ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಮಾತನಾಡಿ, ‘ಬಿಬಿಎಂಪಿ ಚುನಾವಣಾ ಪ್ರಕ್ರಿಯೆ ನಗರದ ಹಿತದೃಷ್ಟಿಯಿಂದ ಮಾಡಿಲ್ಲ. ಬಿಜೆಪಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಬೇಕಾಬಿಟ್ಟಿ ಮೀಸಲಾತಿ ನಿಗದಿ ಮಾಡಿದೆ. ಇದರಿಂದ ಬೆಂಗಳೂರಿಗೆ ಒಳ್ಳೆಯದಾಗುವುದಿಲ್ಲ. ಬಿಜೆಪಿ ಶಾಸಕರ ಕ್ಷೇತ್ರ ಮತ್ತು ಕಾಂಗ್ರೆಸ್ ಶಾಸಕರ ಕ್ಷೇತ್ರ ಹೋಲಿಕೆ ಮಾಡಿದರೆ, 19 ಸಾವಿರ ಮತವಿರುವ ಒಂದು ವಾರ್ಡ್ ಸೃಷ್ಟಿಸಿದರೆ, ಅದರ ಪಕ್ಕದಲ್ಲಿ 45 ಸಾವಿರ ಮತವಿರುವ ವಾರ್ಡ್ ಮಾಡಲಾಗಿದೆ’ ಎಂದರು.