‘ಇದು ಎರಡನೇ ದರ್ಜೆಯ ಕಾಂಪೋಸ್ಟ್. ಇದನ್ನು ತೆಂಗು, ಅಡಿಕೆ, ಮಾವು, ಸೀಬೆ, ದಾಳಿಂಬೆ ಮತ್ತು ಇನ್ನಿತರೆ ತೋಟಗಾರಿಕೆ ಬೆಳೆಗಳಿಗೆ ಗೊಬ್ಬರವಾಗಿ ಬಳಸಬಹುದು. ಇದರ ಬಳಕೆಯಿಂದ ಉತ್ತಮವಾದ ಫಸಲು ಪಡೆಯುವುದರ ಜೊತೆಗೆ ನೆಲದ ಫಲವತ್ತತೆಯೂ ವೃದ್ಧಿಯಾಗುತ್ತದೆ ಎಂದು ಕೃಷಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ’ ಎಂದು ಎಂದು ಬಿಬಿಎಂಪಿ ಜಂಟಿ ಆಯುಕ್ತ (ಕಸ ನಿರ್ವಹಣೆ) ಸರ್ಫರಾಜ್ ಖಾನ್ ‘ಪ್ರಜಾವಾಣಿಗೆ ತಿಳಿಸಿದರು.