ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 17,419 ಪೌರ ಕಾರ್ಮಿಕರಿಗೆ ಪಿಪಿಇ ಕಿಟ್ ವಿತರಿಸಲಾಗಿದೆಎಂದು ಹೈಕೋರ್ಟ್ಗೆ ಪಾಲಿಕೆ ಮಾಹಿತಿ ನಿಡಿದೆ.
ಕೋವಿಡ್ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪರಿಶೀಲಿಸಿದಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅಲೋಕ್ ಆರಧೆ ಅವರಿದ್ದ ವಿಭಾಗೀಯ ಪೀಠ, ‘ಪೌರ ಕಾರ್ಮಿಕರಿಗೆ ಗರೀಬ್ ಕಲ್ಯಾಣ ಯೋಜನೆ (ವಿಮಾ ಯೋಜನೆ) ಅನ್ವಯಿಸಲಿದೆಯೇ ಎಂಬುದನ್ನು ಪರಿಶೀಲಿಸಿ‘ ಎಂದು ತಿಳಿಸಿತು.
‘ಎಲ್ಲಾ ವಲಯಗಳಲ್ಲಿ ಪೌರ ಕಾರ್ಮಿಕರ ಆರೋಗ್ಯ ಪರೀಕ್ಷೆ ನಡೆಸಲಾಗಿದ್ದು, ಸೋಂಕು ದೃಢಪಟ್ಟ 15 ಮಂದಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸೋಂಕಿನಿಂದ ಮೃತಪಟ್ಟ ಪೌರ ಕಾರ್ಮಿಕರ ಕುಟುಂಬದವರಿಗೆ ತಲಾ ₹10 ಲಕ್ಷ ಪರಿಹಾರ ನೀಡಲಾಗಿದೆ’ ಎಂದು ಬಿಬಿಎಂಪಿ ವಿವರಣೆ ನೀಡಿತು.