ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡಲು ಆರಂಭಿಸಿದಾಗ ಮನೆಯಲ್ಲೇ ಪ್ರತ್ಯೇಕವಾಸಕ್ಕೆ ಒಳಗಾಗುವವರ ಮೇಲೆ ನಿಗಾವಹಿಸಲು ಹಿರಿಯ ಐಎಎಸ್ ಅಧಿಕಾರಿ ನೇತೃತ್ವದಲ್ಲಿ ವಿವಿಧ ತಂಡಗಳನ್ನು ರಚನೆ ಮಾಡಲಾಗಿತ್ತು.‘ಕೋವಿಡ್ ವ್ಯಾಪಿಸಲು ಆರಂಭಿಸಿದ ಸಂದರ್ಭದಲ್ಲಿ, ಹೊರ ರಾಜ್ಯಗಳಿಂದ ರೈಲು, ವಿಮಾನ, ರಸ್ತೆ ಮಾರ್ಗದಲ್ಲಿ ಬರುವವರರು ಮನೆಯಲ್ಲಿ ಪ್ರತ್ಯೇಕವಾಸಕ್ಕೆ ಒಳಗಾಗುತ್ತಿದ್ದಾರೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಲು ಹಾಗೂ ಅವರ ಮೇಲೆ ನಿಗಾವಹಿಸಲು ‘ನೆರೆಹೊರೆ ಆಸರೆ’ ತಂಡಗಳನ್ನು ರಚಿಸಲಾಗಿತ್ತು. ಈ ತಂಡಗಳಲ್ಲಿ ನಗರದ 26 ಸಾವಿರ ಮಂದಿ ಸ್ವಯಂಸೇವಕರಾಗಿ ಹೆಸರು ನೋಂದಾಯಿಸಿದ್ದರು.