‘ಕೊರೊನಾ ಸೋಂಕಿತರು ಹೆಚ್ಚುತ್ತಿರುವ ಸಂದರ್ಭದಲ್ಲೂ ಪೌರಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ, ಕಾರ್ಮಿಕರಿಗೆ ನಿತ್ಯವೂ ಹೊಸ ಸುರಕ್ಷಾ ಕವಚ, ಮಾಸ್ಕ್ ನೀಡಬೇಕು. ಸರಕುಗಳನ್ನು ಸ್ವಚ್ಛಗೊಳಿಸಲು ಕ್ರಿಮಿನಾಶಕ ಒದಗಿಸಬೇಕು. ಕುಡಿಯುವ ನೀರು, ಆಹಾರ, ಬಟ್ಟೆ ಹಾಗೂ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಸಾರಿಗೆ ಭತ್ಯೆಯೆಂದು ದಿನಕ್ಕೆ ₹100 ನೀಡಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.