ಪ್ರಕರಣದಲ್ಲಿ ಅಮಿಕಸ್ ಕ್ಯೂರಿಯಾಗಿರುವ (ಕೋರ್ಟ್ಗೆ ಸಹಕರಿಸುವ ವಕೀಲ) ಹಿರಿಯ ವಕೀಲ ವಿಕ್ರಂ ಹುಯಿಲಗೋಳ, ‘ಅನಧಿಕೃತ ಜಾಹೀರಾತು ಪ್ರದರ್ಶನಗಳು ಮತ್ತು ಫಲಕಗಳ ಅವಳಡಿಕೆ ತಡೆಗಟ್ಟಲು ಹೈಕೋರ್ಟ್ ಈ ಹಿಂದೆ ಹಲವು ಬಾರಿ ನಿರ್ದೇಶನ ನೀಡಿದೆ. ಆದರೆ, ಸರ್ಕಾರ, ಬಿಡಿಎ ಮತ್ತು ಬಿಬಿಎಂಪಿಗಳ ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸಲು ವಿಫಲವಾಗಿವೆ. ಜಾಹಿರಾತು ಫಲಕಗಳನ್ನು ಪ್ರದರ್ಶಿಸಲು ಬೈಲಾ ಪ್ರಕಾರ ಅನುಮತಿ ಪಡೆಯಲಾಗಿದೆ ಎಂಬ ಬಗ್ಗೆ ಯಾವುದೇ ಉಲ್ಲೇಖವೇ ಇಲ್ಲ’ ಎಂದು ದೂರಿದರು.