ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BBMP ಮುಖ್ಯ ಆಯುಕ್ತರ ಹೆಸರಿನಲ್ಲಿ ಸಂದೇಶ ರವಾನೆ

Last Updated 5 ಅಕ್ಟೋಬರ್ 2022, 20:32 IST
ಅಕ್ಷರ ಗಾತ್ರ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರ ಹೆಸರಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮೊಬೈಲ್‌ ಸಂದೇಶ ಕಳುಹಿಸುತ್ತಿದ್ದು, ಈ ಸಂಬಂಧ ಹಲಸೂರು ಗೇಟ್‌ ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘8076618135 ಮೊಬೈಲ್‌ ಸಂಖ್ಯೆಯಿಂದ ಅನುಮತಿಯಿಲ್ಲದೆ ಡಿ.ಪಿಗೆ ನನ್ನ ಭಾವಚಿತ್ರ ಅಳವಡಿಸಿಕೊಂಡು ಬಿಬಿಎಂಪಿಯ ಸಹೋದ್ಯೋಗಿಗಳಿಗೆ ತಪ್ಪಾಗಿ ಸಂದೇಶ ರವಾನಿಸುತ್ತಿದ್ದಾನೆ. ಆ ವ್ಯಕ್ತಿಗೂ ನನಗೂ ಯಾವುದೇ ಸಂಬಂಧ ಇಲ್ಲ’ ಎಂದು ದೂರಿನಲ್ಲಿ ಆಯುಕ್ತರು ಉಲ್ಲೇಖಿಸಿದ್ದಾರೆ.

‘ಆಯುಕ್ತರ ಸಹೋದ್ಯೋಗಿಗೆ ಕಳುಹಿಸಿದ ಸಂದೇಶದ ಸ್ಕ್ರೀನ್‌ಶಾಟ್‌ ಅನ್ನು ನೀಡಿದ್ದಾರೆ. ದಾಖಲೆ ಆಧರಿಸಿ ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT