ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಕ್‌ನಲ್ಲೇ ಸುತ್ತಾಡಿ: ಬಿಬಿಎಂಪಿ ಅಧಿಕಾರಿಗಳಿಗೆ ಮೇಯರ್‌ ಸೂಚನೆ

Last Updated 6 ಅಕ್ಟೋಬರ್ 2019, 20:11 IST
ಅಕ್ಷರ ಗಾತ್ರ

ಬೆಂಗಳೂರು: ‘ಬಿಬಿಎಂಪಿಯ ಎಲ್ಲಾ ವಲಯಗಳ ಜಂಟಿ ಆಯುಕ್ತರು, ಮುಖ್ಯ ಎಂಜಿನಿಯರ್‌ಗಳು ಬೆಳಿಗ್ಗೆ 8ರಿಂದ 10ವರೆಗೆ ಕಡ್ಡಾಯವಾಗಿ ದ್ವಿಚಕ್ರ ವಾಹನಗಳಲ್ಲೇ ವಾರ್ಡ್‌ಗಳಲ್ಲಿ ಸುತ್ತಾಡಬೇಕು’ ಎಂದು ಮೇಯರ್ ಎಂ. ಗೌತಮ್‌ಕುಮಾರ್‌ ಸೂಚನೆ ನೀಡಿದರು.

ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಬೈಕ್‌ ನಲ್ಲಿ ಸಂಚರಿಸಿ ರಸ್ತೆ ಗುಂಡಿಗಳನ್ನು ಪರಿಶೀಲಿಸಿದ ಅವರು, ‘ಇಲಾಖೆಗಳ ಮುಖ್ಯಸ್ಥರು ಬೈಕ್‌ಗಳಲ್ಲಿ ಸಂಚರಿಸಿದರೆ ಸಾರ್ವಜನಿಕರ ಸಮಸ್ಯೆಗಳು ಅರಿವಿಗೆ ಬರುತ್ತವೆ. ಕಾರಿನಲ್ಲೇ ಸಂಚರಿಸುವ ನಮಗೆ ಬೈಕ್‌ ಸವಾರರ ಕಷ್ಟ ಅರ್ಥ ವಾಗದು. ಅದಕ್ಕಾಗಿ ನಾನು ಬೈಕ್‌ನಲ್ಲಿ ಸಂಚರಿಸಿದ್ದೇನೆ. ಸತ್ಯ ಹೇಳಬೇಕೆಂದರೆ ರಸ್ತೆಗಳ ಸ್ಥಿತಿ ಅತ್ಯಂತ ಕೆಟ್ಟದಾಗಿದ್ದು, ಬೆನ್ನುನೋವು ಆರಂಭವಾಗಿದೆ. ರಸ್ತೆ ಗುಂಡಿಗಳ ಮುಚ್ಚಿಸಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದು ಮಾಧ್ಯಮಗಳಿಗೆ ತಿಳಿಸಿದರು.

‘ರಸ್ತೆ ಗುಂಡಿಗಳನ್ನು ಸರಿಯಾಗಿ ಮುಚ್ಚದಿದ್ದರೆ ಅದಕ್ಕೆ ಗುತ್ತಿಗೆದಾರರೇ ಜವಾಬ್ದಾರರು. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT