<p><strong>ಬೆಂಗಳೂರು: ‘</strong>ಪೌರಕಾರ್ಮಿಕರಿಗೆ ಅವಮಾನ ಮಾಡುವ ರೀತಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿ ಹೇಳಿಕೆ ನೀಡಿದ್ದಾರೆ’ ಎಂದು ಆರೋಪಿಸಿ ಪೌರಕಾರ್ಮಿಕರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಕೆ.ಆರ್. ಪುರ ಸಮೀಪದ ವೆಂಗಯ್ಯಕೆರೆಯ ಪ್ರವೇಶ ದ್ವಾರ ಎದುರು ಕುಳಿತು ಪ್ರತಿಭಟನೆ ನಡೆಸಿದ್ದ ಪೌರ ಕಾರ್ಮಿಕರು, ’ಅರಣ್ಯ ಅಧಿಕಾರಿ ತಮ್ಮ ಹೇಳಿಕೆ ಹಿಂಪಡೆದು ಕ್ಷಮೆ ಕೇಳಬೇಕು’ ಎಂದು ಒತ್ತಾಯಿಸಿದರು.</p>.<p>‘ಕೆರೆ ಸಮೀಪದಲ್ಲೇ ಅರಣ್ಯ ಇಲಾಖೆಗೆ ಸೇರಿದ್ದ ಉದ್ಯಾನವಿದೆ. ಅದರ ಬಳಿಯೇ ಕಸ ಸಂಗ್ರಹ ಯಾರ್ಡ್ ಇದೆ. ಮನೆಗಳಿಂದ ಸಂಗ್ರಹಿಸಿದ್ದ ಕಸವನ್ನು ಪೌರಕಾರ್ಮಿಕರು ಯಾರ್ಡ್ಗೆ ತಂದು ಲಾರಿಗಳಿಗೆ ತುಂಬಿಸುತ್ತಾರೆ’ ಎಂದು ಪ್ರತಿಭಟನಾಕಾರರು ಹೇಳಿದರು.</p>.<p>‘ಅರಣ್ಯ ಇಲಾಖೆಯ ಎಸಿಎಫ್ ಪಿ.ಎನ್. ಹರ್ಷವರ್ಧನ್ ಅವರು ಸೋಮವಾರ ಉದ್ಯಾನಕ್ಕೆ ಭೇಟಿ ನೀಡಿದ್ದರು. ಕಸದ ರಾಶಿ ಕಂಡು ಕೆಳ ಹಂತದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಅದೇ ವೇಳೆಯೇ ಪೌರಕಾರ್ಮಿಕರ ಗೌರವಕ್ಕೆ ಧಕ್ಕೆ ಆಗುವ ಹೇಳಿಕೆಯನ್ನು ನೀಡಿದ್ದರು’ ಎಂದು ಪ್ರತಿಭಟನಾಕಾರರು ದೂರಿದರು.</p>.<p class="Subhead"><strong>ತಪ್ಪಾಗಿ ಅರ್ಥೈಸಲಾಗಿದೆ: </strong>ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಹರ್ಷವರ್ಧನ್, ‘ಉದ್ಯಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೆ. ಉದ್ಯಾನದ ಅಭಿವೃದ್ಧಿ ಬಗ್ಗೆ ಸಿಬ್ಬಂದಿ ಜೊತೆ ಮಾತನಾಡಿದ್ದೆ. ಅದನ್ನು ಬಿಟ್ಟು ಪೌರಕಾರ್ಮಿಕರ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ’ ಎಂದು ಹೇಳಿದರು.</p>.<p>‘ಸಿಬ್ಬಂದಿ ಜೊತೆ ಮಾತನಾಡಿದ್ದನ್ನೇ ತಪ್ಪಾಗಿ ಅರ್ಥೈಸಿಕೊಂಡ ಕೆಲವರು, ಅಪಪ್ರಚಾರ ಮಾಡಿದ್ದರಿಂದ ಈ ರೀತಿಯಾಗಿದೆ. ದಯವಿಟ್ಟು ಪ್ರತಿಭಟನೆ ಕೈಬಿಡಿ’ ಎಂದು ಮನವಿ ಮಾಡಿದರು. ಅದಕ್ಕೆ ಪ್ರತಿಭಟನಾಕಾರು ಒಪ್ಪಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ಪೌರಕಾರ್ಮಿಕರಿಗೆ ಅವಮಾನ ಮಾಡುವ ರೀತಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿ ಹೇಳಿಕೆ ನೀಡಿದ್ದಾರೆ’ ಎಂದು ಆರೋಪಿಸಿ ಪೌರಕಾರ್ಮಿಕರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಕೆ.ಆರ್. ಪುರ ಸಮೀಪದ ವೆಂಗಯ್ಯಕೆರೆಯ ಪ್ರವೇಶ ದ್ವಾರ ಎದುರು ಕುಳಿತು ಪ್ರತಿಭಟನೆ ನಡೆಸಿದ್ದ ಪೌರ ಕಾರ್ಮಿಕರು, ’ಅರಣ್ಯ ಅಧಿಕಾರಿ ತಮ್ಮ ಹೇಳಿಕೆ ಹಿಂಪಡೆದು ಕ್ಷಮೆ ಕೇಳಬೇಕು’ ಎಂದು ಒತ್ತಾಯಿಸಿದರು.</p>.<p>‘ಕೆರೆ ಸಮೀಪದಲ್ಲೇ ಅರಣ್ಯ ಇಲಾಖೆಗೆ ಸೇರಿದ್ದ ಉದ್ಯಾನವಿದೆ. ಅದರ ಬಳಿಯೇ ಕಸ ಸಂಗ್ರಹ ಯಾರ್ಡ್ ಇದೆ. ಮನೆಗಳಿಂದ ಸಂಗ್ರಹಿಸಿದ್ದ ಕಸವನ್ನು ಪೌರಕಾರ್ಮಿಕರು ಯಾರ್ಡ್ಗೆ ತಂದು ಲಾರಿಗಳಿಗೆ ತುಂಬಿಸುತ್ತಾರೆ’ ಎಂದು ಪ್ರತಿಭಟನಾಕಾರರು ಹೇಳಿದರು.</p>.<p>‘ಅರಣ್ಯ ಇಲಾಖೆಯ ಎಸಿಎಫ್ ಪಿ.ಎನ್. ಹರ್ಷವರ್ಧನ್ ಅವರು ಸೋಮವಾರ ಉದ್ಯಾನಕ್ಕೆ ಭೇಟಿ ನೀಡಿದ್ದರು. ಕಸದ ರಾಶಿ ಕಂಡು ಕೆಳ ಹಂತದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಅದೇ ವೇಳೆಯೇ ಪೌರಕಾರ್ಮಿಕರ ಗೌರವಕ್ಕೆ ಧಕ್ಕೆ ಆಗುವ ಹೇಳಿಕೆಯನ್ನು ನೀಡಿದ್ದರು’ ಎಂದು ಪ್ರತಿಭಟನಾಕಾರರು ದೂರಿದರು.</p>.<p class="Subhead"><strong>ತಪ್ಪಾಗಿ ಅರ್ಥೈಸಲಾಗಿದೆ: </strong>ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಹರ್ಷವರ್ಧನ್, ‘ಉದ್ಯಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೆ. ಉದ್ಯಾನದ ಅಭಿವೃದ್ಧಿ ಬಗ್ಗೆ ಸಿಬ್ಬಂದಿ ಜೊತೆ ಮಾತನಾಡಿದ್ದೆ. ಅದನ್ನು ಬಿಟ್ಟು ಪೌರಕಾರ್ಮಿಕರ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ’ ಎಂದು ಹೇಳಿದರು.</p>.<p>‘ಸಿಬ್ಬಂದಿ ಜೊತೆ ಮಾತನಾಡಿದ್ದನ್ನೇ ತಪ್ಪಾಗಿ ಅರ್ಥೈಸಿಕೊಂಡ ಕೆಲವರು, ಅಪಪ್ರಚಾರ ಮಾಡಿದ್ದರಿಂದ ಈ ರೀತಿಯಾಗಿದೆ. ದಯವಿಟ್ಟು ಪ್ರತಿಭಟನೆ ಕೈಬಿಡಿ’ ಎಂದು ಮನವಿ ಮಾಡಿದರು. ಅದಕ್ಕೆ ಪ್ರತಿಭಟನಾಕಾರು ಒಪ್ಪಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>