<p><strong>ಬೆಂಗಳೂರು: </strong>ಬಿಬಿಎಂಪಿ ವತಿಯಿಂದ ನೀಡುವ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಕುರಿತು ಟೀಕೆ ವ್ಯಕ್ತವಾದ ಬಳಿಕ ಎಚ್ಚೆತ್ತುಕೊಂಡಿರುವ ಪಾಲಿಕೆ, ಈ ಗೌರವಕ್ಕೆ ಅರ್ಹರನ್ನು ಆಯ್ಕೆ ಮಾಡಲು ಮಾನದಂಡ ರೂಪಿಸಲು ಮುಂದಾಗಿದೆ.</p>.<p>ಅರ್ಹರಿಗೆ ಮಾತ್ರ ಈ ಪ್ರಶಸ್ತಿ ಸಲ್ಲಿಕೆ ಆಗುವಂತೆ ನೋಡಿಕೊಳ್ಳುವ ಸಲುವಾಗಿ ಆಯ್ಕೆ ಸಮಿತಿ ರಚಿಸುವ ಪ್ರಸ್ತಾಪವೂ ಪಾಲಿಕೆ ಮುಂದಿದೆ.</p>.<p>ಸ್ವತಃ ಮೇಯರ್ ಅವರೇ ಈ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡುತ್ತಾರೆ. ವರ್ಷದಲ್ಲಿ ಇಂತಿಷ್ಟೇ ಮಂದಿಗೆ ಈ ಪ್ರಶಸ್ತಿ ನೀಡಬೇಕು ಎಂಬ ಮಿತಿ ಇಲ್ಲ. ಪ್ರಶಸ್ತಿ ಪಡೆಯುವುದಕ್ಕೆ ಯಾವ ಕ್ಷೇತ್ರದಲ್ಲಿ ಸಾಧನೆ ಮಾಡಿರಬೇಕು ಎಂಬ ಬಗ್ಗೆ ನಿರ್ದಿಷ್ಟ ಮಾನದಂಡವನ್ನು ಪಾಲಿಕೆ ಹೊಂದಿಲ್ಲ. ಹಾಗಾಗಿ ವರ್ಷ ವರ್ಷವೂ ಈ ಪ್ರಶಸ್ತಿ ಪಡೆಯುವವರ ಸಂಖ್ಯೆ ಬೆಳೆಯುತ್ತಲೇ ಇದೆ.</p>.<p>ಪ್ರಶಸ್ತಿಗೆ ಆಯ್ಕೆ ಆದವರ ಪಟ್ಟಿ ಪ್ರಕಟ ಆದ ಬಳಿವೂ ಪಾಲಿಕೆ ಸದಸ್ಯರು ಹಾಗೂ ರಾಜಕೀಯ ಮುಖಂಡರು ಮೇಯರ್ ಮೇಲೆ ಒತ್ತಡ ಹೇರಿ ತಮಗೆ ಬೇಕಾದವರ ಹೆಸರುಗಳನ್ನು ಕೊನೆಕ್ಷಣದಲ್ಲಿ ಸೇರಿಸುತ್ತಿದ್ದರು. ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದ್ದಂತೆಯೇ ವೇದಿಕೆಯಲ್ಲೇ ಹೊಸ ಹೆಸರುಗಳನ್ನು ಸೇರ್ಪಡೆ ಮಾಡಲಾಗುತ್ತಿತ್ತು.</p>.<p>ಪ್ರಶಸ್ತಿ ಪ್ರದಾನ ಸಮಾರಂಭವೂ ಶಿಸ್ತಿನಿಂದ ನಡೆಯುತ್ತಿರಲಿಲ್ಲ. ಪ್ರಶಸ್ತಿ ಪುರಸ್ಕೃತರನ್ನು ಗೌರವಯುತವಾಗಿ ನಡೆಸಿಕೊಳ್ಳುವ ವ್ಯವಸ್ಥೆಯನ್ನೂ ಪಾಲಿಕೆ ಮಾಡುತ್ತಿರಲಿಲ್ಲ. ನಿಜವಾದ ಅರ್ಹತೆಯಿಂದ ಈ ಪ್ರಶಸ್ತಿಗೆ ಆಯ್ಕೆ ಆದವರಿಗೆ ಈ ಎಲ್ಲ ಗೊಂದಲಗಳು ಮುಜುಗರವನ್ನುಂಟು ಮಾಡುತ್ತಿದ್ದವು.</p>.<p>2018ನೇ ಸಾಲಿನ ಪ್ರಶಸ್ತಿಗೆ 500ಕ್ಕೂ ಅಧಿಕ ಮಂದಿಯನ್ನು ಆಯ್ಕೆ ಮಾಡಲಾಗಿತ್ತು. ಈ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭ ನಡೆದ ಬಳಿಕ ಕೆಲವು ಸಾಹಿತಿಗಳು ಹಾಗೂ ರಂಗಕರ್ಮಿಗಳು ಈ ಅವ್ಯವಸ್ಥೆ ಬಗ್ಗೆ ಬಹಿರಂಗವಾಗಿಯೇ ದನಿ ಎತ್ತಿದ್ದರು.</p>.<p>ಪಾಲಿಕೆ ಆಡಳಿತ ಪಕ್ಷದ ನಾಯಕ ಎಂ.ಶಿವರಾಜ್ ಅವರು ಈ ಪ್ರಶಸ್ತಿಗೆ ಮಾನದಂಡಗಳನ್ನು ರೂಪಿಸುವ ಬಗ್ಗೆ ಬೆಂಗಳೂರು ಅಭಿವೃದ್ಧಿ ಸಚಿವ ಜಿ.ಪರಮೇಶ್ವರ ಅವರಿಗೆ ಶುಕ್ರವಾರ ಪತ್ರ ಬರೆದಿದ್ದಾರೆ.</p>.<p>‘ಅರ್ಹರನ್ನು ಆಯ್ಕೆ ಮಾಡಲು ಸಮಿತಿಯನ್ನು ರಚಿಸಬೇಕು. ಸರ್ಕಾರದ ಮಟ್ಟದಲ್ಲಿ ಇದಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಿಬಿಎಂಪಿ ವತಿಯಿಂದ ನೀಡುವ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಕುರಿತು ಟೀಕೆ ವ್ಯಕ್ತವಾದ ಬಳಿಕ ಎಚ್ಚೆತ್ತುಕೊಂಡಿರುವ ಪಾಲಿಕೆ, ಈ ಗೌರವಕ್ಕೆ ಅರ್ಹರನ್ನು ಆಯ್ಕೆ ಮಾಡಲು ಮಾನದಂಡ ರೂಪಿಸಲು ಮುಂದಾಗಿದೆ.</p>.<p>ಅರ್ಹರಿಗೆ ಮಾತ್ರ ಈ ಪ್ರಶಸ್ತಿ ಸಲ್ಲಿಕೆ ಆಗುವಂತೆ ನೋಡಿಕೊಳ್ಳುವ ಸಲುವಾಗಿ ಆಯ್ಕೆ ಸಮಿತಿ ರಚಿಸುವ ಪ್ರಸ್ತಾಪವೂ ಪಾಲಿಕೆ ಮುಂದಿದೆ.</p>.<p>ಸ್ವತಃ ಮೇಯರ್ ಅವರೇ ಈ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡುತ್ತಾರೆ. ವರ್ಷದಲ್ಲಿ ಇಂತಿಷ್ಟೇ ಮಂದಿಗೆ ಈ ಪ್ರಶಸ್ತಿ ನೀಡಬೇಕು ಎಂಬ ಮಿತಿ ಇಲ್ಲ. ಪ್ರಶಸ್ತಿ ಪಡೆಯುವುದಕ್ಕೆ ಯಾವ ಕ್ಷೇತ್ರದಲ್ಲಿ ಸಾಧನೆ ಮಾಡಿರಬೇಕು ಎಂಬ ಬಗ್ಗೆ ನಿರ್ದಿಷ್ಟ ಮಾನದಂಡವನ್ನು ಪಾಲಿಕೆ ಹೊಂದಿಲ್ಲ. ಹಾಗಾಗಿ ವರ್ಷ ವರ್ಷವೂ ಈ ಪ್ರಶಸ್ತಿ ಪಡೆಯುವವರ ಸಂಖ್ಯೆ ಬೆಳೆಯುತ್ತಲೇ ಇದೆ.</p>.<p>ಪ್ರಶಸ್ತಿಗೆ ಆಯ್ಕೆ ಆದವರ ಪಟ್ಟಿ ಪ್ರಕಟ ಆದ ಬಳಿವೂ ಪಾಲಿಕೆ ಸದಸ್ಯರು ಹಾಗೂ ರಾಜಕೀಯ ಮುಖಂಡರು ಮೇಯರ್ ಮೇಲೆ ಒತ್ತಡ ಹೇರಿ ತಮಗೆ ಬೇಕಾದವರ ಹೆಸರುಗಳನ್ನು ಕೊನೆಕ್ಷಣದಲ್ಲಿ ಸೇರಿಸುತ್ತಿದ್ದರು. ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದ್ದಂತೆಯೇ ವೇದಿಕೆಯಲ್ಲೇ ಹೊಸ ಹೆಸರುಗಳನ್ನು ಸೇರ್ಪಡೆ ಮಾಡಲಾಗುತ್ತಿತ್ತು.</p>.<p>ಪ್ರಶಸ್ತಿ ಪ್ರದಾನ ಸಮಾರಂಭವೂ ಶಿಸ್ತಿನಿಂದ ನಡೆಯುತ್ತಿರಲಿಲ್ಲ. ಪ್ರಶಸ್ತಿ ಪುರಸ್ಕೃತರನ್ನು ಗೌರವಯುತವಾಗಿ ನಡೆಸಿಕೊಳ್ಳುವ ವ್ಯವಸ್ಥೆಯನ್ನೂ ಪಾಲಿಕೆ ಮಾಡುತ್ತಿರಲಿಲ್ಲ. ನಿಜವಾದ ಅರ್ಹತೆಯಿಂದ ಈ ಪ್ರಶಸ್ತಿಗೆ ಆಯ್ಕೆ ಆದವರಿಗೆ ಈ ಎಲ್ಲ ಗೊಂದಲಗಳು ಮುಜುಗರವನ್ನುಂಟು ಮಾಡುತ್ತಿದ್ದವು.</p>.<p>2018ನೇ ಸಾಲಿನ ಪ್ರಶಸ್ತಿಗೆ 500ಕ್ಕೂ ಅಧಿಕ ಮಂದಿಯನ್ನು ಆಯ್ಕೆ ಮಾಡಲಾಗಿತ್ತು. ಈ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭ ನಡೆದ ಬಳಿಕ ಕೆಲವು ಸಾಹಿತಿಗಳು ಹಾಗೂ ರಂಗಕರ್ಮಿಗಳು ಈ ಅವ್ಯವಸ್ಥೆ ಬಗ್ಗೆ ಬಹಿರಂಗವಾಗಿಯೇ ದನಿ ಎತ್ತಿದ್ದರು.</p>.<p>ಪಾಲಿಕೆ ಆಡಳಿತ ಪಕ್ಷದ ನಾಯಕ ಎಂ.ಶಿವರಾಜ್ ಅವರು ಈ ಪ್ರಶಸ್ತಿಗೆ ಮಾನದಂಡಗಳನ್ನು ರೂಪಿಸುವ ಬಗ್ಗೆ ಬೆಂಗಳೂರು ಅಭಿವೃದ್ಧಿ ಸಚಿವ ಜಿ.ಪರಮೇಶ್ವರ ಅವರಿಗೆ ಶುಕ್ರವಾರ ಪತ್ರ ಬರೆದಿದ್ದಾರೆ.</p>.<p>‘ಅರ್ಹರನ್ನು ಆಯ್ಕೆ ಮಾಡಲು ಸಮಿತಿಯನ್ನು ರಚಿಸಬೇಕು. ಸರ್ಕಾರದ ಮಟ್ಟದಲ್ಲಿ ಇದಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>