ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ಹೆಸರಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮೊಬೈಲ್ ಸಂದೇಶ ಕಳುಹಿಸುತ್ತಿದ್ದು, ಈ ಸಂಬಂಧ ಹಲಸೂರು ಗೇಟ್ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘8076618135 ಮೊಬೈಲ್ ಸಂಖ್ಯೆಯಿಂದ ಅನುಮತಿಯಿಲ್ಲದೆ ಡಿ.ಪಿಗೆ ನನ್ನ ಭಾವಚಿತ್ರ ಅಳವಡಿಸಿಕೊಂಡು ಬಿಬಿಎಂಪಿಯ ಸಹೋದ್ಯೋಗಿಗಳಿಗೆ ತಪ್ಪಾಗಿ ಸಂದೇಶ ರವಾನಿಸುತ್ತಿದ್ದಾನೆ. ಆ ವ್ಯಕ್ತಿಗೂ ನನಗೂ ಯಾವುದೇ ಸಂಬಂಧ ಇಲ್ಲ’ ಎಂದು ದೂರಿನಲ್ಲಿ ಆಯುಕ್ತರು ಉಲ್ಲೇಖಿಸಿದ್ದಾರೆ.
‘ಆಯುಕ್ತರ ಸಹೋದ್ಯೋಗಿಗೆ ಕಳುಹಿಸಿದ ಸಂದೇಶದ ಸ್ಕ್ರೀನ್ಶಾಟ್ ಅನ್ನು ನೀಡಿದ್ದಾರೆ. ದಾಖಲೆ ಆಧರಿಸಿ ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.