<p><strong>ಬೆಂಗಳೂರು: </strong>‘ಸುಪ್ರೀಂ ಕೋರ್ಟ್ ತೀರ್ಪನ್ನು ಮುಂದಿಟ್ಟುಕೊಂಡು ಬಡವರ ಮನೆಗಳನ್ನು ಕೆಡವಲಾಗುತ್ತಿದೆ. ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದವರ ಮನೆಗಳನ್ನು ತೆರವುಗೊಳಿಸುವಂತೆ ರಾಷ್ಟ್ರೀಯ ಹಸಿರು ಮಂಡಳಿ ತೀರ್ಪು ನೀಡಿದಾಗಲೂ ಬಡವರ ಮನೆಗಳನ್ನು ಮಾತ್ರ ಧ್ವಂಸಗೊಳಿಸಲಾಯಿತು. ನಟ ದರ್ಶನ್, ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಅವರಿಗೆ ಮಾತ್ರ ಈ ತೀರ್ಪನ್ನು ಅನ್ವಯಿಸಲಿಲ್ಲ’ ಎಂದು ಶಾಸಕ ಆರ್. ಮಂಜುನಾಥ್ ದೂರಿದರು.</p>.<p>‘ಈ ಜನರು ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿದ್ದರೆ ಕ್ರಮ ತೆಗೆದುಕೊಳ್ಳಬಹುದಿತ್ತು. ಆದರೆ, ತಾವು ಉಳುಮೆಗಾಗಿ ಇಟ್ಟುಕೊಂಡಿದ್ದ ಜಾಗದಲ್ಲಿ ಮನೆ ಕಟ್ಟಿದ್ದಾರೆ’ ಎಂದರು.</p>.<p>‘ಭೂಮಿ ಕಳೆದುಕೊಳ್ಳುತ್ತಿರುವ ಸಂತ್ರಸ್ತರು ಅರ್ಜಿ ಸಲ್ಲಿಸಲು 2022 ಫೆ.15ರವರೆಗೆ ಅವಕಾಶವಿದೆ. ಆದರೆ ಬಿಡಿಎ ಅಧಿಕಾರಿಗಳು ನ್ಯಾಯಾಲಯದ ಆದೇಶದ ನೆಪದಲ್ಲಿ ಮನೆಗಳನ್ನು ಉರುಳಿಸಿ ದೌರ್ಜನ್ಯ ಎಸಗುತ್ತಿದ್ದಾರೆ’ ಎಂದು ಟೀಕಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/district/bengaluru-city/shivaram-karanth-layout-encroachment-hd-kumaraswamy-853535.html" target="_blank">ಒತ್ತುವರಿ ತೆರವು| ಕಾನೂನು ಹೋರಾಟ ಬೆಂಬಲಿಸಲು ಸಿದ್ಧ: ಎಚ್ಡಿಕೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಸುಪ್ರೀಂ ಕೋರ್ಟ್ ತೀರ್ಪನ್ನು ಮುಂದಿಟ್ಟುಕೊಂಡು ಬಡವರ ಮನೆಗಳನ್ನು ಕೆಡವಲಾಗುತ್ತಿದೆ. ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದವರ ಮನೆಗಳನ್ನು ತೆರವುಗೊಳಿಸುವಂತೆ ರಾಷ್ಟ್ರೀಯ ಹಸಿರು ಮಂಡಳಿ ತೀರ್ಪು ನೀಡಿದಾಗಲೂ ಬಡವರ ಮನೆಗಳನ್ನು ಮಾತ್ರ ಧ್ವಂಸಗೊಳಿಸಲಾಯಿತು. ನಟ ದರ್ಶನ್, ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಅವರಿಗೆ ಮಾತ್ರ ಈ ತೀರ್ಪನ್ನು ಅನ್ವಯಿಸಲಿಲ್ಲ’ ಎಂದು ಶಾಸಕ ಆರ್. ಮಂಜುನಾಥ್ ದೂರಿದರು.</p>.<p>‘ಈ ಜನರು ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿದ್ದರೆ ಕ್ರಮ ತೆಗೆದುಕೊಳ್ಳಬಹುದಿತ್ತು. ಆದರೆ, ತಾವು ಉಳುಮೆಗಾಗಿ ಇಟ್ಟುಕೊಂಡಿದ್ದ ಜಾಗದಲ್ಲಿ ಮನೆ ಕಟ್ಟಿದ್ದಾರೆ’ ಎಂದರು.</p>.<p>‘ಭೂಮಿ ಕಳೆದುಕೊಳ್ಳುತ್ತಿರುವ ಸಂತ್ರಸ್ತರು ಅರ್ಜಿ ಸಲ್ಲಿಸಲು 2022 ಫೆ.15ರವರೆಗೆ ಅವಕಾಶವಿದೆ. ಆದರೆ ಬಿಡಿಎ ಅಧಿಕಾರಿಗಳು ನ್ಯಾಯಾಲಯದ ಆದೇಶದ ನೆಪದಲ್ಲಿ ಮನೆಗಳನ್ನು ಉರುಳಿಸಿ ದೌರ್ಜನ್ಯ ಎಸಗುತ್ತಿದ್ದಾರೆ’ ಎಂದು ಟೀಕಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/district/bengaluru-city/shivaram-karanth-layout-encroachment-hd-kumaraswamy-853535.html" target="_blank">ಒತ್ತುವರಿ ತೆರವು| ಕಾನೂನು ಹೋರಾಟ ಬೆಂಬಲಿಸಲು ಸಿದ್ಧ: ಎಚ್ಡಿಕೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>