<p><strong>ಬೆಂಗಳೂರು: </strong>ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ಮುದ್ದಿನ ಪಾಳ್ಯದ ಡಿ. ಗ್ರೂಪ್ ಬಡಾವಣೆಯ ರಿಲಯನ್ಸ್ ಫ್ರೆಶ್ ಮಾರ್ಟ್ ಹಾಗೂ ಉಡುಪಿ ಕೈರುಚಿ ಹೋಟೆಲ್ಗಳನ್ನು ಕೋವಿಡ್ ನಿಯಂತ್ರಣ ನಿಯಮಗಳನ್ನು ಪಾಲಿಸದ ಕಾರಣಕ್ಕೆ ಬಿಬಿಎಂಪಿ ಅಧಿಕಾರಿಗಳು ಮಂಗಳವಾರ ಮುಚ್ಚಿಸಿದ್ದಾರೆ.</p>.<p>ರಾಜರಾಜೇಶ್ವರಿ ನಗರ ವಲಯದ ಆರೋಗ್ಯಾಧಿಕಾರಿ ಡಾ. ಬಾಲಸುಂದರ್ ನೇತೃತ್ವದ ಅಧಿಕಾರಿಗಳ ತಂಡವು ಕೋವಿಡ್ ನಿಯಮಗಳ ಪಾಲನೆ ಪರಿಶೀಲನೆ ನಡೆಸುತ್ತಿತ್ತು. ಈ ವೇಳೆ ರಿಲಯನ್ಸ್ ಫ್ರೆಶ್ ಮಾರ್ಟ್ ಹಾಗೂ ‘ಉಡುಪಿ ಕೈರುಚಿ’ ಹೋಟೆಲ್ಗಳು ಕೋವಿಡ್ ಸೋಂಕು ಹರಡದಂತೆ ತಡೆಯಲು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸದಿರುವುದು ಕಂಡು ಬಂದಿತ್ತು.</p>.<p>‘ರಿಲಯನ್ಸ್ ಫ್ರೆಶ್ ಮಾರ್ಟ್ನಲ್ಲಿ ಹಾಗೂ ಉಡುಪಿ ಕೈರುಚಿ ಹೋಟೆಲ್ನಲ್ಲಿ ಯಾರೂ ಮಾಸ್ಕ್ ಧರಿಸಿರಲಿಲ್ಲ. ಸೋಂಕು ನಿವಾರಕ ದ್ರಾವಣದಿಂದ ಕೈತೊಳೆಯುವ ವ್ಯವಸ್ಥೆಯನ್ನೂ ಇಲ್ಲಿ ಕಲ್ಪಿಸಿರಲಿಲ್ಲ. ಗ್ರಾಹಕರ ದೇಹದ ಉಷ್ಣಾಂಶ ತಪಾಸಣೆಗೂ ವ್ಯವಸ್ಥೆ ಮಾಡಿರಲಿಲ್ಲ. ಹಾಗಾಗಿ ಇವುಗಳನ್ನು ಮುಚ್ಚಲಾಗಿದೆ’ ಎಂದು ಆರೋಗ್ಯಾಧಿಕಾರಿ ಡಾ.ಬಾಲಸುಂದರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ಮುದ್ದಿನ ಪಾಳ್ಯದ ಡಿ. ಗ್ರೂಪ್ ಬಡಾವಣೆಯ ರಿಲಯನ್ಸ್ ಫ್ರೆಶ್ ಮಾರ್ಟ್ ಹಾಗೂ ಉಡುಪಿ ಕೈರುಚಿ ಹೋಟೆಲ್ಗಳನ್ನು ಕೋವಿಡ್ ನಿಯಂತ್ರಣ ನಿಯಮಗಳನ್ನು ಪಾಲಿಸದ ಕಾರಣಕ್ಕೆ ಬಿಬಿಎಂಪಿ ಅಧಿಕಾರಿಗಳು ಮಂಗಳವಾರ ಮುಚ್ಚಿಸಿದ್ದಾರೆ.</p>.<p>ರಾಜರಾಜೇಶ್ವರಿ ನಗರ ವಲಯದ ಆರೋಗ್ಯಾಧಿಕಾರಿ ಡಾ. ಬಾಲಸುಂದರ್ ನೇತೃತ್ವದ ಅಧಿಕಾರಿಗಳ ತಂಡವು ಕೋವಿಡ್ ನಿಯಮಗಳ ಪಾಲನೆ ಪರಿಶೀಲನೆ ನಡೆಸುತ್ತಿತ್ತು. ಈ ವೇಳೆ ರಿಲಯನ್ಸ್ ಫ್ರೆಶ್ ಮಾರ್ಟ್ ಹಾಗೂ ‘ಉಡುಪಿ ಕೈರುಚಿ’ ಹೋಟೆಲ್ಗಳು ಕೋವಿಡ್ ಸೋಂಕು ಹರಡದಂತೆ ತಡೆಯಲು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸದಿರುವುದು ಕಂಡು ಬಂದಿತ್ತು.</p>.<p>‘ರಿಲಯನ್ಸ್ ಫ್ರೆಶ್ ಮಾರ್ಟ್ನಲ್ಲಿ ಹಾಗೂ ಉಡುಪಿ ಕೈರುಚಿ ಹೋಟೆಲ್ನಲ್ಲಿ ಯಾರೂ ಮಾಸ್ಕ್ ಧರಿಸಿರಲಿಲ್ಲ. ಸೋಂಕು ನಿವಾರಕ ದ್ರಾವಣದಿಂದ ಕೈತೊಳೆಯುವ ವ್ಯವಸ್ಥೆಯನ್ನೂ ಇಲ್ಲಿ ಕಲ್ಪಿಸಿರಲಿಲ್ಲ. ಗ್ರಾಹಕರ ದೇಹದ ಉಷ್ಣಾಂಶ ತಪಾಸಣೆಗೂ ವ್ಯವಸ್ಥೆ ಮಾಡಿರಲಿಲ್ಲ. ಹಾಗಾಗಿ ಇವುಗಳನ್ನು ಮುಚ್ಚಲಾಗಿದೆ’ ಎಂದು ಆರೋಗ್ಯಾಧಿಕಾರಿ ಡಾ.ಬಾಲಸುಂದರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>