ಬೆಂಗಳೂರು: ಕೇರಳದಿಂದ ನಗರಕ್ಕೆ ಬರುವ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳು ಕಡ್ಡಾಯವಾಗಿ ಆರ್ಟಿ ಪಿಸಿಆರ್ ನೆಗೆಟಿವ್ ವರದಿ ತಂದಿರಬೇಕು. ಇಲ್ಲದಿದ್ದರೆ, ಸಂಬಂಧಪಟ್ಟ ಕಾಲೇಜು ಅಥವಾ ಕಂಪನಿಗಳು ಅವರನ್ನು 7 ದಿನ ಕ್ವಾರಂಟೈನ್ನಲ್ಲಿ ಇರಿಸಿ, ನಂತರ ಕೋವಿಡ್ ಪರೀಕ್ಷೆ ಮಾಡಿಸಬೇಕು ಎಂದು ಬಿಬಿಎಂಪಿ ಸೂಚನೆ ನೀಡಿದೆ.