<p><strong>ಬೆಂಗಳೂರು:</strong> ‘ಸಗಾಯಪುರದ ಪೆರಿಯರ್ ಸರ್ಕಲ್ ಬಳಿ ₹25 ಕೋಟಿ ವೆಚ್ಚದಲ್ಲಿ 100 ಹಾಸಿಗೆಗಳ ಹೈಟೆಕ್ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ’ ಎಂದು ಪುಲಕೇಶಿನಗರ ಶಾಸಕ ಎ.ಸಿ. ಶ್ರೀನಿವಾಸ್ ತಿಳಿಸಿದರು. </p>.<p>ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ವಿಕಾಸ್ ಸುರಳ್ಕರ್ ಕಿಶೋರ್ ಅವರ ಜತೆಯಲ್ಲಿ ಆಸ್ಪತ್ರೆ ನಿರ್ಮಾಣ ಕಾಮಗಾರಿಯನ್ನು ಮಂಗಳವಾರ ಪರಿಶೀಲನೆ ನಡೆಸಿದ ಅವರು, ವಿವಿಧ ಇಲಾಖೆಗಳ ಅಧಿಕಾರಿಗಳ ಜತೆಗೆ ಸಭೆ ನಡೆಸಿದರು.</p>.<p>ಬಳಿಕ ಮಾತನಾಡಿದ ಶಾಸಕರು, ‘ಸಗಾಯಪುರದಲ್ಲಿ 20 ಗುಂಟೆ ಜಾಗದಲ್ಲಿ ಮೂರು ಅಂತಸ್ತಿನ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ಈ ಆಸ್ಪತ್ರೆಯ ಕಟ್ಟಡದಲ್ಲಿ ಡಯಾಲಿಸಿಸ್ ಜತೆಗೆ, ಎಲ್ಲ ಕಾಯಿಲೆಗಳಿಗೆ ಒಂದೇ ಕಡೆ ಚಿಕಿತ್ಸೆ ಲಭ್ಯವಾಗಲಿದೆ. ₹10 ಕೋಟಿ ವೆಚ್ಚದಲ್ಲಿ ಕುಶಾಲ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ನವೀಕರಣ ಮಾಡಲಾಗುತ್ತದೆ. ಕ್ಷೇತ್ರದಲ್ಲಿರುವ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆರಿಸಲಾಗುತ್ತದೆ’ ಎಂದರು. </p>.<p>‘14 ಕೊಳವೆಬಾವಿಗಳ ಮರು ಕೊರೆಯುವಿಕೆಗೆ ಚಾಲನೆ ನೀಡುವ ಜತೆಗೆ, 10 ಕೊಳವೆಬಾವಿಗಳನ್ನು ಹೊಸದಾಗಿ ಕೊರೆಸಲಾಗುತ್ತಿದೆ’ ಎಂದು ವಿವರಿಸಿದರು.</p>.<p>ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಡಾ.ಸೈಯದ್ ಮದಿನಿ, ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ ತಿಪ್ಪೇಸ್ವಾಮಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ದೇವರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜೊಶ್ವಾ, ಫಯಾಜ್ ಖಾನ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಗಾಯಪುರದ ಪೆರಿಯರ್ ಸರ್ಕಲ್ ಬಳಿ ₹25 ಕೋಟಿ ವೆಚ್ಚದಲ್ಲಿ 100 ಹಾಸಿಗೆಗಳ ಹೈಟೆಕ್ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ’ ಎಂದು ಪುಲಕೇಶಿನಗರ ಶಾಸಕ ಎ.ಸಿ. ಶ್ರೀನಿವಾಸ್ ತಿಳಿಸಿದರು. </p>.<p>ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ವಿಕಾಸ್ ಸುರಳ್ಕರ್ ಕಿಶೋರ್ ಅವರ ಜತೆಯಲ್ಲಿ ಆಸ್ಪತ್ರೆ ನಿರ್ಮಾಣ ಕಾಮಗಾರಿಯನ್ನು ಮಂಗಳವಾರ ಪರಿಶೀಲನೆ ನಡೆಸಿದ ಅವರು, ವಿವಿಧ ಇಲಾಖೆಗಳ ಅಧಿಕಾರಿಗಳ ಜತೆಗೆ ಸಭೆ ನಡೆಸಿದರು.</p>.<p>ಬಳಿಕ ಮಾತನಾಡಿದ ಶಾಸಕರು, ‘ಸಗಾಯಪುರದಲ್ಲಿ 20 ಗುಂಟೆ ಜಾಗದಲ್ಲಿ ಮೂರು ಅಂತಸ್ತಿನ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ಈ ಆಸ್ಪತ್ರೆಯ ಕಟ್ಟಡದಲ್ಲಿ ಡಯಾಲಿಸಿಸ್ ಜತೆಗೆ, ಎಲ್ಲ ಕಾಯಿಲೆಗಳಿಗೆ ಒಂದೇ ಕಡೆ ಚಿಕಿತ್ಸೆ ಲಭ್ಯವಾಗಲಿದೆ. ₹10 ಕೋಟಿ ವೆಚ್ಚದಲ್ಲಿ ಕುಶಾಲ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ನವೀಕರಣ ಮಾಡಲಾಗುತ್ತದೆ. ಕ್ಷೇತ್ರದಲ್ಲಿರುವ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆರಿಸಲಾಗುತ್ತದೆ’ ಎಂದರು. </p>.<p>‘14 ಕೊಳವೆಬಾವಿಗಳ ಮರು ಕೊರೆಯುವಿಕೆಗೆ ಚಾಲನೆ ನೀಡುವ ಜತೆಗೆ, 10 ಕೊಳವೆಬಾವಿಗಳನ್ನು ಹೊಸದಾಗಿ ಕೊರೆಸಲಾಗುತ್ತಿದೆ’ ಎಂದು ವಿವರಿಸಿದರು.</p>.<p>ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಡಾ.ಸೈಯದ್ ಮದಿನಿ, ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ ತಿಪ್ಪೇಸ್ವಾಮಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ದೇವರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜೊಶ್ವಾ, ಫಯಾಜ್ ಖಾನ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>