ಬೆಂಗಳೂರು: ಹೆಬ್ಬಾಳ ಕಣಿವೆ ವ್ಯಾಪ್ತಿಯಲ್ಲಿರುವ ಮಾನ್ಯತಾ ಟೆಕ್ ಪಾರ್ಕ್, ರಾಚೇನಹಳ್ಳಿ ಕೆರೆ, ಹೆಣ್ಣೂರು ರೈಲ್ವೆ ಸೇತುವೆ ಹಾಗೂ ಇನ್ನಿತರ ಮಳೆಹಾನಿ ಪ್ರದೇಶಗಳಿಗೆ ಬಿಬಿಎಂಪಿ ಆಡಳಿತಾಧಿಕಾರಿ ಗೌರವ ಗುಪ್ತ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆ ನೀರಿನಿಂದ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.