‘ಹೆಬ್ಬಾಳ ಬಸ್ ನಿಲ್ದಾಣಕ್ಕೆ ಹೊಂದಿಕೊಂಡು ಕೆಳಸೇತುವೆ ಇದ್ದು, ಅದರ ಮೂಲಕವೇ ಪಾದಚಾರಿಗಳು ರಸ್ತೆ ದಾಟುತ್ತಿದ್ದರು. ಆದರೆ, ಭಾನುವಾರ ರಾತ್ರಿ ಸುರಿದ ಮಳೆಯಿಂದಾಗಿ ಕೆಳಸೇತುವೆಯಲ್ಲಿ ನೀರು ನಿಂತುಕೊಂಡಿತ್ತು. ಜನರು ಓಡಾಡುವ ಸ್ಥಿತಿ ಇರಲಿಲ್ಲ. ಹೀಗಾಗಿ, ಜನರೆಲ್ಲರೂ ಪ್ರಮುಖ ರಸ್ತೆಯಲ್ಲೇ ನಡೆದುಕೊಂಡು, ರಸ್ತೆ ದಾಟುತ್ತಿದ್ದರು. ರಸ್ತೆ ದಾಟುವ ವೇಳೆಯಲ್ಲೇ ವೇಗವಾಗಿ ಬಂದ ಲಾರಿ, ಬಾಲಕಿ ಸೇರಿ ಮೂವರಿಗೆ ಗುದ್ದಿತ್ತು. ಜೊತೆಗೆ ಬೈಕ್ಗೂ ಲಾರಿ ಡಿಕ್ಕಿ ಹೊಡೆದಿದ್ದು, ಅದರ ಸವಾರ ಗಾಯಗೊಂಡಿದ್ದಾರೆ. ಆರ್.ಟಿ.ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.