<p><strong>ಬೆಂಗಳೂರು:</strong> ಕೇರಳದಿಂದ ನಗರಕ್ಕೆ ಬರುವ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳು ಕಡ್ಡಾಯವಾಗಿ ಆರ್ಟಿ ಪಿಸಿಆರ್ ನೆಗೆಟಿವ್ ವರದಿ ತಂದಿರಬೇಕು. ಇಲ್ಲದಿದ್ದರೆ, ಸಂಬಂಧಪಟ್ಟ ಕಾಲೇಜು ಅಥವಾ ಕಂಪನಿಗಳು ಅವರನ್ನು 7 ದಿನ ಕ್ವಾರಂಟೈನ್ನಲ್ಲಿ ಇರಿಸಿ, ನಂತರ ಕೋವಿಡ್ ಪರೀಕ್ಷೆ ಮಾಡಿಸಬೇಕು ಎಂದು ಬಿಬಿಎಂಪಿ ಸೂಚನೆ ನೀಡಿದೆ.</p>.<p>ಕಾಲೇಜುಗಳು ವಸತಿ ನಿಲಯಗಳಲ್ಲಿ ಪ್ರತ್ಯೇಕ ಪ್ರದೇಶವನ್ನು ಸಾಂಸ್ಥಿಕ ಕ್ವಾರಂಟೈನ್ಗೆ ಮೀಸಲಿಡಬೇಕು. ಕ್ವಾರಂಟೈನ್ನಲ್ಲಿರುವ ವಿದ್ಯಾರ್ಥಿಗಳ ದೈನಂದಿನ ಅವಶ್ಯಕತೆಗಳ ಪೂರೈಕೆಗೂ ಕಾಲೇಜುಗಳು ವ್ಯವಸ್ಥೆ ಮಾಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಸೂಚನೆ ನೀಡಿದ್ದಾರೆ.</p>.<p>‘ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಉದ್ಯೋಗಿಗಳು, ಕೇರಳದಿಂದ ಬಂದಿದ್ದಲ್ಲಿ ಅಥವಾ ಕಳೆದ 7 ದಿನಗಳಲ್ಲಿ ಕೇರಳಕ್ಕೆ ಭೇಟಿ ನೀಡಿದ್ದಲ್ಲಿ ಅಂತಹ ಉದ್ಯೋಗಿಗಳನ್ನು ಆಯಾ ಸಂಸ್ಥೆಯ ಆಡಳಿತ ಮಂಡಳಿಯವರು ಕ್ವಾರಂಟೈನ್ನಲ್ಲಿ ಇಡುವಂತೆ ವ್ಯವಸ್ಥೆ ಮಾಡಬೇಕು ಮತ್ತು ಮಾಹಿತಿಯನ್ನು ಪಾಲಿಕೆಯ ಸ್ಥಳೀಯ ಆರೋಗ್ಯಾಧಿಕಾರಿಗಳಿಗೆ ನೀಡಬೇಕು ಎಂದು ಸೂಚನೆ ನೀಡಲಾಗಿದೆ.</p>.<p><strong>ಕಾರ್ಯಕ್ರಮಗಳಿಗೆ ಅವಕಾಶ: </strong>‘ಮದುವೆ ಅಥವಾ ಕೌಟುಂಬಿಕ ಕಾರ್ಯಕ್ರಮಗಳಿಗೆ ಒಳಾಂಗಣದ ಶೇ. 50ರಷ್ಟು ಸಾಮರ್ಥ್ಯದಿಂದ ಗರಿಷ್ಠ 400 ಅತಿಥಿಗಳ ಸಂಖ್ಯೆಗೆ ಮಿತಿಗೊಳಿಸಿ, ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸುವ ಷರತ್ತಿನೊಂದಿಗೆ ಅನುಮತಿ ನೀಡಬೇಕು’ ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೇರಳದಿಂದ ನಗರಕ್ಕೆ ಬರುವ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳು ಕಡ್ಡಾಯವಾಗಿ ಆರ್ಟಿ ಪಿಸಿಆರ್ ನೆಗೆಟಿವ್ ವರದಿ ತಂದಿರಬೇಕು. ಇಲ್ಲದಿದ್ದರೆ, ಸಂಬಂಧಪಟ್ಟ ಕಾಲೇಜು ಅಥವಾ ಕಂಪನಿಗಳು ಅವರನ್ನು 7 ದಿನ ಕ್ವಾರಂಟೈನ್ನಲ್ಲಿ ಇರಿಸಿ, ನಂತರ ಕೋವಿಡ್ ಪರೀಕ್ಷೆ ಮಾಡಿಸಬೇಕು ಎಂದು ಬಿಬಿಎಂಪಿ ಸೂಚನೆ ನೀಡಿದೆ.</p>.<p>ಕಾಲೇಜುಗಳು ವಸತಿ ನಿಲಯಗಳಲ್ಲಿ ಪ್ರತ್ಯೇಕ ಪ್ರದೇಶವನ್ನು ಸಾಂಸ್ಥಿಕ ಕ್ವಾರಂಟೈನ್ಗೆ ಮೀಸಲಿಡಬೇಕು. ಕ್ವಾರಂಟೈನ್ನಲ್ಲಿರುವ ವಿದ್ಯಾರ್ಥಿಗಳ ದೈನಂದಿನ ಅವಶ್ಯಕತೆಗಳ ಪೂರೈಕೆಗೂ ಕಾಲೇಜುಗಳು ವ್ಯವಸ್ಥೆ ಮಾಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಸೂಚನೆ ನೀಡಿದ್ದಾರೆ.</p>.<p>‘ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಉದ್ಯೋಗಿಗಳು, ಕೇರಳದಿಂದ ಬಂದಿದ್ದಲ್ಲಿ ಅಥವಾ ಕಳೆದ 7 ದಿನಗಳಲ್ಲಿ ಕೇರಳಕ್ಕೆ ಭೇಟಿ ನೀಡಿದ್ದಲ್ಲಿ ಅಂತಹ ಉದ್ಯೋಗಿಗಳನ್ನು ಆಯಾ ಸಂಸ್ಥೆಯ ಆಡಳಿತ ಮಂಡಳಿಯವರು ಕ್ವಾರಂಟೈನ್ನಲ್ಲಿ ಇಡುವಂತೆ ವ್ಯವಸ್ಥೆ ಮಾಡಬೇಕು ಮತ್ತು ಮಾಹಿತಿಯನ್ನು ಪಾಲಿಕೆಯ ಸ್ಥಳೀಯ ಆರೋಗ್ಯಾಧಿಕಾರಿಗಳಿಗೆ ನೀಡಬೇಕು ಎಂದು ಸೂಚನೆ ನೀಡಲಾಗಿದೆ.</p>.<p><strong>ಕಾರ್ಯಕ್ರಮಗಳಿಗೆ ಅವಕಾಶ: </strong>‘ಮದುವೆ ಅಥವಾ ಕೌಟುಂಬಿಕ ಕಾರ್ಯಕ್ರಮಗಳಿಗೆ ಒಳಾಂಗಣದ ಶೇ. 50ರಷ್ಟು ಸಾಮರ್ಥ್ಯದಿಂದ ಗರಿಷ್ಠ 400 ಅತಿಥಿಗಳ ಸಂಖ್ಯೆಗೆ ಮಿತಿಗೊಳಿಸಿ, ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸುವ ಷರತ್ತಿನೊಂದಿಗೆ ಅನುಮತಿ ನೀಡಬೇಕು’ ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>