ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲರಾದ ಜಯಕುಮಾರ್ ಎಸ್.ಪಾಟೀಲ್, ಎ.ಎಸ್.ಪೊನ್ನಣ್ಣ ಮತ್ತು ಸಂದೀಪ್ ಪಾಟೀಲ್, ಜಯಾ ಮೊವಿಲ್ ವಾದ ಮಂಡಿಸಿ, ‘ಇತರೆ ಹಿಂದುಳಿದ ವರ್ಗಕ್ಕೆ (ಒಬಿಸಿ) ರಾಜಕೀಯ ಮೀಸಲು ನಿಗದಿಗೆ ಸರ್ವೆ ನಡೆಸಿಲ್ಲ. ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಚುನಾವಣಾ ಆಯೋಗ ಟ್ರಿಪಲ್ ಟೆಸ್ಟ್ ಮಾನದಂಡ ಅನುಸರಿಸಿಲ್ಲ. ಹಾಗಾಗಿ, ಒಬಿಸಿ ಆಯೋಗದ ವರದಿಯಂತೆ ಮೀಸಲು ಪರಿಗಣಿಸಬಾರದು. ಹೊಸದಾಗಿ ಒಬಿಸಿಗಳ ಸರ್ವೆ ನಡೆಸಲು ನಿರ್ದೇಶಿಸಬೇಕು’ ಎಂದು ಕೋರಿದರು.