ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗಳ ಕುರಿತು ಚರ್ಚಿಸಲು ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ‘ನಗರದಲ್ಲಿ 1,300 ಕಿಲೋ ಮೀಟರ್ ಮುಖ್ಯ ರಸ್ತೆಗಳಿವೆ. ಯಾವ ರಸ್ತೆಯೂ ಗುಂಡಿಮಯ ಆಗಬಾರದು ಎಂಬ ಕಾರಣಕ್ಕೆ ಬಿಬಿಎಂಪಿಯಿಂದಲೇ ಡಾಂಬರ್ ಮಿಶ್ರಣ ಮಾಡುವ ಘಟಕ ತೆರೆಯಲಾಗಿದೆ. ಅ ಅದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳದ ಕಾರಣಕ್ಕೆ ರಸ್ತೆಯಲ್ಲಿ ಗುಂಡಿಗಳು ಉಳಿದಿವೆ. ನಿಗದಿತ ಸಮಯದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಮುಗಿಸಬೇಕು’ ಎಂದು ತಿಳಿಸಿದರು.