<p><strong>ಬೆಂಗಳೂರು</strong>: ‘ನಾವು ಓಟು ಹಾಕಿ ಗೆಲ್ಲಿಸಿರುವ ಜನಪ್ರತಿನಿಧಿಗಳು ನಮ್ಮ ನೋಟು ನುಂಗುತ್ತಿದ್ದಾರೆ. ಬೇರೆ ಬೇರೆ ರೂಪದಲ್ಲಿ ಹಣ ಖರ್ಚು ಮಾಡಿ ನಮ್ಮನ್ನೆಲ್ಲ ದೋಚುತ್ತಿದ್ದಾರೆ' ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಆರೋಪಿಸಿದರು.</p>.<p>ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,’ ₹27.7 ಕೋಟಿಗೆ ಖರೀದಿಸಿದ ಮೆಕ್ಯಾನಿಕಲ್ ಸ್ವೀಪಿಂಗ್ ಯಂತ್ರಗಳ ಬಳಕೆ, ಸ್ಟಾಕ್ ಪುಸ್ತಕಗಳ ನಿರ್ವಹಣೆಯಲ್ಲಿನ ವ್ಯತ್ಯಾಸ, ನಗದು ಪುಸ್ತಕದ ಅಸಮರ್ಪಕ ನಿರ್ವಹಣೆ ಬಗ್ಗೆ ಸಿಎಜಿ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆದರೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿಲ್ಲ‘ ಎಂದು ದೂರಿದರು.</p>.<p>’ಪ್ರಕರಣದ ಸಂಪೂರ್ಣ ತನಿಖೆ ಮುಗಿಯುವ ತನಕ ಈ ಅವ್ಯವಹಾರಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ತಕ್ಷಣ ಅಮಾನತು ಮಾಡಬೇಕು. ನಷ್ಟಕ್ಕೆ ಕಾರಣರಾದ ವ್ಯಕ್ತಿಗಳಿಂದ ಹಣವನ್ನು ವಸೂಲಿ ಮಾಡಬೇಕು. ಬೆಂಗಳೂರಿನ ಎಲ್ಲ ವಿಭಾಗಗಳು ಮತ್ತು 198 ವಾರ್ಡ್ಗಳಲ್ಲಿಯೂ ಇದೇ ರೀತಿಯ ಲೆಕ್ಕಪರಿಶೋಧನೆ ನಡೆಸಬೇಕು‘ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ನಾವು ಓಟು ಹಾಕಿ ಗೆಲ್ಲಿಸಿರುವ ಜನಪ್ರತಿನಿಧಿಗಳು ನಮ್ಮ ನೋಟು ನುಂಗುತ್ತಿದ್ದಾರೆ. ಬೇರೆ ಬೇರೆ ರೂಪದಲ್ಲಿ ಹಣ ಖರ್ಚು ಮಾಡಿ ನಮ್ಮನ್ನೆಲ್ಲ ದೋಚುತ್ತಿದ್ದಾರೆ' ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಆರೋಪಿಸಿದರು.</p>.<p>ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,’ ₹27.7 ಕೋಟಿಗೆ ಖರೀದಿಸಿದ ಮೆಕ್ಯಾನಿಕಲ್ ಸ್ವೀಪಿಂಗ್ ಯಂತ್ರಗಳ ಬಳಕೆ, ಸ್ಟಾಕ್ ಪುಸ್ತಕಗಳ ನಿರ್ವಹಣೆಯಲ್ಲಿನ ವ್ಯತ್ಯಾಸ, ನಗದು ಪುಸ್ತಕದ ಅಸಮರ್ಪಕ ನಿರ್ವಹಣೆ ಬಗ್ಗೆ ಸಿಎಜಿ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆದರೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿಲ್ಲ‘ ಎಂದು ದೂರಿದರು.</p>.<p>’ಪ್ರಕರಣದ ಸಂಪೂರ್ಣ ತನಿಖೆ ಮುಗಿಯುವ ತನಕ ಈ ಅವ್ಯವಹಾರಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ತಕ್ಷಣ ಅಮಾನತು ಮಾಡಬೇಕು. ನಷ್ಟಕ್ಕೆ ಕಾರಣರಾದ ವ್ಯಕ್ತಿಗಳಿಂದ ಹಣವನ್ನು ವಸೂಲಿ ಮಾಡಬೇಕು. ಬೆಂಗಳೂರಿನ ಎಲ್ಲ ವಿಭಾಗಗಳು ಮತ್ತು 198 ವಾರ್ಡ್ಗಳಲ್ಲಿಯೂ ಇದೇ ರೀತಿಯ ಲೆಕ್ಕಪರಿಶೋಧನೆ ನಡೆಸಬೇಕು‘ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>