ಮೇಯರ್ ಭೇಟಿ ವೇಳೆ ನೆಲಮಹಡಿಯಲ್ಲಿ ಕಸದ ರಾಶಿ ಹಾಗೆಯೇ ಇತ್ತು. ಅದನ್ನು ಕೂಡಲೆ ತೆರವುಗೊಳಿಸುವಂತೆ ಸೂಚಿಸಿದ ಮೇಯರ್, ‘ಇನ್ನುಮುಂದೆ ಈ ಜಾಗದಲ್ಲಿ ಕಸ ಬೀಳದಂತೆ ನೋಡಿಕೊಳ್ಳಬೇಕು. ಇಲ್ಲಿ ಕಸ ಬಿಸಾಡುವುದನ್ನು ತಡೆಯಲು ಮುಖ್ಯದ್ವಾರದಲ್ಲಿ ಶಟರ್ ಅಳವಡಿಸಬೇಕು. ಅಗ್ನಿಶಾಮಕ ದಳದ ವಾಹನ ಬರುವಾಗ ಮಾತ್ರ ಅದನ್ನು ತೆರೆಯಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.