<p><strong>ಬೆಂಗಳೂರು</strong>: ಮಹದೇವಪುರ ವಲಯದ ಹೂಡಿ ವಾರ್ಡ್ನಲ್ಲಿನ ವಾರಣಾಸಿ ಗ್ರಾಮದಲ್ಲಿ ಒತ್ತುವರಿ ಮಾಡಿಕೊಳ್ಳಲಾಗಿದ್ದ 1.6 ಎಕರೆ ಕೆರೆ ಪ್ರದೇಶವನ್ನು ಶುಕ್ರವಾರ ತೆರವುಗೊಳಿಸಲಾಯಿತು.</p>.<p>ಬಿದರಹಳ್ಳಿ ಹೋಬಳಿಯ ವಾರಣಾಸಿ ಗ್ರಾಮದ ಸರ್ವೇ ನಂಬರ್ 47ರಲ್ಲಿರುವ ಒಟ್ಟು 8 ಎಕರೆ 24 ಗುಂಟೆ ವಿಸ್ತೀರ್ಣದ ವಾರಣಾಸಿ (ಜಿಂಕೆತಿಮ್ಮನಹಳ್ಳಿ) ಕೆರೆ ಅಂಗಳದ ಜಮೀನಿನಲ್ಲಿ ಸ್ಥಳೀಯರು, 1 ಎಕರೆ 6 ಗುಂಟೆ ಜಮೀನನ್ನು ಒತ್ತುವರಿ ಮಾಡಿಕೊಂಡು, ಶೀಟಿನ ಮನೆಗಳನ್ನು ನಿರ್ಮಿಸಿಕೊಂಡಿದ್ದರು. ಈ ಜಾಗ ಅಂದಾಜು ₹ 30 ಕೋಟಿ ಮೌಲ್ಯದ್ದಾಗಿದೆ.</p>.<p>‘ಎರಡು ಜೆಸಿಬಿ, 25 ಸಿಬ್ಬಂದಿ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಗಿದೆ. ಒತ್ತುವರಿ ತೆರವುಗೊಳಿಸಿದ ಸ್ಥಳದಲ್ಲಿ ಕೂಡಲೇ ತಂತಿ ಬೇಲಿ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಬಿಬಿಎಂಪಿ ಕೆರೆ ವಿಭಾಗದ ಮುಖ್ಯ ಎಂಜಿನಿಯರ್ ಬಿ.ಟಿ.ಮೋಹನ್ ಕೃಷ್ಣ ಹೇಳಿದರು.</p>.<p>‘ಈ ಕೆರೆಯನ್ನು ನವ ನಗರೋತ್ಥಾನ ಯೋಜನೆಯಡಿ ₹ 3 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಶೇ 45ರಷ್ಟು ಕಾಮಗಾರಿ ಪೂರ್ಣಗೊಂಡಿದೆ’ ಎಂದು ಹೇಳಿದರು.</p>.<p>ಪಾಲಿಕೆ ವಿಶೇಷ ಆಯುಕ್ತ (ಆಸ್ತಿಗಳು) ರೆಡ್ಡಿ ಶಂಕರಬಾಬು ನೇತೃತ್ವದಲ್ಲಿ ಈ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು. ಕಂದಾಯ ಇಲಾಖೆಯ ತಹಶೀಲ್ದಾರ್, ಬೆಂಗಳೂರು ಪೂರ್ವ ತಾಲ್ಲೂಕು ಮತ್ತು ಭೂದಾಖಲೆಗಳ ಸಹಾಯಕ ನಿರ್ದೇಶಕ, ಕೆ.ಆರ್.ಪುರ ತಾಲ್ಲೂಕು ಭೂಮಾಪಕರು ಮತ್ತು ಹೂಡಿ ಉಪವಿಭಾಗದ ಎಂಜಿನಿಯರ್, ಸ್ಥಳೀಯ ಪೊಲೀಸರು ಹಾಗೂ ಪಾಲಿಕೆಯ ಬಿಎಂಟಿಎಫ್ ಪೊಲೀಸರು ಕಾರ್ಯಾಚರಣೆಗೆ ಕೈ ಜೋಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಹದೇವಪುರ ವಲಯದ ಹೂಡಿ ವಾರ್ಡ್ನಲ್ಲಿನ ವಾರಣಾಸಿ ಗ್ರಾಮದಲ್ಲಿ ಒತ್ತುವರಿ ಮಾಡಿಕೊಳ್ಳಲಾಗಿದ್ದ 1.6 ಎಕರೆ ಕೆರೆ ಪ್ರದೇಶವನ್ನು ಶುಕ್ರವಾರ ತೆರವುಗೊಳಿಸಲಾಯಿತು.</p>.<p>ಬಿದರಹಳ್ಳಿ ಹೋಬಳಿಯ ವಾರಣಾಸಿ ಗ್ರಾಮದ ಸರ್ವೇ ನಂಬರ್ 47ರಲ್ಲಿರುವ ಒಟ್ಟು 8 ಎಕರೆ 24 ಗುಂಟೆ ವಿಸ್ತೀರ್ಣದ ವಾರಣಾಸಿ (ಜಿಂಕೆತಿಮ್ಮನಹಳ್ಳಿ) ಕೆರೆ ಅಂಗಳದ ಜಮೀನಿನಲ್ಲಿ ಸ್ಥಳೀಯರು, 1 ಎಕರೆ 6 ಗುಂಟೆ ಜಮೀನನ್ನು ಒತ್ತುವರಿ ಮಾಡಿಕೊಂಡು, ಶೀಟಿನ ಮನೆಗಳನ್ನು ನಿರ್ಮಿಸಿಕೊಂಡಿದ್ದರು. ಈ ಜಾಗ ಅಂದಾಜು ₹ 30 ಕೋಟಿ ಮೌಲ್ಯದ್ದಾಗಿದೆ.</p>.<p>‘ಎರಡು ಜೆಸಿಬಿ, 25 ಸಿಬ್ಬಂದಿ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಗಿದೆ. ಒತ್ತುವರಿ ತೆರವುಗೊಳಿಸಿದ ಸ್ಥಳದಲ್ಲಿ ಕೂಡಲೇ ತಂತಿ ಬೇಲಿ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಬಿಬಿಎಂಪಿ ಕೆರೆ ವಿಭಾಗದ ಮುಖ್ಯ ಎಂಜಿನಿಯರ್ ಬಿ.ಟಿ.ಮೋಹನ್ ಕೃಷ್ಣ ಹೇಳಿದರು.</p>.<p>‘ಈ ಕೆರೆಯನ್ನು ನವ ನಗರೋತ್ಥಾನ ಯೋಜನೆಯಡಿ ₹ 3 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಶೇ 45ರಷ್ಟು ಕಾಮಗಾರಿ ಪೂರ್ಣಗೊಂಡಿದೆ’ ಎಂದು ಹೇಳಿದರು.</p>.<p>ಪಾಲಿಕೆ ವಿಶೇಷ ಆಯುಕ್ತ (ಆಸ್ತಿಗಳು) ರೆಡ್ಡಿ ಶಂಕರಬಾಬು ನೇತೃತ್ವದಲ್ಲಿ ಈ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು. ಕಂದಾಯ ಇಲಾಖೆಯ ತಹಶೀಲ್ದಾರ್, ಬೆಂಗಳೂರು ಪೂರ್ವ ತಾಲ್ಲೂಕು ಮತ್ತು ಭೂದಾಖಲೆಗಳ ಸಹಾಯಕ ನಿರ್ದೇಶಕ, ಕೆ.ಆರ್.ಪುರ ತಾಲ್ಲೂಕು ಭೂಮಾಪಕರು ಮತ್ತು ಹೂಡಿ ಉಪವಿಭಾಗದ ಎಂಜಿನಿಯರ್, ಸ್ಥಳೀಯ ಪೊಲೀಸರು ಹಾಗೂ ಪಾಲಿಕೆಯ ಬಿಎಂಟಿಎಫ್ ಪೊಲೀಸರು ಕಾರ್ಯಾಚರಣೆಗೆ ಕೈ ಜೋಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>