‘ಬಿಬಿಎಂಪಿ ಅಧಿಕಾರಿಗಳು ಮತ್ತು ಸಿಬ್ಬಂದಿ ಅಯೋಗ್ಯರು, ಕೆಲಸ ಕಳ್ಳರು. ಅದಕ್ಕಾಗಿಯೇ ನನಗೆ ಈ ಹೊಣೆ ವಹಿಸಿರುವುದು. ನಿಮ್ಮನ್ನು ಅಮಾನತು ಮಾಡಿಸುತ್ತೇನೆ’ ಎನ್ನುವ ಮೂಲಕ ಮಂಜುಳಾ ಅವರು ಸಿಬ್ಬಂದಿಯ ತೇಜೋವಧೆ ಮಾಡಿದ್ದಾರೆ. ಇದರಿಂದ ಬಿಬಿಎಂಪಿ ಸಿಬ್ಬಂದಿಯ ಆತ್ಮಸ್ಥೈರ್ಯ ಕುಗ್ಗಿದೆ. ಅವರು ನೌಕರರ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿ ಸಂಘದ ಅಧ್ಯಕ್ಷ ಎ.ಅಮೃತರಾಜ್ ಹಾಗೂ ಪ್ರಧಾನ ಕಾರ್ಯದರ್ಶಿ ಎಚ್.ನಂಜಪ್ಪ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಅವರಿಗೆ ಪತ್ರ ಬರೆದಿದ್ದಾರೆ.