<p><strong>ಬೆಂಗಳೂರು: </strong>ಹೆಬ್ಬಾಳ ಕಣಿವೆ ವ್ಯಾಪ್ತಿಯಲ್ಲಿರುವ ಮಾನ್ಯತಾ ಟೆಕ್ ಪಾರ್ಕ್, ರಾಚೇನಹಳ್ಳಿ ಕೆರೆ, ಹೆಣ್ಣೂರು ರೈಲ್ವೆ ಸೇತುವೆ ಹಾಗೂ ಇನ್ನಿತರ ಮಳೆಹಾನಿ ಪ್ರದೇಶಗಳಿಗೆ ಬಿಬಿಎಂಪಿ ಆಡಳಿತಾಧಿಕಾರಿ ಗೌರವ ಗುಪ್ತ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆ ನೀರಿನಿಂದ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>‘ಜವಹರಲಾಲ್ ನೆಹರೂ ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರದ ಬಳಿ ಮಳೆಯಾದರೆ ನೀರು ತುಂಬಿಕೊಳ್ಳುತ್ತದೆ. 2-3 ಗಂಟೆಗಳ ಕಾಲ ರಸ್ತೆ ಮೇಲೆ ನೀರು ನಿಂತಿರುತ್ತದೆ. ಇದರಿಂದ ಸಮಸ್ಯೆ ಆಗುತ್ತಿದೆ’ ಎಂದು ಸ್ಥಳೀಯ ನಿವಾಸಿಗಳು ಆಡಳಿತಾಧಿಕಾರಿ ಬಳಿ ಸಮಸ್ಯೆ ಹೇಳಿಕೊಂಡರು.</p>.<p>‘ಮಳೆಯಾದರೆ ಅಮೃತಹಳ್ಳಿ ಕೆರೆಯಿಂದ ರಾಚೇನಹಳ್ಳಿ ಕೆರೆಗೆ ಸಂಪರ್ಕ ಕಲ್ಪಿಸುವ ರಾಜಕಾಲುವೆಯಲ್ಲಿ ಹೆಚ್ಚು ನೀರು ಹರಿಯುತ್ತದೆ. ಸುತ್ತಮುತ್ತಲಿನ ಪ್ರದೇಶಗಳು ಜಲಾವೃತವಾಗುತ್ತವೆ. ನೀರಿನ ದಿಕ್ಕು ಬದಲಿಸುವ ನಾಲೆ ನಿರ್ಮಿಸಿದರೆ ಸಮಸ್ಯೆ ಬಗೆಹರಿಯಲಿದೆ’ ಎಂದು ಪಾಲಿಕೆಯ ಕೆರೆ ವಿಭಾಗದ ಮುಖ್ಯ ಎಂಜಿನಿಯರ್ ರಮೇಶ್ತಿಳಿಸಿದರು.</p>.<p>‘ಜಲಮಂಡಳಿ, ಕೆರೆ, ರಾಜಕಾಲುವೆಗೆ ಸಂಬಂಧಿಸಿದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸಮನ್ವಯದಿಂದ ಕೆಲಸ ಮಾಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ತ್ವರಿತವಾಗಿ ಸಮಸ್ಯೆ ಬಗೆಹರಿಸಬೇಕು’ ಎಂದು ಗೌರವ ಗುಪ್ತ ಸೂಚನೆ ನೀಡಿದರು.</p>.<p><strong>ಎಂಬೆಸ್ಸಿ ಗ್ರೂಪ್ಗೆ ಎಚ್ಚರಿಕೆ</strong><br />ಮಾನ್ಯತಾ ಟೆಕ್ ಪಾರ್ಕ್ ಬಳಿ ನಾಲೆ ಮೇಲೆ ಚಾವಣಿ ನಿರ್ಮಿಸಿರುವುದನ್ನು ತೆರವುಗೊಳಿಸುವಂತೆ ಎಂಬೆಸ್ಸಿ ಗ್ರೂಪ್ಗೆ ಗೌರವ ಗುಪ್ತ ಸೂಚನೆ ನೀಡಿದರು.</p>.<p>ಮಳೆಯಿಂದ ಜಲಾವೃತಗೊಂಡಿದ್ದಮಾನ್ಯತಾ ಟೆಕ್ ಪಾರ್ಕ್ಸುತ್ತಮುತ್ತಲಿನ ಪ್ರದೇಶ ಪರಿಶೀಲನೆ ವೇಳೆ ‘ಹೆಬ್ಬಾಳ ಕೆರೆ ಹಾಗೂ ರಾಚೇನಹಳ್ಳಿ ಕೆರೆ ನೀರು ಹೆಬ್ಬಾಳ ಕಣಿವೆ ಮೂಲಕ ಸಾಗುತ್ತದೆ. ನಾಲೆ ಮೇಲೆ ಚಾವಣಿ ಅಳವಡಿಸಿರುವ ಕಾರಣ ಹೂಳು ತೆಗೆಯಲು ಸಮಸ್ಯೆ ಆಗುತ್ತಿದೆ’ ಎಂದು ಕೆರೆ ವಿಭಾಗದ ಎಂಜಿನಿಯರ್ಗಳು ತಿಳಿಸಿದರು.</p>.<p>‘ಎಂಬೆಸ್ಸಿ ಗ್ರೂಪ್ನವರೇ ಮೇಲ್ಚಾವಣಿ ತೆರವುಗೊಳಿಸಿ ಮರುವಿನ್ಯಾಸಗೊಳಿಸಬೇಕು. ಒಂದು ವಾರದಲ್ಲಿ ಅವರು ಕ್ರಿಯಾಯೋಜನೆ ರೂಪಿಸಬೇಕು. ಇಲ್ಲದಿದ್ದರೆ ಪಾಲಿಕೆಯಿಂದ ಮೇಲ್ಚಾವಣಿ ತೆರವುಗೊಳಿಸಿ ಅದಕ್ಕೆ ತಗಲುವ ಮೊತ್ತದ ದುಪ್ಪಟ್ಟು ದಂಡ ವಸೂಲು ಮಾಡಿ’ ಎಂದು ಸೂಚನೆ ನೀಡಿದರು.</p>.<p>ಸೆಪರೇಟರ್ ಕಾಮಗಾರಿಯನ್ನೂ ಇದೇ ವೇಳೆ ತಪಾಸಣೆ ನಡೆಸಿದರು. ‘ರೈಲ್ವೆ ಹಳಿ ಕೆಳಗೆ ಎರಡು ಸೇತುವೆ ನಿರ್ಮಿಸಿದರೆ ಸಮಸ್ಯೆ ಬಗೆಹರಿಯಲಿದೆ’ ಎಂದು ರಾಜಕಾಲುವೆ ವಿಭಾಗದ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಮಾಹಿತಿ ನೀಡಿದರು.</p>.<p>ರೈಲ್ವೆ ಇಲಾಖೆ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮಾತನಾಡಿದ ಗೌರವ ಗುಪ್ತ, ಸಮಸ್ಯೆ ಬಗ್ಗೆ ಮನವರಿಕೆ ಮಾಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಹೆಬ್ಬಾಳ ಕಣಿವೆ ವ್ಯಾಪ್ತಿಯಲ್ಲಿರುವ ಮಾನ್ಯತಾ ಟೆಕ್ ಪಾರ್ಕ್, ರಾಚೇನಹಳ್ಳಿ ಕೆರೆ, ಹೆಣ್ಣೂರು ರೈಲ್ವೆ ಸೇತುವೆ ಹಾಗೂ ಇನ್ನಿತರ ಮಳೆಹಾನಿ ಪ್ರದೇಶಗಳಿಗೆ ಬಿಬಿಎಂಪಿ ಆಡಳಿತಾಧಿಕಾರಿ ಗೌರವ ಗುಪ್ತ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆ ನೀರಿನಿಂದ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>‘ಜವಹರಲಾಲ್ ನೆಹರೂ ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರದ ಬಳಿ ಮಳೆಯಾದರೆ ನೀರು ತುಂಬಿಕೊಳ್ಳುತ್ತದೆ. 2-3 ಗಂಟೆಗಳ ಕಾಲ ರಸ್ತೆ ಮೇಲೆ ನೀರು ನಿಂತಿರುತ್ತದೆ. ಇದರಿಂದ ಸಮಸ್ಯೆ ಆಗುತ್ತಿದೆ’ ಎಂದು ಸ್ಥಳೀಯ ನಿವಾಸಿಗಳು ಆಡಳಿತಾಧಿಕಾರಿ ಬಳಿ ಸಮಸ್ಯೆ ಹೇಳಿಕೊಂಡರು.</p>.<p>‘ಮಳೆಯಾದರೆ ಅಮೃತಹಳ್ಳಿ ಕೆರೆಯಿಂದ ರಾಚೇನಹಳ್ಳಿ ಕೆರೆಗೆ ಸಂಪರ್ಕ ಕಲ್ಪಿಸುವ ರಾಜಕಾಲುವೆಯಲ್ಲಿ ಹೆಚ್ಚು ನೀರು ಹರಿಯುತ್ತದೆ. ಸುತ್ತಮುತ್ತಲಿನ ಪ್ರದೇಶಗಳು ಜಲಾವೃತವಾಗುತ್ತವೆ. ನೀರಿನ ದಿಕ್ಕು ಬದಲಿಸುವ ನಾಲೆ ನಿರ್ಮಿಸಿದರೆ ಸಮಸ್ಯೆ ಬಗೆಹರಿಯಲಿದೆ’ ಎಂದು ಪಾಲಿಕೆಯ ಕೆರೆ ವಿಭಾಗದ ಮುಖ್ಯ ಎಂಜಿನಿಯರ್ ರಮೇಶ್ತಿಳಿಸಿದರು.</p>.<p>‘ಜಲಮಂಡಳಿ, ಕೆರೆ, ರಾಜಕಾಲುವೆಗೆ ಸಂಬಂಧಿಸಿದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸಮನ್ವಯದಿಂದ ಕೆಲಸ ಮಾಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ತ್ವರಿತವಾಗಿ ಸಮಸ್ಯೆ ಬಗೆಹರಿಸಬೇಕು’ ಎಂದು ಗೌರವ ಗುಪ್ತ ಸೂಚನೆ ನೀಡಿದರು.</p>.<p><strong>ಎಂಬೆಸ್ಸಿ ಗ್ರೂಪ್ಗೆ ಎಚ್ಚರಿಕೆ</strong><br />ಮಾನ್ಯತಾ ಟೆಕ್ ಪಾರ್ಕ್ ಬಳಿ ನಾಲೆ ಮೇಲೆ ಚಾವಣಿ ನಿರ್ಮಿಸಿರುವುದನ್ನು ತೆರವುಗೊಳಿಸುವಂತೆ ಎಂಬೆಸ್ಸಿ ಗ್ರೂಪ್ಗೆ ಗೌರವ ಗುಪ್ತ ಸೂಚನೆ ನೀಡಿದರು.</p>.<p>ಮಳೆಯಿಂದ ಜಲಾವೃತಗೊಂಡಿದ್ದಮಾನ್ಯತಾ ಟೆಕ್ ಪಾರ್ಕ್ಸುತ್ತಮುತ್ತಲಿನ ಪ್ರದೇಶ ಪರಿಶೀಲನೆ ವೇಳೆ ‘ಹೆಬ್ಬಾಳ ಕೆರೆ ಹಾಗೂ ರಾಚೇನಹಳ್ಳಿ ಕೆರೆ ನೀರು ಹೆಬ್ಬಾಳ ಕಣಿವೆ ಮೂಲಕ ಸಾಗುತ್ತದೆ. ನಾಲೆ ಮೇಲೆ ಚಾವಣಿ ಅಳವಡಿಸಿರುವ ಕಾರಣ ಹೂಳು ತೆಗೆಯಲು ಸಮಸ್ಯೆ ಆಗುತ್ತಿದೆ’ ಎಂದು ಕೆರೆ ವಿಭಾಗದ ಎಂಜಿನಿಯರ್ಗಳು ತಿಳಿಸಿದರು.</p>.<p>‘ಎಂಬೆಸ್ಸಿ ಗ್ರೂಪ್ನವರೇ ಮೇಲ್ಚಾವಣಿ ತೆರವುಗೊಳಿಸಿ ಮರುವಿನ್ಯಾಸಗೊಳಿಸಬೇಕು. ಒಂದು ವಾರದಲ್ಲಿ ಅವರು ಕ್ರಿಯಾಯೋಜನೆ ರೂಪಿಸಬೇಕು. ಇಲ್ಲದಿದ್ದರೆ ಪಾಲಿಕೆಯಿಂದ ಮೇಲ್ಚಾವಣಿ ತೆರವುಗೊಳಿಸಿ ಅದಕ್ಕೆ ತಗಲುವ ಮೊತ್ತದ ದುಪ್ಪಟ್ಟು ದಂಡ ವಸೂಲು ಮಾಡಿ’ ಎಂದು ಸೂಚನೆ ನೀಡಿದರು.</p>.<p>ಸೆಪರೇಟರ್ ಕಾಮಗಾರಿಯನ್ನೂ ಇದೇ ವೇಳೆ ತಪಾಸಣೆ ನಡೆಸಿದರು. ‘ರೈಲ್ವೆ ಹಳಿ ಕೆಳಗೆ ಎರಡು ಸೇತುವೆ ನಿರ್ಮಿಸಿದರೆ ಸಮಸ್ಯೆ ಬಗೆಹರಿಯಲಿದೆ’ ಎಂದು ರಾಜಕಾಲುವೆ ವಿಭಾಗದ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಮಾಹಿತಿ ನೀಡಿದರು.</p>.<p>ರೈಲ್ವೆ ಇಲಾಖೆ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮಾತನಾಡಿದ ಗೌರವ ಗುಪ್ತ, ಸಮಸ್ಯೆ ಬಗ್ಗೆ ಮನವರಿಕೆ ಮಾಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>