ಪ್ರಧಾನಿ ರನಿಲ್ ವಿಕ್ರಂ ಸಿಂಘೆ ವಿರುದ್ಧ ಮಂಡನೆಯಾಗಿದ್ದ ಅವಿಶ್ವಾಸ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದ ಮೈತ್ರಿ ಸರ್ಕಾರದ ಆರು ಸಚಿವರು ಗುರುವಾರ ತಡರಾತ್ರಿ ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ ಫೆಬ್ರುವರಿಯಲ್ಲಿ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಮೈತ್ರಿಕೂಟ ಸೋಲು ಅನುಭವಿಸಿತು. ಹೀಗಾಗಿ ಕೂಡಲೇ ರಾಜೀನಾಮೆ ನೀಡುವಂತೆ ಪ್ರಧಾನಿ ವಿಕ್ರಂ ಸಿಂಘೆ ಅವರಿಗೆ ಮೈತ್ರಿಪಾಲ ಸೂಚಿಸಿದ್ದರು. ಆದರೆ, ರಾಜೀನಾಮೆ ನೀಡಲು ಅವರು ಒಪ್ಪದ ಕಾರಣ ಶ್ರೀಲಂಕಾದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿದೆ.