‘ಒಡಿಶಾ, ಉತ್ತರ ಪ್ರದೇಶ, ತ್ರಿಪುರ, ಬಿಹಾರ ಸೇರಿ ಹಲವು ರಾಜ್ಯಗಳ ವಲಸೆ ಕಾರ್ಮಿಕರು ಇದ್ದಾರೆ. ಅವರನ್ನು ಊರಿಗೆ ಕಳುಹಿಸಿಕೊಡಲು ಆನ್ಲೈನ್ ಮೂಲಕ ರೈಲ್ವೆಟಿಕೆಟ್ ಬುಕ್ಕಿಂಗ್ ಮಾಡಲಾಗುತ್ತಿದೆ. ಕಾಯ್ದಿರಿಸಿರುವ ರೈಲು ಬಂದಾಗ ಪೊಲೀಸ್ ಸಿಬ್ಬಂದಿ ಅವರನ್ನು ಕರೆದೊಯ್ದು ರೈಲು ಹತ್ತಿಸಲಿದ್ದಾರೆ. ಪಾಲಿಕೆ ವತಿಯಿಂದ ಆರೋಗ್ಯ ತಪಾಸಣೆ ಕೂಡ ಮಾಡಲಾಗುತ್ತಿದೆ’ ಎಂದು ಹೇಳಿದರು.