<p><strong>ಬೆಂಗಳೂರು: </strong>ಕೋವಿಡ್ನಿಂದ ಮೃತಪಟ್ಟ ಸಿಬ್ಬಂದಿಗೆ ತಲಾ ₹ 30 ಲಕ್ಷ ಪರಿಹಾರ ನೀಡುವ ಸಲುವಾಗಿ ಬಿಬಿಎಂಪಿಯು ಅಧಿಕಾರಿಗಳ ತಂಡವನ್ನು ರಚಿಸಿದೆ.</p>.<p>ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ಈ ಕುರಿತು ಇದೇ 8ರಂದು ಆದೇಶ ಹೊರಡಿಸಿದ್ದಾರೆ. ಆಯಾ ವಲಯಗಳ ವಲಯ ಆಯುಕ್ತರು, ಜಂಟಿ ಆಯುಕ್ತರು ಹಾಗೂ ಆರೋಗ್ಯಾಧಿಕಾರಿಗಳು ಈ ತಂಡದಲ್ಲಿರಲಿದ್ದಾರೆ. ಕೋವಿಡ್ನಿಂದ ಸತ್ತ ಕಾಯಂ ನೌಕರರ ವಿವರಗಳನ್ನು ಪರಿಶೀಲಿಸಿ ಈ ತಂಡವು ಪರಿಹಾರ ಬಿಡುಗಡೆಗೆ ಕ್ರಮಕೈಗೊಳ್ಳಬೇಕು. ಪಿ–3558 ಭತ್ಯೆ ಮತ್ತು ಸೌಲಭ್ಯ ಲೆಕ್ಕ ಶೀರ್ಷಿಕೆಯಡಿ ಪರಿಹಾರದ ಮೊತ್ತ ಪಾವತಿಸಬೇಕು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಬಿಬಿಎಂಪಿ ಸಿಬ್ಬಂದಿ ಮುಂಚೂಣಿಯಲ್ಲಿದ್ದಾರೆ. ಕೋವಿಡ್ ನಿಯಂತ್ರಣ ಕಾರ್ಯದ ವೇಳೆ ಕರ್ತವ್ಯದಲ್ಲಿ ತೊಡಗಿದ್ದ 40ಕ್ಕೂ ಅಧಿಕ ಸಿಬ್ಬಂದಿಯನ್ನು ಬಿಬಿಎಂಪಿ ಕಳೆದುಕೊಂಡಿದೆ. ಯಾವ ಸಂತ್ರಸ್ತ ಕುಟುಂಬಕ್ಕೂ ಪರಿಹಾರ ಕೈಸೇರಿಲ್ಲ.</p>.<p>‘ಪ್ರಜಾವಾಣಿ‘ಯು ಮೇ 18ರ ಸಂಚಿಕೆಯಲ್ಲಿ <a href="https://www.prajavani.net/district/bengaluru-city/bmp-covid-19-compensation-still-not-received-many-831888.html" target="_blank">‘10 ತಿಂಗಳು ಅಲೆದರೂ ಸಿಕ್ಕಿಲ್ಲ ಕೋವಿಡ್ ಪರಿಹಾರ’</a> ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು. ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುವುದಾಗಿ ಗೌರವ್ ಗುಪ್ತ ಭರವಸೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೋವಿಡ್ನಿಂದ ಮೃತಪಟ್ಟ ಸಿಬ್ಬಂದಿಗೆ ತಲಾ ₹ 30 ಲಕ್ಷ ಪರಿಹಾರ ನೀಡುವ ಸಲುವಾಗಿ ಬಿಬಿಎಂಪಿಯು ಅಧಿಕಾರಿಗಳ ತಂಡವನ್ನು ರಚಿಸಿದೆ.</p>.<p>ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ಈ ಕುರಿತು ಇದೇ 8ರಂದು ಆದೇಶ ಹೊರಡಿಸಿದ್ದಾರೆ. ಆಯಾ ವಲಯಗಳ ವಲಯ ಆಯುಕ್ತರು, ಜಂಟಿ ಆಯುಕ್ತರು ಹಾಗೂ ಆರೋಗ್ಯಾಧಿಕಾರಿಗಳು ಈ ತಂಡದಲ್ಲಿರಲಿದ್ದಾರೆ. ಕೋವಿಡ್ನಿಂದ ಸತ್ತ ಕಾಯಂ ನೌಕರರ ವಿವರಗಳನ್ನು ಪರಿಶೀಲಿಸಿ ಈ ತಂಡವು ಪರಿಹಾರ ಬಿಡುಗಡೆಗೆ ಕ್ರಮಕೈಗೊಳ್ಳಬೇಕು. ಪಿ–3558 ಭತ್ಯೆ ಮತ್ತು ಸೌಲಭ್ಯ ಲೆಕ್ಕ ಶೀರ್ಷಿಕೆಯಡಿ ಪರಿಹಾರದ ಮೊತ್ತ ಪಾವತಿಸಬೇಕು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಬಿಬಿಎಂಪಿ ಸಿಬ್ಬಂದಿ ಮುಂಚೂಣಿಯಲ್ಲಿದ್ದಾರೆ. ಕೋವಿಡ್ ನಿಯಂತ್ರಣ ಕಾರ್ಯದ ವೇಳೆ ಕರ್ತವ್ಯದಲ್ಲಿ ತೊಡಗಿದ್ದ 40ಕ್ಕೂ ಅಧಿಕ ಸಿಬ್ಬಂದಿಯನ್ನು ಬಿಬಿಎಂಪಿ ಕಳೆದುಕೊಂಡಿದೆ. ಯಾವ ಸಂತ್ರಸ್ತ ಕುಟುಂಬಕ್ಕೂ ಪರಿಹಾರ ಕೈಸೇರಿಲ್ಲ.</p>.<p>‘ಪ್ರಜಾವಾಣಿ‘ಯು ಮೇ 18ರ ಸಂಚಿಕೆಯಲ್ಲಿ <a href="https://www.prajavani.net/district/bengaluru-city/bmp-covid-19-compensation-still-not-received-many-831888.html" target="_blank">‘10 ತಿಂಗಳು ಅಲೆದರೂ ಸಿಕ್ಕಿಲ್ಲ ಕೋವಿಡ್ ಪರಿಹಾರ’</a> ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು. ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುವುದಾಗಿ ಗೌರವ್ ಗುಪ್ತ ಭರವಸೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>