ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ: ವಲಯಕ್ಕೊಂದು ಶ್ರದ್ಧಾಂಜಲಿ ವಾಹನ

Last Updated 2 ಜುಲೈ 2020, 20:59 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ನಿಂದ ಕೊನೆಯುಸಿರೆಳೆದವರ ಮೃತದೇಹ ಕೊಂಡೊಯ್ಯಲು ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರತಿ ವಲಯಕ್ಕೊಂದರಂತೆ ಎಂಟು ಶ್ರದ್ಧಾಂಜಲಿ ವಾಹನಗಳಿವೆ. ಪ್ರತಿ ವಾಹನಕ್ಕೂ ಚಾಲಕ ಸೇರಿದಂತೆ ನಾಲ್ವರು ಸಿಬ್ಬಂದಿಯನ್ನೂ ಒದಗಿಸಲಾಗಿದೆ. ಮೃತದೇಹವನ್ನು ಸ್ಮಶಾನಕ್ಕೆ ಒಯ್ಯುವುದು ಹಾಗೂ ಅಂತ್ಯಕ್ರಿಯೆಗೆ ನೆರವಾಗುವುದು ಅವರ ಜವಾಬ್ದಾರಿ.

‘ಮೃತದೇಹವನ್ನು ಕೊಂಡೊಯ್ಯುವ ಎಲ್ಲ ಸಿಬ್ಬಂದಿಗೂ ವೈಯಕ್ತಿಕ ಸುರಕ್ಷತಾ ಸಾಧನ (ಪಿಪಿಇ) ನೀಡಿದ್ದೇವೆ. ಶವದ ಅಂತ್ಯಕ್ರಿಯೆ ಬಳಿಕ ಆ ಸ್ಥಳಕ್ಕೆ ಸೋಂಕು ನಿವಾರಕ ಸಿಂಪಡಿಸಿ ಸಿಬ್ಬಂದಿಯೇ ಸ್ವಚ್ಛಗೊಳಿಸುತ್ತಾರೆ. ಅವರು ಧರಿಸುವ ಪಿಪಿಇ ಕಿಟ್‌ಗಳನ್ನು ವೈದ್ಯಕೀಯ ತ್ಯಾಜ್ಯದಂತೆಯೇ ವಿಲೇ ಮಾಡಲಾಗುತ್ತದೆ’ ಎಂದು ಬಿಬಿಎಂಪಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

‘ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಮಾರ್ಗಸೂಚಿ ಪ್ರಕಾರ ಮೃತದೇಹವನ್ನು ಹೂಳುವುದಾದರೆ ಕನಿಷ್ಠ 10 ಅಡಿ ಆಳದ ಗುಂಡಿ ತೆಗೆಯಬೇಕು. ಗುಂಡಿ ತೆಗೆಯಲು ಜೆಸಿಬಿ ಬಳಸುತ್ತೇವೆ. ಮೃತರ ಬಂಧುಗಳು ಅಂತಿಮ ವಿಧಿ ನೆರವೇರಿಸಲು ಅವಕಾಶ ಕಲ್ಪಿಸಿದ ಬಳಿಕ ಸಿಬ್ಬಂದಿಯೇ ಮೃತದೇಹವನ್ನು ಹೂಳುತ್ತಾರೆ’ ಎಂದರು.

‘ನಗರದಲ್ಲಿ ಇದುವರೆಗೆ ಕೋವಿಡ್‌ ಸೋಂಕು ಇದ್ದ 95 ಮಂದಿ ಮೃತಪಟ್ಟಿದ್ದಾರೆ. ಇವುಗಳಲ್ಲಿ 83 ಸಾವುಗಳು ಜೂನ್‌ 1ರ ಬಳಿಕ ಸಂಭವಿಸಿವೆ. ದಿನಕ್ಕೆ ಸರಾಸರಿ ಮೂರು ಮಂದಿ ಕೋವಿಡ್‌ನಿಂದ ಕೊನೆಯುಸಿರೆಳೆದಿದ್ದಾರೆ. ಶವಸಂಸ್ಕಾರಕ್ಕೆ ಎಂಟು ವಾಹನಗಳು ಲಭ್ಯ ಇರುವುದರಿಂದ ಸದ್ಯಕ್ಕಂತೂ ಯಾವುದೇ ಸಮಸ್ಯೆ ಇಲ್ಲ’ ಎಂದರು.

ಸಿಬ್ಬಂದಿಗೆ ಸೋಂಕು: ಬಿಬಿಎಂಪಿ ಶ್ರದ್ಧಾಂಜಲಿ ವಾಹನದ ಸಿಬ್ಬಂದಿಯೊಬ್ಬರಿಗೂ ಗುರುವಾರ ಕೊರೊನಾ ಸೋಂಕು ತಗುಲಿದೆ. ಸುರಕ್ಷತಾ ಕ್ರಮಗಳನ್ನು ಅನುಸರಿಸಿದ ಬಳಿಕವೂ ಅವರಿಗೆ ಸೋಂಕು ತಗುಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT