<p><strong>ಬೆಂಗಳೂರು:</strong> ರಸ್ತೆ ಗುಂಡಿಗಳನ್ನು ವೈಜ್ಞಾನಿಕವಾಗಿ ಮುಚ್ಚದಿದ್ದರೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ದಂಡ ವಿಧಿಸಲಾಗುವುದು ಎಂದು ಮೇಯರ್ ಗಂಗಾಂಬಿಕೆ ತಿಳಿಸಿದರು.</p>.<p>ಪಾಲಿಕೆ ಕಚೇರಿಯಲ್ಲಿ ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಸೆ.6ರಿಂದ ಅನಿರೀಕ್ಷಿತ ತಪಾಸಣೆ ಆರಂಭಿಸಲಾಗುವುದು. ಗುಂಡಿ ಮುಚ್ಚದೆ ಇರುವುದು ಅಥವಾ ಅವೈಜ್ಞಾನಿಕವಾಗಿ ಮುಚ್ಚಿರುವುದು ಕಂಡುಬಂದರೆ ಮುಲಾಜಿಲ್ಲದೆ ದಂಡ ವಿಧಿಸಲಾಗುವುದು. ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು’ ಎಂದರು.</p>.<p>ಪಾಲಿಕೆಯ ಮುಖ್ಯ ಎಂಜಿನಿಯರ್ ಎಂ.ಆರ್.ವೆಂಕಟೇಶ್, ‘ನಿರ್ವಹಣಾ ಅವಧಿ ಬಾಕಿಯಿರುವ ರಸ್ತೆಗಳಲ್ಲಿನ ಗುಂಡಿಗಳನ್ನು ಗುತ್ತಿಗೆದಾರರಿಂದಲೇ ಮುಚ್ಚಿಸಲಾಗುತ್ತಿದೆ. ಅವಧಿ ಮುಗಿದ ಕಡೆ ಪಾಲಿಕೆಯಿಂದ ಮುಚ್ಚಲಾಗುತ್ತಿದೆ. ಗುಂಡಿಗಳನ್ನು ಅವೈಜ್ಞಾನಿಕವಾಗಿ ಮುಚ್ಚಿರುವುದು ಕಂಡುಬಂದರೆ ಎಂಜಿನಿಯರ್ಗಳಿಗೆ ₹ 1 ಸಾವಿರ ದಂಡ ವಿಧಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಸ್ತೆ ಗುಂಡಿಗಳನ್ನು ವೈಜ್ಞಾನಿಕವಾಗಿ ಮುಚ್ಚದಿದ್ದರೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ದಂಡ ವಿಧಿಸಲಾಗುವುದು ಎಂದು ಮೇಯರ್ ಗಂಗಾಂಬಿಕೆ ತಿಳಿಸಿದರು.</p>.<p>ಪಾಲಿಕೆ ಕಚೇರಿಯಲ್ಲಿ ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಸೆ.6ರಿಂದ ಅನಿರೀಕ್ಷಿತ ತಪಾಸಣೆ ಆರಂಭಿಸಲಾಗುವುದು. ಗುಂಡಿ ಮುಚ್ಚದೆ ಇರುವುದು ಅಥವಾ ಅವೈಜ್ಞಾನಿಕವಾಗಿ ಮುಚ್ಚಿರುವುದು ಕಂಡುಬಂದರೆ ಮುಲಾಜಿಲ್ಲದೆ ದಂಡ ವಿಧಿಸಲಾಗುವುದು. ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು’ ಎಂದರು.</p>.<p>ಪಾಲಿಕೆಯ ಮುಖ್ಯ ಎಂಜಿನಿಯರ್ ಎಂ.ಆರ್.ವೆಂಕಟೇಶ್, ‘ನಿರ್ವಹಣಾ ಅವಧಿ ಬಾಕಿಯಿರುವ ರಸ್ತೆಗಳಲ್ಲಿನ ಗುಂಡಿಗಳನ್ನು ಗುತ್ತಿಗೆದಾರರಿಂದಲೇ ಮುಚ್ಚಿಸಲಾಗುತ್ತಿದೆ. ಅವಧಿ ಮುಗಿದ ಕಡೆ ಪಾಲಿಕೆಯಿಂದ ಮುಚ್ಚಲಾಗುತ್ತಿದೆ. ಗುಂಡಿಗಳನ್ನು ಅವೈಜ್ಞಾನಿಕವಾಗಿ ಮುಚ್ಚಿರುವುದು ಕಂಡುಬಂದರೆ ಎಂಜಿನಿಯರ್ಗಳಿಗೆ ₹ 1 ಸಾವಿರ ದಂಡ ವಿಧಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>