<p><strong>ಕೆ.ಆರ್.ಪುರ:</strong> ಪೂರ್ವ ನಗರ ಪಾಲಿಕೆ ಕೆ.ಆರ್.ಪುರ ವಲಯದಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡಗಳ ತೆರವಿಗೆ ಕ್ರಮ ಕೈಗೊಳ್ಳುವಂತೆ ಜಂಟಿ ಆಯುಕ್ತೆ ಸುಧಾ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಹೊರಮಾವು– ಅಗರ ಗ್ರಾಮದ ಸರ್ವೆ ನಂ. 11/1, 11/2, 11/3, 11/4, 11/5ರ ಸೈಟ್ ನಂ 2ರಲ್ಲಿ ಮಂಜೂರಾತಿ ನಕ್ಷೆ ಉಲ್ಲಂಘಿಸಿ, ರಾಜಕಾಲುವೆ ಒತ್ತುವರಿ ಮಾಡಿಕೊಂಡು ನಿರ್ಮಿಸುತ್ತಿರುವ ಹಾಗೂ ನಿರ್ಮಿಸಿರುವ 39 ಅನಧಿಕೃತ ಕಟ್ಟಡಗಳ ತೆರವಿಗೆ ಆದೇಶಿಸಿದರು.</p>.<p>ರಾಜಕಾಲುವೆ ಬಫರ್ ವಲಯದ ನಿಯಮಾವಳಿಗಳನ್ನು ಉಲ್ಲಂಘಿಸಿ ಕಟ್ಟಡ ನಿರ್ಮಾಣ ಹಾಗೂ ಜಿಬಿಎ ಬೈಲಾಗಳನ್ನು ಉಲ್ಲಂಘಿಸಿ ಸೆಟ್ ಬ್ಯಾಕ್ ಬಿಡದೆ ಕಟ್ಟಡ ನಿರ್ಮಿಸಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅನಧಿಕೃತ ಕಟ್ಟಡ ಮತ್ತು ಕಟ್ಟಡದ ಹೆಚ್ಚುವರಿ ಅಂತಸ್ತುಗಳು ಕಟ್ಟಡದ ಉಲ್ಲಂಘನೆ ಭಾಗವನ್ನು ಕಟ್ಟಡದ ಮಾಲೀಕರು ತರೆವುಗೊಳಿಸಬೇಕು. ಇಲ್ಲದಿದ್ದರೆ ಜಿಬಿಎ ಕಾಯ್ದೆ 2024ರ ಕಲಂ 244(2)ಅಡಿಯಲ್ಲಿ ಪಾಲಿಕೆಯಿಂದಲೇ ತೆರವುಗೊಳಿಸಿ ಈ ಸಂಬಂಧ ತಗಲುವ ವೆಚ್ಚವನ್ನು ವಸೂಲಿ ಮಾಡಲಾಗುವುದು ಎಂದು ಒತ್ತುವರಿದಾರರಿಗೆ ನೋಟಿಸ್ ಜಾರಿ ಮಾಡಿದರು.</p>.<p>ತೆರವು ಕಾರ್ಯಚರಣೆ ವೇಳೆ ಪಾಲಿಕೆ ಅಧಿಕಾರಿಗಳಿಗೆ ಅಡ್ಡಿಪಡಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ಪೂರ್ವ ನಗರ ಪಾಲಿಕೆ ಕೆ.ಆರ್.ಪುರ ವಲಯದಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡಗಳ ತೆರವಿಗೆ ಕ್ರಮ ಕೈಗೊಳ್ಳುವಂತೆ ಜಂಟಿ ಆಯುಕ್ತೆ ಸುಧಾ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಹೊರಮಾವು– ಅಗರ ಗ್ರಾಮದ ಸರ್ವೆ ನಂ. 11/1, 11/2, 11/3, 11/4, 11/5ರ ಸೈಟ್ ನಂ 2ರಲ್ಲಿ ಮಂಜೂರಾತಿ ನಕ್ಷೆ ಉಲ್ಲಂಘಿಸಿ, ರಾಜಕಾಲುವೆ ಒತ್ತುವರಿ ಮಾಡಿಕೊಂಡು ನಿರ್ಮಿಸುತ್ತಿರುವ ಹಾಗೂ ನಿರ್ಮಿಸಿರುವ 39 ಅನಧಿಕೃತ ಕಟ್ಟಡಗಳ ತೆರವಿಗೆ ಆದೇಶಿಸಿದರು.</p>.<p>ರಾಜಕಾಲುವೆ ಬಫರ್ ವಲಯದ ನಿಯಮಾವಳಿಗಳನ್ನು ಉಲ್ಲಂಘಿಸಿ ಕಟ್ಟಡ ನಿರ್ಮಾಣ ಹಾಗೂ ಜಿಬಿಎ ಬೈಲಾಗಳನ್ನು ಉಲ್ಲಂಘಿಸಿ ಸೆಟ್ ಬ್ಯಾಕ್ ಬಿಡದೆ ಕಟ್ಟಡ ನಿರ್ಮಿಸಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅನಧಿಕೃತ ಕಟ್ಟಡ ಮತ್ತು ಕಟ್ಟಡದ ಹೆಚ್ಚುವರಿ ಅಂತಸ್ತುಗಳು ಕಟ್ಟಡದ ಉಲ್ಲಂಘನೆ ಭಾಗವನ್ನು ಕಟ್ಟಡದ ಮಾಲೀಕರು ತರೆವುಗೊಳಿಸಬೇಕು. ಇಲ್ಲದಿದ್ದರೆ ಜಿಬಿಎ ಕಾಯ್ದೆ 2024ರ ಕಲಂ 244(2)ಅಡಿಯಲ್ಲಿ ಪಾಲಿಕೆಯಿಂದಲೇ ತೆರವುಗೊಳಿಸಿ ಈ ಸಂಬಂಧ ತಗಲುವ ವೆಚ್ಚವನ್ನು ವಸೂಲಿ ಮಾಡಲಾಗುವುದು ಎಂದು ಒತ್ತುವರಿದಾರರಿಗೆ ನೋಟಿಸ್ ಜಾರಿ ಮಾಡಿದರು.</p>.<p>ತೆರವು ಕಾರ್ಯಚರಣೆ ವೇಳೆ ಪಾಲಿಕೆ ಅಧಿಕಾರಿಗಳಿಗೆ ಅಡ್ಡಿಪಡಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>