<p><strong>ಬೆಂಗಳೂರು:</strong> ಓಕಳೀಪುರ ಜಂಕ್ಷನ್, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತ, ಸುಜಾತಾ ಟಾಕೀಸ್ ಬಳಿಯ ವೈ ಜಂಕ್ಷನ್, ಶಿವಾನಂದ ವೃತ್ತದಲ್ಲಿ ನಡೆಯುತ್ತಿರುವ ಮೇಲ್ಸೇತುವೆ ಕಾಮಗಾರಿಗಳನ್ನು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಗುರುವಾರ ಪರಿಶೀಲನೆ ನಡೆಸಿದರು.</p>.<p>ಶಿವಾನಂದ ವೃತ್ತದಲ್ಲಿನ ಉಕ್ಕಿನ ಸೇತುವೆ ಕಾಮಗಾರಿ ವೀಕ್ಷಿಸಿದ ಅವರು, ‘579 ಚದರ ಮೀಟರ್ ಭೂಮಿ ಸ್ವಾಧೀನವಾಗಬೇಕಿದ್ದು, ಅದನ್ನು ಕೂಡಲೇ ಇತ್ಯರ್ಥಪಡಿಸಲು ಬೆಂಗಳೂರು ನಗರ ಜಿಲ್ಲಾಧಿಕಾರಿ ಅವರ ಜತೆ ಸಮನ್ವಯ ಸಾಧಿಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು’ ಎಂದು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ತಿಳಿಸಿದರು.</p>.<p>ಮೇಲ್ಸೇತುವೆಗೆ ರ್ಯಾಂಪ್ ಹಾಗೂ ತಡೆಗೋಡೆ ನಿರ್ಮಾಣ ಮಾಡುವ ಕೆಲಸ ಬಾಕಿ ಇದೆ. ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.</p>.<p>ಓಕಳಿಪುರ ಅಷ್ಟಪಥ ಕಾರಿಡಾರ್ನಲ್ಲಿ ರೈಲ್ವೆ ಇಲಾಖೆ ನಡೆಸುತ್ತಿರುವ ಬಾಕ್ಸ್ ಪುಶಿಂಗ್ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಪತ್ರ ಬರೆಯಬೇಕು. ಕಾಮಗಾರಿ ಮುಗಿದಿರುವ ಕಡೆ ವಾಹನ ಸಂಚಾರಕ್ಕೆ ಅನುವು ಮಾಡುವಂತೆ ತಿಳಿಸಿದರು.</p>.<p>ಹಳೇ ಮೈಸೂರು ರಸ್ತೆ(ಮಾಗಡಿ ರಸ್ತೆ) ಹಾಗೂ ವಾಟಾಳ್ ನಾಗರಾಜ್ ರಸ್ತೆ(ಸುಜಾತ ಟಾಕೀಸ್) ವೈ ಜಂಕ್ಷನ್ನಲ್ಲಿ ₹30 ಕೋಟಿ ವೆಚ್ಚದಲ್ಲಿ ಗ್ರೇಡ್ ಸಪರೇಟರ್ ನಿರ್ಮಿಸುವ ಯೋಜನೆಗೆ ಸ್ಥಳ ಪರಿಶೀಲನೆ ನಡೆಸಿದರು.</p>.<p>ಸಂಗೊಳ್ಳಿ ರಾಯಣ್ಣ ಪ್ರತಿಮೆ ಬಳಿ ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪುರ್ಣಗೊಳಸಬೇಕು. ವಿದ್ಯುತ್ ಕಂಬದ ದೀಪಗಳನ್ನು ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್, ಪಶ್ಚಿಮ ವಲಯ ಆಯುಕ್ತ ಬಸವರಾಜು, ಯೋಜನಾ ವಿಭಾಗದ ಮುಖ್ಯ ಎಂಜಿನಿಯರ್ ಲೊಕೇಶ್, ರಸ್ತೆ ಮೂಲ ಸೌಕರ್ಯ ವಿಭಾಗದ ಮುಖ್ಯ ಎಂಜಿನಿಯರ್ ಬಿ.ಎಸ್. ಪ್ರಹ್ಲಾದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಓಕಳೀಪುರ ಜಂಕ್ಷನ್, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತ, ಸುಜಾತಾ ಟಾಕೀಸ್ ಬಳಿಯ ವೈ ಜಂಕ್ಷನ್, ಶಿವಾನಂದ ವೃತ್ತದಲ್ಲಿ ನಡೆಯುತ್ತಿರುವ ಮೇಲ್ಸೇತುವೆ ಕಾಮಗಾರಿಗಳನ್ನು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಗುರುವಾರ ಪರಿಶೀಲನೆ ನಡೆಸಿದರು.</p>.<p>ಶಿವಾನಂದ ವೃತ್ತದಲ್ಲಿನ ಉಕ್ಕಿನ ಸೇತುವೆ ಕಾಮಗಾರಿ ವೀಕ್ಷಿಸಿದ ಅವರು, ‘579 ಚದರ ಮೀಟರ್ ಭೂಮಿ ಸ್ವಾಧೀನವಾಗಬೇಕಿದ್ದು, ಅದನ್ನು ಕೂಡಲೇ ಇತ್ಯರ್ಥಪಡಿಸಲು ಬೆಂಗಳೂರು ನಗರ ಜಿಲ್ಲಾಧಿಕಾರಿ ಅವರ ಜತೆ ಸಮನ್ವಯ ಸಾಧಿಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು’ ಎಂದು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ತಿಳಿಸಿದರು.</p>.<p>ಮೇಲ್ಸೇತುವೆಗೆ ರ್ಯಾಂಪ್ ಹಾಗೂ ತಡೆಗೋಡೆ ನಿರ್ಮಾಣ ಮಾಡುವ ಕೆಲಸ ಬಾಕಿ ಇದೆ. ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.</p>.<p>ಓಕಳಿಪುರ ಅಷ್ಟಪಥ ಕಾರಿಡಾರ್ನಲ್ಲಿ ರೈಲ್ವೆ ಇಲಾಖೆ ನಡೆಸುತ್ತಿರುವ ಬಾಕ್ಸ್ ಪುಶಿಂಗ್ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಪತ್ರ ಬರೆಯಬೇಕು. ಕಾಮಗಾರಿ ಮುಗಿದಿರುವ ಕಡೆ ವಾಹನ ಸಂಚಾರಕ್ಕೆ ಅನುವು ಮಾಡುವಂತೆ ತಿಳಿಸಿದರು.</p>.<p>ಹಳೇ ಮೈಸೂರು ರಸ್ತೆ(ಮಾಗಡಿ ರಸ್ತೆ) ಹಾಗೂ ವಾಟಾಳ್ ನಾಗರಾಜ್ ರಸ್ತೆ(ಸುಜಾತ ಟಾಕೀಸ್) ವೈ ಜಂಕ್ಷನ್ನಲ್ಲಿ ₹30 ಕೋಟಿ ವೆಚ್ಚದಲ್ಲಿ ಗ್ರೇಡ್ ಸಪರೇಟರ್ ನಿರ್ಮಿಸುವ ಯೋಜನೆಗೆ ಸ್ಥಳ ಪರಿಶೀಲನೆ ನಡೆಸಿದರು.</p>.<p>ಸಂಗೊಳ್ಳಿ ರಾಯಣ್ಣ ಪ್ರತಿಮೆ ಬಳಿ ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪುರ್ಣಗೊಳಸಬೇಕು. ವಿದ್ಯುತ್ ಕಂಬದ ದೀಪಗಳನ್ನು ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್, ಪಶ್ಚಿಮ ವಲಯ ಆಯುಕ್ತ ಬಸವರಾಜು, ಯೋಜನಾ ವಿಭಾಗದ ಮುಖ್ಯ ಎಂಜಿನಿಯರ್ ಲೊಕೇಶ್, ರಸ್ತೆ ಮೂಲ ಸೌಕರ್ಯ ವಿಭಾಗದ ಮುಖ್ಯ ಎಂಜಿನಿಯರ್ ಬಿ.ಎಸ್. ಪ್ರಹ್ಲಾದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>