡಾ.ಕೆ.ಹರೀಶ್ ಕುಮಾರ್, ವಿಪತ್ತು ನಿರ್ವಹಣೆಯ ವಿಶೇಷ ಆಯುಕ್ತ ಸುರೋಳ್ಕರ್ ವಿಕಾಸ್ ಕಿಶೋರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>