<p><strong>ಬೆಂಗಳೂರು:</strong> ಬಿಬಿಎಂಪಿ ನಿವೃತ್ತ ಮುಖ್ಯ ಎಂಜಿನಿಯರ್ ಪರಮೇಶ್ವರಯ್ಯ (63) ಅವರು ಕೋರಮಂಗಲದ ತಮ್ಮ ನಿವಾಸದಲ್ಲಿ ನೇಣು ಹಾಕಿಕೊಂಡು ಬುಧವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಬಿಬಿಎಂಪಿಯ ಮಹದೇವಪುರ ವಲಯದಲ್ಲಿ ಪರಮೇಶ್ವರಯ್ಯ ಅವರು ಮುಖ್ಯ ಎಂಜಿನಿಯರ್ ಆಗಿ ನಿವೃತ್ತರಾಗಿದ್ದರು.</p>.<p>ಕೋರಮಂಗಲದ ನಾಲ್ಕನೇ ಬ್ಲಾಕ್ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಒಂದು ಪುಟದ ಮರಣ ಪತ್ರ ಸಿಕ್ಕಿದೆ. ಪರಿಶೀಲನೆ ನಡೆಸಲಾಗುತ್ತಿದೆ ಎಂದು ಕೋರಮಂಗಲ ಠಾಣೆಯ ಪೊಲೀಸರು ತಿಳಿಸಿದರು.</p>.<p>‘ನನ್ನ ಸಾವಿಗೆ ಯಾರೂ ಕಾರಣರಲ್ಲ. ನಾನೇ ಕಾರಣ. ಯಾರಿಗೂ ತೊಂದರೆ ಕೊಡಬೇಡಿ, ನನ್ನ ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಬರೆದಿರುವ ಮರಣ ಪತ್ರವೊಂದು ಸಿಕ್ಕಿದೆ. ಆ ಪತ್ರವನ್ನು ಪರಿಶೀಲಿಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<p>ಪರಮೇಶ್ವರಯ್ಯ ಅವರು ಪತ್ನಿ ಮತ್ತು ಪುತ್ರನೊಂದಿಗೆ ಕೋರಮಂಗಲದಲ್ಲಿ ವಾಸವಿದ್ದರು. ಮತ್ತೊಬ್ಬ ಮಗ ಎಂಜಿನಿಯರ್ ಆಗಿದ್ದು, ಆಸ್ಟ್ರೇಲಿಯಾದಲ್ಲಿ ಕೆಲಸ ಮಾಡುತ್ತಿದ್ದಾರೆ.</p>.<p>‘20 ದಿನಗಳ ಹಿಂದೆ ಪರಮೇಶ್ವರಯ್ಯ ಅವರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಸಿಬಿಐ ದಾಳಿಯ ನಂತರ ಪರಮೇಶ್ವರಯ್ಯ ಮಾನಸಿಕವಾಗಿ ನೊಂದಿದ್ದರು. ಮನೆಯವರ ಜತೆಯೂ ಹೆಚ್ಚು ಮಾತನಾಡುತ್ತಿರಲಿಲ್ಲ. ಪದೇ ಪದೇ ಸಿಬಿಐ ಪ್ರಕರಣದ ಬಗ್ಗೆಯೇ ಚಿಂತಿಸುತ್ತಿದ್ದರು. ಹೀಗಾಗಿ, ಅವರು ಇತ್ತೀಚೆಗೆ ಮನೋವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆ ಕೂಡ ಪಡೆದುಕೊಂಡಿದ್ದರು’ ಎಂದು ಮೂಲಗಳು ಹೇಳಿವೆ.</p>.<div><div class="bigfact-title">ವಿಚಾರಣೆಗೆ ಹಾಜರಾಗಲು ಸೂಚಿಸಿದ್ದ ಸಿಬಿಐ</div><div class="bigfact-description">ದಾಳಿ ಬಳಿಕ ವಿಚಾರಣೆಗೆ ಹಾಜರಾಗುವಂತೆ ಪರಮೇಶ್ವರಯ್ಯ ಅವರಿಗೆ ಸಿಬಿಐ ಸೂಚಿಸಿತ್ತು. ಆರ್.ಟಿ.ನಗರದಲ್ಲಿರುವ ಸಿಬಿಐ ಕಚೇರಿಗೆ ಬುಧವಾರ ವಿಚಾರಣೆಗೆ ಹಾಜರಾಗಬೇಕಿತ್ತು. ಅದಕ್ಕೂ ಮುನ್ನ ಪರಮೇಶ್ವರಯ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</div></div>.<h2>ವಿಚಾರಣೆ ವೇಳೆ ಹೆಸರು ಪ್ರಸ್ತಾಪ</h2><p>ಆದಾಯ ತೆರಿಗೆ ವಂಚನೆ ಆರೋಪದ ಮೇರೆಗೆ ಐದು ವರ್ಷಗಳ ಹಿಂದೆ ಬಿಬಿಎಂಪಿ ಗುತ್ತಿಗೆದಾರ ಜಿ.ಅನಿಲ್ ಕುಮಾರ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು.</p><p>ದಾಳಿ ವೇಳೆ ಸೂಟ್ಕೇಸ್, ಮೂರು ಬ್ಯಾಂಕ್ ಲಾಕರ್ ಕೀಗಳು, ₹1.35 ಲಕ್ಷ ನಗದು, 275 ಗ್ರಾಂ ಚಿನ್ನಾಭರಣ, ಇತರೆ ದಾಖಲೆಗಳು ಪತ್ತೆಯಾಗಿದ್ದವು. ಅನಿಲ್ ಕುಮಾರ್ ವಿಚಾರಣೆ ವೇಳೆ ಸೂಟ್ಕೇಸ್ ಪರಮೇಶ್ವರಯ್ಯ ಅವರಿಗೆ ಸೇರಿದ್ದು ಎಂಬುದಾಗಿ ಹೇಳಿಕೆ ನೀಡಿದ್ದರು. ಐ.ಟಿ ಅಧಿಕಾರಿಗಳು ಪರಮೇಶ್ವರಯ್ಯ ವಿರುದ್ಧ 2021ರಲ್ಲಿ ಪ್ರಕರಣ ದಾಖಲಿಸಿಕೊಂಡು ಅವರ ಮನೆ ಮೇಲೂ ದಾಳಿ ನಡೆಸಿದ್ದರು. ಈ ವೇಳೆಯೂ ಮೂರು ಬ್ಯಾಂಕ್ ಲಾಕರ್ಗಳ ಕೀಗಳು ಪತ್ತೆ ಆಗಿದ್ದವು ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಬಿಎಂಪಿ ನಿವೃತ್ತ ಮುಖ್ಯ ಎಂಜಿನಿಯರ್ ಪರಮೇಶ್ವರಯ್ಯ (63) ಅವರು ಕೋರಮಂಗಲದ ತಮ್ಮ ನಿವಾಸದಲ್ಲಿ ನೇಣು ಹಾಕಿಕೊಂಡು ಬುಧವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಬಿಬಿಎಂಪಿಯ ಮಹದೇವಪುರ ವಲಯದಲ್ಲಿ ಪರಮೇಶ್ವರಯ್ಯ ಅವರು ಮುಖ್ಯ ಎಂಜಿನಿಯರ್ ಆಗಿ ನಿವೃತ್ತರಾಗಿದ್ದರು.</p>.<p>ಕೋರಮಂಗಲದ ನಾಲ್ಕನೇ ಬ್ಲಾಕ್ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಒಂದು ಪುಟದ ಮರಣ ಪತ್ರ ಸಿಕ್ಕಿದೆ. ಪರಿಶೀಲನೆ ನಡೆಸಲಾಗುತ್ತಿದೆ ಎಂದು ಕೋರಮಂಗಲ ಠಾಣೆಯ ಪೊಲೀಸರು ತಿಳಿಸಿದರು.</p>.<p>‘ನನ್ನ ಸಾವಿಗೆ ಯಾರೂ ಕಾರಣರಲ್ಲ. ನಾನೇ ಕಾರಣ. ಯಾರಿಗೂ ತೊಂದರೆ ಕೊಡಬೇಡಿ, ನನ್ನ ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಬರೆದಿರುವ ಮರಣ ಪತ್ರವೊಂದು ಸಿಕ್ಕಿದೆ. ಆ ಪತ್ರವನ್ನು ಪರಿಶೀಲಿಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<p>ಪರಮೇಶ್ವರಯ್ಯ ಅವರು ಪತ್ನಿ ಮತ್ತು ಪುತ್ರನೊಂದಿಗೆ ಕೋರಮಂಗಲದಲ್ಲಿ ವಾಸವಿದ್ದರು. ಮತ್ತೊಬ್ಬ ಮಗ ಎಂಜಿನಿಯರ್ ಆಗಿದ್ದು, ಆಸ್ಟ್ರೇಲಿಯಾದಲ್ಲಿ ಕೆಲಸ ಮಾಡುತ್ತಿದ್ದಾರೆ.</p>.<p>‘20 ದಿನಗಳ ಹಿಂದೆ ಪರಮೇಶ್ವರಯ್ಯ ಅವರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಸಿಬಿಐ ದಾಳಿಯ ನಂತರ ಪರಮೇಶ್ವರಯ್ಯ ಮಾನಸಿಕವಾಗಿ ನೊಂದಿದ್ದರು. ಮನೆಯವರ ಜತೆಯೂ ಹೆಚ್ಚು ಮಾತನಾಡುತ್ತಿರಲಿಲ್ಲ. ಪದೇ ಪದೇ ಸಿಬಿಐ ಪ್ರಕರಣದ ಬಗ್ಗೆಯೇ ಚಿಂತಿಸುತ್ತಿದ್ದರು. ಹೀಗಾಗಿ, ಅವರು ಇತ್ತೀಚೆಗೆ ಮನೋವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆ ಕೂಡ ಪಡೆದುಕೊಂಡಿದ್ದರು’ ಎಂದು ಮೂಲಗಳು ಹೇಳಿವೆ.</p>.<div><div class="bigfact-title">ವಿಚಾರಣೆಗೆ ಹಾಜರಾಗಲು ಸೂಚಿಸಿದ್ದ ಸಿಬಿಐ</div><div class="bigfact-description">ದಾಳಿ ಬಳಿಕ ವಿಚಾರಣೆಗೆ ಹಾಜರಾಗುವಂತೆ ಪರಮೇಶ್ವರಯ್ಯ ಅವರಿಗೆ ಸಿಬಿಐ ಸೂಚಿಸಿತ್ತು. ಆರ್.ಟಿ.ನಗರದಲ್ಲಿರುವ ಸಿಬಿಐ ಕಚೇರಿಗೆ ಬುಧವಾರ ವಿಚಾರಣೆಗೆ ಹಾಜರಾಗಬೇಕಿತ್ತು. ಅದಕ್ಕೂ ಮುನ್ನ ಪರಮೇಶ್ವರಯ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</div></div>.<h2>ವಿಚಾರಣೆ ವೇಳೆ ಹೆಸರು ಪ್ರಸ್ತಾಪ</h2><p>ಆದಾಯ ತೆರಿಗೆ ವಂಚನೆ ಆರೋಪದ ಮೇರೆಗೆ ಐದು ವರ್ಷಗಳ ಹಿಂದೆ ಬಿಬಿಎಂಪಿ ಗುತ್ತಿಗೆದಾರ ಜಿ.ಅನಿಲ್ ಕುಮಾರ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು.</p><p>ದಾಳಿ ವೇಳೆ ಸೂಟ್ಕೇಸ್, ಮೂರು ಬ್ಯಾಂಕ್ ಲಾಕರ್ ಕೀಗಳು, ₹1.35 ಲಕ್ಷ ನಗದು, 275 ಗ್ರಾಂ ಚಿನ್ನಾಭರಣ, ಇತರೆ ದಾಖಲೆಗಳು ಪತ್ತೆಯಾಗಿದ್ದವು. ಅನಿಲ್ ಕುಮಾರ್ ವಿಚಾರಣೆ ವೇಳೆ ಸೂಟ್ಕೇಸ್ ಪರಮೇಶ್ವರಯ್ಯ ಅವರಿಗೆ ಸೇರಿದ್ದು ಎಂಬುದಾಗಿ ಹೇಳಿಕೆ ನೀಡಿದ್ದರು. ಐ.ಟಿ ಅಧಿಕಾರಿಗಳು ಪರಮೇಶ್ವರಯ್ಯ ವಿರುದ್ಧ 2021ರಲ್ಲಿ ಪ್ರಕರಣ ದಾಖಲಿಸಿಕೊಂಡು ಅವರ ಮನೆ ಮೇಲೂ ದಾಳಿ ನಡೆಸಿದ್ದರು. ಈ ವೇಳೆಯೂ ಮೂರು ಬ್ಯಾಂಕ್ ಲಾಕರ್ಗಳ ಕೀಗಳು ಪತ್ತೆ ಆಗಿದ್ದವು ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>