<p><strong>ಬೆಂಗಳೂರು</strong>: ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಬಸವನಪುರ ಕೆರೆಗೆ ಒಳಚರಂಡಿಯ ಕೊಳಚೆ ನೀರು ಹರಿಯುವುದನ್ನು ತಡೆಯಲಾಗಿದೆ. ಕೊಳಚೆ ನೀರು ಕೆರೆಗೆ ಸೇರುವುದನ್ನು ತಡೆಯುವ ಕೊಳವೆ ಮಾರ್ಗವನ್ನು ಬಿಬಿಎಂಪಿ ಕೆರೆ ವಿಭಾಗದ ಅಧಿಕಾರಿಗಳು ದುರಸ್ತಿ ಪಡಿಸಿದ್ದಾರೆ.</p>.<p>ಬಸವನಪುರ ಕೆರೆಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ‘ಪ್ರಜಾವಾಣಿ’ಯು ಶುಕ್ರವಾರದ ಸಂಚಿಕೆಯಲ್ಲಿ ವಿಶೇಷ ವರದಿ ಪ್ರಕಟಿಸಿತ್ತು. ಅದೇ ದಿನ ಬಿಬಿಎಂಪಿ ಅಧಿಕಾರಿಗಳು ದುರಸ್ತಿ ಕಾರ್ಯ ಕೈಗೊಂಡಿದ್ದರು.</p>.<p>‘ಕೊಳಚೆ ನೀರು ಬಸವನಪುರ ಕೆರೆಗೆ ಸೇರದಂತೆ ತಡೆಯಲು ಅಳವಡಿಸಿದ್ದ ಕೊಳವೆಯಲ್ಲಿ ತ್ಯಾಜ್ಯ ನೀರು ಹರಿಯುವಿಕೆ ಪ್ರಮಾಣ ಇತ್ತೀಚೆಗೆ ತೀರಾ ಹೆಚ್ಚಳವಾಗಿತ್ತು. ಈ ಕೊಳವೆಯೊಳಗೆ ಪ್ಲಾಸ್ಟಿಕ್ ಮತ್ತಿತರ ಕಸಗಳು ಕಟ್ಟಿಕೊಂಡು ತ್ಯಾಜ್ಯ ನೀರಿನ ಸಹಜ ಹರಿವಿಗೆ ಅಡ್ಡಿ ಉಂಟಾಗಿತ್ತು. ಕಟ್ಟಿಕೊಂಡಿದ್ದ ಕಸಗಳನ್ನು ತೆಗೆಸಿ ನೀರು ಸರಾಗವಾಗಿ ಹರಿಯುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದೇವೆ’ ಎಂದು ಬಿಬಿಎಂಪಿ ಕೆರೆ ವಿಭಾಗದ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.<p>‘ದುರಸ್ತಿ ಕಾರ್ಯ ಕೈಗೊಂಡ ಬಳಿಕ ಬಸವನಪುರ ಕೆರೆಗೆ ಯಾವುದೇ ಕೊಳಚೆ ನೀರು ಸೇರುತ್ತಿಲ್ಲ. ಇನ್ನೂ ಕೆಲವು ದಿನಗಳ ಕಾಲ ಕೆರೆಗೆ ಕೊಳಚೆ ನೀರು ಸೇರುತ್ತದೆಯೋ ಇಲ್ಲವೋ ಎಂಬ ಬಗ್ಗೆ ನಿಗಾ ಇಟ್ಟು ಮತ್ತೊಮ್ಮೆ ಖಚಿತಪಡಿಸಿಕೊಳ್ಳಲಿದ್ದೇವೆ’ ಎಂದರು.</p>.<p>‘ಕೆರೆಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ಗಮನಕ್ಕೆ ತಂದ ತಕ್ಷಣವೇ ಬಿಬಿಎಂಪಿ ಕೆರೆ ವಿಭಾಗದ ಅಧಿಕಾರಿಗಳು ಸ್ಪಂದಿಸಿದ್ದಾರೆ. ಶುಕ್ರವಾರ ಮುಂಜಾನೆ 3 ಗಂಟೆವರೆಗೂ ದುರಸ್ತಿ ಕಾರ್ಯ ಕೈಗೊಳ್ಳುವ ಮೂಲಕ ಸಮಸ್ಯೆ ನೀವಾರಿಸಿದ್ದಾರೆ. ಅವರಿಗೆ ಧನ್ಯವಾದಗಳು’ ಎಂದು ಸ್ಥಳೀಯ ನಿವಾಸಿ ಬಾಲಾಜಿ ರಘೋತ್ತಮ ಬಾಲಿ ತಿಳಿಸಿದರು.</p>.<p>18 ಎಕರೆ ವಿಸ್ತೀರ್ಣದ ಈ ವಿಶಾಲ ಕೆರೆಯನ್ನು ಐದು ವರ್ಷಗಳ ಹಿಂದೆ ಬಿಬಿಎಂಪಿಯು ₹ 3.5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿತ್ತು. ಕೊಳಚೆ ನೀರಿನಿಂದ ಕಲುಷಿತಗೊಂಡಿದ್ದ ಈ ಜಲಕಾಯಕ್ಕೆ ಒಳಚರಂಡಿಯ ತ್ಯಾಜ್ಯ ನೀರು ಸೇರದಂತೆ ವ್ಯವಸ್ಥೆ ಕಲ್ಪಿಸಿತ್ತು. ಆ ಬಳಿಕ ಸ್ವತಂತ್ರನಗರ, ಕೊಡಿಗೆಹಳ್ಳಿ ರಸ್ತೆಗಳ ಪ್ರದೇಶದ ಮಳೆನೀರು ಮಾತ್ರ ಈ ಕೆರೆಗೆ ಹರಿದುಬರುತ್ತಿತ್ತು.</p>.<p>ಈ ಸಲ ಮೊದಲ ಮಳೆಗೆ ಈ ಕೆರೆ ತುಂಬಿ ಕೋಡಿ ಹರಿದಿತ್ತು. ಇದರಿಂದ ಸಂಭ್ರಮ ಪಟ್ಟಿದ್ದ ಸ್ಥಳೀಯರು ಸೋಮವಾರ ಕೆರೆಗೆ ಬಾಗೀನವನ್ನೂ ಸಮರ್ಪಿಸಿದ್ದರು. ಇದಾಗಿ ಎರಡೇ ದಿನದಲ್ಲೇ ಕೆರೆಗೆ ಕೊಳಚೆ ನೀರು ಸೇರಲು ಶುರುವಾಗಿತ್ತು. ತಿಳಿಯಾಗಿದ್ದ ಕೆರೆಯ ನೀರಿನ ಬಣ್ಣ ನಿಧಾನವಾಗಿ ನೀಲಿ ಬಣ್ಣಕ್ಕೆ ತಿರುಗಲು ಆರಂಭವಾಗಿತ್ತು. ಈ ಬಗ್ಗೆ ವಿಶೇಷ ವರದಿ ಪ್ರಕಟಿಸುವ ಮೂಲಕ ‘ಪ್ರಜಾವಾಣಿ’ ಅಧಿಕಾರಿಗಳ ಗಮನ ಸೆಳೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಬಸವನಪುರ ಕೆರೆಗೆ ಒಳಚರಂಡಿಯ ಕೊಳಚೆ ನೀರು ಹರಿಯುವುದನ್ನು ತಡೆಯಲಾಗಿದೆ. ಕೊಳಚೆ ನೀರು ಕೆರೆಗೆ ಸೇರುವುದನ್ನು ತಡೆಯುವ ಕೊಳವೆ ಮಾರ್ಗವನ್ನು ಬಿಬಿಎಂಪಿ ಕೆರೆ ವಿಭಾಗದ ಅಧಿಕಾರಿಗಳು ದುರಸ್ತಿ ಪಡಿಸಿದ್ದಾರೆ.</p>.<p>ಬಸವನಪುರ ಕೆರೆಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ‘ಪ್ರಜಾವಾಣಿ’ಯು ಶುಕ್ರವಾರದ ಸಂಚಿಕೆಯಲ್ಲಿ ವಿಶೇಷ ವರದಿ ಪ್ರಕಟಿಸಿತ್ತು. ಅದೇ ದಿನ ಬಿಬಿಎಂಪಿ ಅಧಿಕಾರಿಗಳು ದುರಸ್ತಿ ಕಾರ್ಯ ಕೈಗೊಂಡಿದ್ದರು.</p>.<p>‘ಕೊಳಚೆ ನೀರು ಬಸವನಪುರ ಕೆರೆಗೆ ಸೇರದಂತೆ ತಡೆಯಲು ಅಳವಡಿಸಿದ್ದ ಕೊಳವೆಯಲ್ಲಿ ತ್ಯಾಜ್ಯ ನೀರು ಹರಿಯುವಿಕೆ ಪ್ರಮಾಣ ಇತ್ತೀಚೆಗೆ ತೀರಾ ಹೆಚ್ಚಳವಾಗಿತ್ತು. ಈ ಕೊಳವೆಯೊಳಗೆ ಪ್ಲಾಸ್ಟಿಕ್ ಮತ್ತಿತರ ಕಸಗಳು ಕಟ್ಟಿಕೊಂಡು ತ್ಯಾಜ್ಯ ನೀರಿನ ಸಹಜ ಹರಿವಿಗೆ ಅಡ್ಡಿ ಉಂಟಾಗಿತ್ತು. ಕಟ್ಟಿಕೊಂಡಿದ್ದ ಕಸಗಳನ್ನು ತೆಗೆಸಿ ನೀರು ಸರಾಗವಾಗಿ ಹರಿಯುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದೇವೆ’ ಎಂದು ಬಿಬಿಎಂಪಿ ಕೆರೆ ವಿಭಾಗದ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.<p>‘ದುರಸ್ತಿ ಕಾರ್ಯ ಕೈಗೊಂಡ ಬಳಿಕ ಬಸವನಪುರ ಕೆರೆಗೆ ಯಾವುದೇ ಕೊಳಚೆ ನೀರು ಸೇರುತ್ತಿಲ್ಲ. ಇನ್ನೂ ಕೆಲವು ದಿನಗಳ ಕಾಲ ಕೆರೆಗೆ ಕೊಳಚೆ ನೀರು ಸೇರುತ್ತದೆಯೋ ಇಲ್ಲವೋ ಎಂಬ ಬಗ್ಗೆ ನಿಗಾ ಇಟ್ಟು ಮತ್ತೊಮ್ಮೆ ಖಚಿತಪಡಿಸಿಕೊಳ್ಳಲಿದ್ದೇವೆ’ ಎಂದರು.</p>.<p>‘ಕೆರೆಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ಗಮನಕ್ಕೆ ತಂದ ತಕ್ಷಣವೇ ಬಿಬಿಎಂಪಿ ಕೆರೆ ವಿಭಾಗದ ಅಧಿಕಾರಿಗಳು ಸ್ಪಂದಿಸಿದ್ದಾರೆ. ಶುಕ್ರವಾರ ಮುಂಜಾನೆ 3 ಗಂಟೆವರೆಗೂ ದುರಸ್ತಿ ಕಾರ್ಯ ಕೈಗೊಳ್ಳುವ ಮೂಲಕ ಸಮಸ್ಯೆ ನೀವಾರಿಸಿದ್ದಾರೆ. ಅವರಿಗೆ ಧನ್ಯವಾದಗಳು’ ಎಂದು ಸ್ಥಳೀಯ ನಿವಾಸಿ ಬಾಲಾಜಿ ರಘೋತ್ತಮ ಬಾಲಿ ತಿಳಿಸಿದರು.</p>.<p>18 ಎಕರೆ ವಿಸ್ತೀರ್ಣದ ಈ ವಿಶಾಲ ಕೆರೆಯನ್ನು ಐದು ವರ್ಷಗಳ ಹಿಂದೆ ಬಿಬಿಎಂಪಿಯು ₹ 3.5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿತ್ತು. ಕೊಳಚೆ ನೀರಿನಿಂದ ಕಲುಷಿತಗೊಂಡಿದ್ದ ಈ ಜಲಕಾಯಕ್ಕೆ ಒಳಚರಂಡಿಯ ತ್ಯಾಜ್ಯ ನೀರು ಸೇರದಂತೆ ವ್ಯವಸ್ಥೆ ಕಲ್ಪಿಸಿತ್ತು. ಆ ಬಳಿಕ ಸ್ವತಂತ್ರನಗರ, ಕೊಡಿಗೆಹಳ್ಳಿ ರಸ್ತೆಗಳ ಪ್ರದೇಶದ ಮಳೆನೀರು ಮಾತ್ರ ಈ ಕೆರೆಗೆ ಹರಿದುಬರುತ್ತಿತ್ತು.</p>.<p>ಈ ಸಲ ಮೊದಲ ಮಳೆಗೆ ಈ ಕೆರೆ ತುಂಬಿ ಕೋಡಿ ಹರಿದಿತ್ತು. ಇದರಿಂದ ಸಂಭ್ರಮ ಪಟ್ಟಿದ್ದ ಸ್ಥಳೀಯರು ಸೋಮವಾರ ಕೆರೆಗೆ ಬಾಗೀನವನ್ನೂ ಸಮರ್ಪಿಸಿದ್ದರು. ಇದಾಗಿ ಎರಡೇ ದಿನದಲ್ಲೇ ಕೆರೆಗೆ ಕೊಳಚೆ ನೀರು ಸೇರಲು ಶುರುವಾಗಿತ್ತು. ತಿಳಿಯಾಗಿದ್ದ ಕೆರೆಯ ನೀರಿನ ಬಣ್ಣ ನಿಧಾನವಾಗಿ ನೀಲಿ ಬಣ್ಣಕ್ಕೆ ತಿರುಗಲು ಆರಂಭವಾಗಿತ್ತು. ಈ ಬಗ್ಗೆ ವಿಶೇಷ ವರದಿ ಪ್ರಕಟಿಸುವ ಮೂಲಕ ‘ಪ್ರಜಾವಾಣಿ’ ಅಧಿಕಾರಿಗಳ ಗಮನ ಸೆಳೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>