<p>ಬೆಂಗಳೂರು: ಬಿಬಿಎಂಪಿಯ ಶಾಲಾ ಕಾಲೇಜುಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕರಿಗೆ ‘ಸಮಾನ ಕೆಲಸಕ್ಕೆ ಸಮಾನ ವೇತನ’ ನೀಡುವ ಕುರಿತು ಕೌನ್ಸಿಲ್ ಸಭೆಯಲ್ಲಿ ಮಂಗಳವಾರ ನಿರ್ಣಯ ಕೈಗೊಳ್ಳಲಾಯಿತು.</p>.<p>ಬಿಬಿಎಂಪಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಹೊರಗುತ್ತಿಗೆ ಶಿಕ್ಷಕರು ಈಗಲೂ ತಿಂಗಳಿಗೆ ₹ 8 ಸಾವಿರದಿಂದ ₹13 ಸಾವಿರ ಗೌರವಧನ ಪಡೆಯುತ್ತಿದ್ದಾರೆ. ಈ ನಿರ್ಣಯ ಜಾರಿಯಾದರೆ ಅವರಿಗೂ ಕಾಯಂ ಶಿಕ್ಷಕರ ವೇತನದಷ್ಟೇ ಗೌರವಧನ ಸಿಗಲಿದೆ.</p>.<p>ಕೌನ್ಸಿಲ್ ನಿರ್ಣಯದ ಬಗ್ಗೆ ಪ್ರತಿಕ್ರಿಯಿಸಿದ ಬಿಬಿಎಂಪಿ ಹೊರಗುತ್ತಿಗೆ ಶಿಕ್ಷಕರ ಸಂಘದ ಅಧ್ಯಕ್ಷ ಎನ್.ಲೋಕೇಶ್, ‘ಈ ನಿರ್ಣಯ ಕೈಗೊಂಡಿದ್ದಕ್ಕೆ ಧನ್ಯವಾದ. ಈ ಬಗ್ಗೆ ಈಗಲೇ ಸಂತೋಷ ಪಡುವ ಪರಿಸ್ಥಿತಿಯಲ್ಲಿ ನಾವಿಲ್ಲ. ಟೈಲರಿಂಗ್ ತರಬೇತಿ ಶಿಕ್ಷಕಿಯರಿಗೆ ಸಮಾನ ವೇತನ ಜಾರಿ ಮಾಡಲಾಗಿದೆ. ಅದೇ ರೀತಿ ನಮಗೂ ಶೀಘ್ರ ಜಾರಿಗೊಳಿಸಬೇಕು. ಆಗ ನಾವೂ ಖುಷಿಪಡಬಹುದು’ ಎಂದರು.</p>.<p>‘ಹೊರಗುತ್ತಿಗೆ ತೆಗೆದು, ನೇರ ಗುತ್ತಿಗೆ ಪದ್ಧತಿ ಜಾರಿಗೊಳಿಸಿದರೆ ನಮ್ಮ ನೇಮಕಾತಿಗೆ ಅನುಕೂಲವಾಗುತ್ತದೆ. ಈ ಮಾರ್ಪಾಡನ್ನೂ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>ಮೇಯರ್, ಬಿಬಿಎಂಪಿ ಆಡಳಿತ ಪಕ್ಷದ ನಾಯಕರು, ವಿರೋಧ ಪಕ್ಷದ ನಾಯಕರು ಹಾಗೂ ಪಾಲಿಕೆ ಸದಸ್ಯರನ್ನು ಭೇಟಿಯಾಗಿ ಶಿಕ್ಷಕರು ತಮ್ಮ ಸಂಕಷ್ಟು ಹೇಳಿಕೊಂಡಿದ್ದರು.</p>.<p>ಶಿಕ್ಷಕರು ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ ‘ಪ್ರಜಾವಾಣಿ’ಯು ಸೆ.6ರ (ಭಾನುವಾರ) ಸಂಚಿಕೆಯಲ್ಲಿ ‘ಐದು ತಿಂಗಳಿನಿಂದ ಗೌರವಧನವಿಲ್ಲದೆಯೇ ಜೀವನ’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿ ಗಮನ ಸೆಳೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಬಿಬಿಎಂಪಿಯ ಶಾಲಾ ಕಾಲೇಜುಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕರಿಗೆ ‘ಸಮಾನ ಕೆಲಸಕ್ಕೆ ಸಮಾನ ವೇತನ’ ನೀಡುವ ಕುರಿತು ಕೌನ್ಸಿಲ್ ಸಭೆಯಲ್ಲಿ ಮಂಗಳವಾರ ನಿರ್ಣಯ ಕೈಗೊಳ್ಳಲಾಯಿತು.</p>.<p>ಬಿಬಿಎಂಪಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಹೊರಗುತ್ತಿಗೆ ಶಿಕ್ಷಕರು ಈಗಲೂ ತಿಂಗಳಿಗೆ ₹ 8 ಸಾವಿರದಿಂದ ₹13 ಸಾವಿರ ಗೌರವಧನ ಪಡೆಯುತ್ತಿದ್ದಾರೆ. ಈ ನಿರ್ಣಯ ಜಾರಿಯಾದರೆ ಅವರಿಗೂ ಕಾಯಂ ಶಿಕ್ಷಕರ ವೇತನದಷ್ಟೇ ಗೌರವಧನ ಸಿಗಲಿದೆ.</p>.<p>ಕೌನ್ಸಿಲ್ ನಿರ್ಣಯದ ಬಗ್ಗೆ ಪ್ರತಿಕ್ರಿಯಿಸಿದ ಬಿಬಿಎಂಪಿ ಹೊರಗುತ್ತಿಗೆ ಶಿಕ್ಷಕರ ಸಂಘದ ಅಧ್ಯಕ್ಷ ಎನ್.ಲೋಕೇಶ್, ‘ಈ ನಿರ್ಣಯ ಕೈಗೊಂಡಿದ್ದಕ್ಕೆ ಧನ್ಯವಾದ. ಈ ಬಗ್ಗೆ ಈಗಲೇ ಸಂತೋಷ ಪಡುವ ಪರಿಸ್ಥಿತಿಯಲ್ಲಿ ನಾವಿಲ್ಲ. ಟೈಲರಿಂಗ್ ತರಬೇತಿ ಶಿಕ್ಷಕಿಯರಿಗೆ ಸಮಾನ ವೇತನ ಜಾರಿ ಮಾಡಲಾಗಿದೆ. ಅದೇ ರೀತಿ ನಮಗೂ ಶೀಘ್ರ ಜಾರಿಗೊಳಿಸಬೇಕು. ಆಗ ನಾವೂ ಖುಷಿಪಡಬಹುದು’ ಎಂದರು.</p>.<p>‘ಹೊರಗುತ್ತಿಗೆ ತೆಗೆದು, ನೇರ ಗುತ್ತಿಗೆ ಪದ್ಧತಿ ಜಾರಿಗೊಳಿಸಿದರೆ ನಮ್ಮ ನೇಮಕಾತಿಗೆ ಅನುಕೂಲವಾಗುತ್ತದೆ. ಈ ಮಾರ್ಪಾಡನ್ನೂ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>ಮೇಯರ್, ಬಿಬಿಎಂಪಿ ಆಡಳಿತ ಪಕ್ಷದ ನಾಯಕರು, ವಿರೋಧ ಪಕ್ಷದ ನಾಯಕರು ಹಾಗೂ ಪಾಲಿಕೆ ಸದಸ್ಯರನ್ನು ಭೇಟಿಯಾಗಿ ಶಿಕ್ಷಕರು ತಮ್ಮ ಸಂಕಷ್ಟು ಹೇಳಿಕೊಂಡಿದ್ದರು.</p>.<p>ಶಿಕ್ಷಕರು ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ ‘ಪ್ರಜಾವಾಣಿ’ಯು ಸೆ.6ರ (ಭಾನುವಾರ) ಸಂಚಿಕೆಯಲ್ಲಿ ‘ಐದು ತಿಂಗಳಿನಿಂದ ಗೌರವಧನವಿಲ್ಲದೆಯೇ ಜೀವನ’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿ ಗಮನ ಸೆಳೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>