ರಸ್ತೆಗಳನ್ನು ಗುಂಡಿ ಮುಕ್ತಗೊಳಿಸಲು ವಲಯವಾರು ಕೈಗೊಂಡಿರುವ ಕ್ರಮಗಳ ಬಗ್ಗೆ ಹಲವಾರು ಪರಿಶೀಲನಾ ಸಭೆಗಳನ್ನು ನಡೆಸಲಾಗಿದೆ. ಮುಖ್ಯ ರಸ್ತೆಗಳು, ಉಪ ಮುಖ್ಯ ರಸ್ತೆಗಳು ಹಾಗೂ ವಾರ್ಡ್ ರಸ್ತೆಗಳನ್ನು ಮುಚ್ಚಲು ತ್ವರಿತ ಕ್ರಮ ಕೈಗೊಳ್ಳುವಂತೆ ಪಾಲಿಕೆಯ ಮುಖ್ಯ ಆಯುಕ್ತರು ಸೂಚಿಸಿದ್ದರು. ಎಲ್ಲ ರಸ್ತೆಗಳ ಗುಂಡಿ ಮುಚ್ಚುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ನಿರ್ದೇಶನ ನೀಡಿದ್ದರು. ಗುಂಡಿ ಮುಚ್ಚಲು ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ನಿರ್ಲಕ್ಷ್ಯ ತೋರಿದ ಆರೋಪದಲ್ಲಿ ಇದೀಗ ಎಂಜಿನಿಯರ್ಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.