ಪಾಲಿಕೆಯ ಮುಖ್ಯ ಎಂಜಿನಿಯರ್ ಎಂ.ಆರ್.ವೆಂಕಟೇಶ್, ‘ನಿರ್ವಹಣಾ ಅವಧಿ ಬಾಕಿಯಿರುವ ರಸ್ತೆಗಳಲ್ಲಿನ ಗುಂಡಿಗಳನ್ನು ಗುತ್ತಿಗೆದಾರರಿಂದಲೇ ಮುಚ್ಚಿಸಲಾಗುತ್ತಿದೆ. ಅವಧಿ ಮುಗಿದ ಕಡೆ ಪಾಲಿಕೆಯಿಂದ ಮುಚ್ಚಲಾಗುತ್ತಿದೆ. ಗುಂಡಿಗಳನ್ನು ಅವೈಜ್ಞಾನಿಕವಾಗಿ ಮುಚ್ಚಿರುವುದು ಕಂಡುಬಂದರೆ ಎಂಜಿನಿಯರ್ಗಳಿಗೆ ₹ 1 ಸಾವಿರ ದಂಡ ವಿಧಿಸಲಾಗುವುದು’ ಎಂದರು.