<p><strong>ಬೆಂಗಳೂರು</strong>: ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು ಪಾಲಿಕೆಯ ನಿಯಂತ್ರಣ ಕೊಠಡಿಯಲ್ಲಿ ಶುಕ್ರವಾರ ಫೋನ್ ಇನ್ ಕಾರ್ಯಕ್ರಮ ನಡೆಸಿದರು.</p>.<p>ಶ್ರೀನಿವಾಸ್ ಎಂಬುವವರು ಬೀದಿ ನಾಯಿಗಳ ಆಕ್ರಮಣಕಾರಿ ನಡವಳಿಕೆಯ ಬಗ್ಗೆ ದೂರು ನೀಡಿದ್ದು, ಆಯುಕ್ತರ ನಿರ್ದೇಶನದ ಮೇರೆಗೆ ಸುಗ್ಗಪ್ಪ ಲೇಔಟ್ನಲ್ಲಿ ಈಗಾಗಲೇ ಎರಡು ಬೀದಿ ನಾಯಿಗಳನ್ನು ಸೆರೆ ಹಿಡಿದಿದ್ದು, ಅವುಗಳ ನಡವಳಿಕೆಯನ್ನು ವೀಕ್ಷಣೆಗೆ ಒಳಪಡಿಸಲಾಗಿದೆ.</p>.<p>ಫೋನ್ ಇನ್ ಕಾರ್ಯಕ್ರಮದಲ್ಲಿ ಬಂದ ಬಹುಪಾಲು ದೂರುಗಳು ರಸ್ತೆ ಗುಂಡಿಗಳಿಗೆ ಸಂಬಂಧಿಸಿದ್ದಾಗಿದ್ದು, ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಲು ಹಾಗೂ ರಸ್ತೆ ದುರಸ್ತಿಯ ಕಾರ್ಯಗಳನ್ನು ಕೈಗೆತ್ತಿಕೊಂಡು, ನಾಗರಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಆಯುಕ್ತರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.</p>.<p>ತ್ಯಾಜ್ಯ ನಿರ್ವಹಣೆ ಬಗ್ಗೆ ದೂರುಗಳು ಬಂದಿದ್ದು, ಆಯುಕ್ತರು ಸಂಬಂಧಪಟ್ಟ ಅಧಿಕಾರಿಗಳಿಗೆ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸಿ, ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸಮರ್ಪಕ ತ್ಯಾಜ್ಯ ನಿರ್ವಹಣೆ ಕಾರ್ಯವನ್ನು ನಡೆಸಲು ಹೇಳಿದರು.</p>.<p>ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರ 41 ಕರೆಗಳಿಂದ, ಒಟ್ಟಾರೆಯಾಗಿ 64 ಅಹವಾಲುಗಳನ್ನು ಸ್ವೀಕರಿಸಲಾಗಿದೆ. ಸದರಿ ಅಹವಾಲುಗಳನ್ನು ಸಹಾಯ ಪೋರ್ಟಲ್ನಲ್ಲಿ ದಾಖಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ರವಾನಿಸಿ, ಸೂಕ್ತ ಕ್ರಮ ವಹಿಸಲು ಸೂಚಿಸಲಾಗಿದೆ.</p>.<p>ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಲು ನಗರ ಪಾಲಿಕೆಯ ಮಟ್ಟದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಚಟುವಟಿಕೆಗಳನ್ನು ನಿಯಮಿತವಾಗಿ ಪರಿಶೀಲಿಸಲು ಪ್ರತಿ ಶುಕ್ರವಾರ ಆಯುಕ್ತರು ಫೋನ್ ಇನ್ ಕಾರ್ಯಕ್ರಮ ಮುಂದುವರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<p>=</p>.<p>ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ</p>.<p>ಬೆಂಗಳೂರು: ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಸಾಯಿ ಲೇಔಟ್ ಬಳಿಯ ಗೆದ್ದಲಹಳ್ಳಿ ರೈಲ್ವೆ ವೆಂಟ್ ಕಾಮಗಾರಿಯನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಕೆ.ಆರ್ ಪುರದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸಾಯಿ ಲೇಔಟ್ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಹ ಉಂಟಾಗುವುದನ್ನು ತಡೆಯುವ ಸಲುವಾಗಿ ₹13.36 ಕೋಟಿ ವೆಚ್ಚದಲ್ಲಿ, ರೈಲ್ವೆ ಹಳಿ ಕೆಳಭಾಗಲ್ಲಿ ಅಳವಡಿಸಲು 6 ಮೀಟರ್ ಅಗಲ ಹಾಗೂ 4.5 ಮೀಟರ್ ಎತ್ತರದ ಎರಡು ಬಾಕ್ಸ್ ಕಾಸ್ಟಿಂಗ್ ಪ್ರಗತಿಯಲ್ಲಿದೆ. ಕಾಸ್ಟಿಂಗ್ ಮುಗಿದ ಕೂಡಲೇ ಬಾಕ್ಸ್ ಪುಷಿಂಗ್ ಮಾಡಿ ಕಾಮಗಾರಿಯನ್ನು ಪೂರ್ಣಗೊಳಿಸಲು ಹೇಳಿದರು.</p>.<p>ಹೆಣ್ಣೂರು - ಬಾಗಲೂರು ರಸ್ತೆಯಲ್ಲಿ 5 ಕಿ.ಮೀ ವೈಟ್ ಟಾಪಿಂಗ್ ಕಾಮಗಾರಿಗೆ ವೇಗ ನೀಡಬೇಕು. ರಸ್ತೆಯ ಎರಡೂ ಬದಿ ಸ್ವಚ್ಛತೆಗೆ ಆದ್ಯತೆ ನೀಡಿ ಸ್ವಚ್ಛತೆ ಕಾಪಾಡಬೇಕು. ಬ್ಲೆಸ್ಸಿಂಗ್ ಗಾರ್ಡನ್ ರಸ್ತೆಯನ್ನು 24 ಮೀಟರ್ಗೆ ವಿಸ್ತರಿಸುವ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಬಿ-ಸ್ಮೈಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಸಾಯಿ ಲೇಔಟ್ ಪ್ರದೇಶದಲ್ಲಿ ಕಸ ಸುರಿಯುವ ಸ್ಥಳಗಳು(ಬ್ಲ್ಯಾಕ್ ಸ್ಪಾಟ್) ನಿರ್ಮಾಣವಾಗಿದ್ದು, ತ್ವರಿತವಾಗಿ ಅವುಗಳನ್ನು ತೆರವುಗೊಳಿಸಬೇಕು ಎಂದು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು ಪಾಲಿಕೆಯ ನಿಯಂತ್ರಣ ಕೊಠಡಿಯಲ್ಲಿ ಶುಕ್ರವಾರ ಫೋನ್ ಇನ್ ಕಾರ್ಯಕ್ರಮ ನಡೆಸಿದರು.</p>.<p>ಶ್ರೀನಿವಾಸ್ ಎಂಬುವವರು ಬೀದಿ ನಾಯಿಗಳ ಆಕ್ರಮಣಕಾರಿ ನಡವಳಿಕೆಯ ಬಗ್ಗೆ ದೂರು ನೀಡಿದ್ದು, ಆಯುಕ್ತರ ನಿರ್ದೇಶನದ ಮೇರೆಗೆ ಸುಗ್ಗಪ್ಪ ಲೇಔಟ್ನಲ್ಲಿ ಈಗಾಗಲೇ ಎರಡು ಬೀದಿ ನಾಯಿಗಳನ್ನು ಸೆರೆ ಹಿಡಿದಿದ್ದು, ಅವುಗಳ ನಡವಳಿಕೆಯನ್ನು ವೀಕ್ಷಣೆಗೆ ಒಳಪಡಿಸಲಾಗಿದೆ.</p>.<p>ಫೋನ್ ಇನ್ ಕಾರ್ಯಕ್ರಮದಲ್ಲಿ ಬಂದ ಬಹುಪಾಲು ದೂರುಗಳು ರಸ್ತೆ ಗುಂಡಿಗಳಿಗೆ ಸಂಬಂಧಿಸಿದ್ದಾಗಿದ್ದು, ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಲು ಹಾಗೂ ರಸ್ತೆ ದುರಸ್ತಿಯ ಕಾರ್ಯಗಳನ್ನು ಕೈಗೆತ್ತಿಕೊಂಡು, ನಾಗರಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಆಯುಕ್ತರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.</p>.<p>ತ್ಯಾಜ್ಯ ನಿರ್ವಹಣೆ ಬಗ್ಗೆ ದೂರುಗಳು ಬಂದಿದ್ದು, ಆಯುಕ್ತರು ಸಂಬಂಧಪಟ್ಟ ಅಧಿಕಾರಿಗಳಿಗೆ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸಿ, ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸಮರ್ಪಕ ತ್ಯಾಜ್ಯ ನಿರ್ವಹಣೆ ಕಾರ್ಯವನ್ನು ನಡೆಸಲು ಹೇಳಿದರು.</p>.<p>ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರ 41 ಕರೆಗಳಿಂದ, ಒಟ್ಟಾರೆಯಾಗಿ 64 ಅಹವಾಲುಗಳನ್ನು ಸ್ವೀಕರಿಸಲಾಗಿದೆ. ಸದರಿ ಅಹವಾಲುಗಳನ್ನು ಸಹಾಯ ಪೋರ್ಟಲ್ನಲ್ಲಿ ದಾಖಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ರವಾನಿಸಿ, ಸೂಕ್ತ ಕ್ರಮ ವಹಿಸಲು ಸೂಚಿಸಲಾಗಿದೆ.</p>.<p>ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಲು ನಗರ ಪಾಲಿಕೆಯ ಮಟ್ಟದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಚಟುವಟಿಕೆಗಳನ್ನು ನಿಯಮಿತವಾಗಿ ಪರಿಶೀಲಿಸಲು ಪ್ರತಿ ಶುಕ್ರವಾರ ಆಯುಕ್ತರು ಫೋನ್ ಇನ್ ಕಾರ್ಯಕ್ರಮ ಮುಂದುವರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<p>=</p>.<p>ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ</p>.<p>ಬೆಂಗಳೂರು: ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಸಾಯಿ ಲೇಔಟ್ ಬಳಿಯ ಗೆದ್ದಲಹಳ್ಳಿ ರೈಲ್ವೆ ವೆಂಟ್ ಕಾಮಗಾರಿಯನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಕೆ.ಆರ್ ಪುರದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸಾಯಿ ಲೇಔಟ್ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಹ ಉಂಟಾಗುವುದನ್ನು ತಡೆಯುವ ಸಲುವಾಗಿ ₹13.36 ಕೋಟಿ ವೆಚ್ಚದಲ್ಲಿ, ರೈಲ್ವೆ ಹಳಿ ಕೆಳಭಾಗಲ್ಲಿ ಅಳವಡಿಸಲು 6 ಮೀಟರ್ ಅಗಲ ಹಾಗೂ 4.5 ಮೀಟರ್ ಎತ್ತರದ ಎರಡು ಬಾಕ್ಸ್ ಕಾಸ್ಟಿಂಗ್ ಪ್ರಗತಿಯಲ್ಲಿದೆ. ಕಾಸ್ಟಿಂಗ್ ಮುಗಿದ ಕೂಡಲೇ ಬಾಕ್ಸ್ ಪುಷಿಂಗ್ ಮಾಡಿ ಕಾಮಗಾರಿಯನ್ನು ಪೂರ್ಣಗೊಳಿಸಲು ಹೇಳಿದರು.</p>.<p>ಹೆಣ್ಣೂರು - ಬಾಗಲೂರು ರಸ್ತೆಯಲ್ಲಿ 5 ಕಿ.ಮೀ ವೈಟ್ ಟಾಪಿಂಗ್ ಕಾಮಗಾರಿಗೆ ವೇಗ ನೀಡಬೇಕು. ರಸ್ತೆಯ ಎರಡೂ ಬದಿ ಸ್ವಚ್ಛತೆಗೆ ಆದ್ಯತೆ ನೀಡಿ ಸ್ವಚ್ಛತೆ ಕಾಪಾಡಬೇಕು. ಬ್ಲೆಸ್ಸಿಂಗ್ ಗಾರ್ಡನ್ ರಸ್ತೆಯನ್ನು 24 ಮೀಟರ್ಗೆ ವಿಸ್ತರಿಸುವ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಬಿ-ಸ್ಮೈಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಸಾಯಿ ಲೇಔಟ್ ಪ್ರದೇಶದಲ್ಲಿ ಕಸ ಸುರಿಯುವ ಸ್ಥಳಗಳು(ಬ್ಲ್ಯಾಕ್ ಸ್ಪಾಟ್) ನಿರ್ಮಾಣವಾಗಿದ್ದು, ತ್ವರಿತವಾಗಿ ಅವುಗಳನ್ನು ತೆರವುಗೊಳಿಸಬೇಕು ಎಂದು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>