<p><strong>ಬೆಂಗಳೂರು:</strong> ಬೆಂಗಳೂರು ಕೇಂದ್ರ ನಗರ ಪಾಲಿಕೆ (ಬಿಸಿಸಿಸಿ) ವ್ಯಾಪ್ತಿಯಲ್ಲಿರುವ ಪ್ರತಿ ವಿಭಾಗಕ್ಕೂ ಪ್ರತ್ಯೇಕ ಗುತ್ತಿಗೆದಾರರನ್ನು ನೇಮಿಸಿ, ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಬೇಕು ಎಂದು ಆಯುಕ್ತ ರಾಜೇಂದ್ರ ಚೋಳನ್ ಸೂಚಿಸಿದರು.</p>.<p>ಮುಖ್ಯ ಎಂಜಿನಿಯರ್ಗಳು ಹಾಗೂ ಅಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿದ ಅವರು, ರಸ್ತೆ ಗುಂಡಿಗಳಿಗೆ ಸಂಬಂಧಿಸಿದಂತೆ ವೆಬ್ ಅಥವಾ ಅಪ್ಲಿಕೇಶನ್ಗಳಲ್ಲಿ ಯಾವುದೇ ದೂರು ಬಾಕಿ ಇರದಂತೆ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.</p>.<p>‘ಸಿಬಿಡಿ ರಸ್ತೆಗಳು, ಟೆಂಡರ್ ಶ್ಯೂರ್ ರಸ್ತೆ, ವೈಟ್ ಟಾಪಿಂಗ್ ರಸ್ತೆಗಳು ಮತ್ತು ಹೈ ಡೆನ್ಸಿಟಿ ಕಾರಿಡಾರ್ಗಳನ್ನು ಗುರುತಿಸಿ, ಮಾದರಿ ರಸ್ತೆಗಳನ್ನಾಗಿ ಮಾಡಬೇಕು ಎಂದು ಕಾರ್ಯಪಾಲಕ ಎಂಜಿನಿಯರ್ಗಳಿಗೆ ಸೂಚಿಸಿದರು. ರಸ್ತೆವಾರು ಪ್ರತ್ಯೇಕ ನೋಡಲ್ ಅಧಿಕಾರಿಗಳನ್ನು ನೇಮಿಸಿ, ನಿರ್ವಹಣೆ ಜವಾಬ್ದಾರಿಯನ್ನು ವಹಿಸಬೇಕು’ ಎಂದು ಹೇಳಿದರು.</p>.<p>‘ಮೆಟ್ರೊ ಪಿಲ್ಲರ್ಗಳು, ರಸ್ತೆ ಇಕ್ಕೆಲಗಳ ಸೌಂದರೀಕರಣಕ್ಕಾಗಿ ಗಿಡಗಳನ್ನು ನೆಡಬೇಕು. ಅಗತ್ಯ ಸ್ಥಳಗಳಲ್ಲಿ ಬೀದಿ ದೀಪಗಳನ್ನು ಅಳವಡಿಸಿ, ನಿರ್ವಹಣೆಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.</p>.<p>ಪಾದಚಾರಿ ಮಾರ್ಗ ಒತ್ತುವರಿದಾರರಿಗೆ ಒಂದು ದಿನದ ಮುಂಚಿತವಾಗಿ ನೋಟಿಸ್ ನೀಡಿ ಎಚ್ಚರಿಸಿ, ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಹಾಗೂ ಸ್ವಚ್ಛತಾ ಅಭಿಯಾನ ನಡೆಸಬೇಕು. ಏಕ ಬಳಕೆ ಪ್ಲಾಸ್ಟಿಕ್ ತಪಾಸಣೆ ನಡೆಸಬೇಕು ಎಂದು ಹೇಳಿದರು.</p>.<p>ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಜಂಟಿ ಆಯುಕ್ತ ರಂಗನಾಥ್, ಮುಖ್ಯ ಎಂಜಿನಿಯರ್ಗಳಾದ ಸುಗುಣ, ವಿಜಯಕುಮಾರ್ ಹರಿದಾಸ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ಕೇಂದ್ರ ನಗರ ಪಾಲಿಕೆ (ಬಿಸಿಸಿಸಿ) ವ್ಯಾಪ್ತಿಯಲ್ಲಿರುವ ಪ್ರತಿ ವಿಭಾಗಕ್ಕೂ ಪ್ರತ್ಯೇಕ ಗುತ್ತಿಗೆದಾರರನ್ನು ನೇಮಿಸಿ, ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಬೇಕು ಎಂದು ಆಯುಕ್ತ ರಾಜೇಂದ್ರ ಚೋಳನ್ ಸೂಚಿಸಿದರು.</p>.<p>ಮುಖ್ಯ ಎಂಜಿನಿಯರ್ಗಳು ಹಾಗೂ ಅಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿದ ಅವರು, ರಸ್ತೆ ಗುಂಡಿಗಳಿಗೆ ಸಂಬಂಧಿಸಿದಂತೆ ವೆಬ್ ಅಥವಾ ಅಪ್ಲಿಕೇಶನ್ಗಳಲ್ಲಿ ಯಾವುದೇ ದೂರು ಬಾಕಿ ಇರದಂತೆ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.</p>.<p>‘ಸಿಬಿಡಿ ರಸ್ತೆಗಳು, ಟೆಂಡರ್ ಶ್ಯೂರ್ ರಸ್ತೆ, ವೈಟ್ ಟಾಪಿಂಗ್ ರಸ್ತೆಗಳು ಮತ್ತು ಹೈ ಡೆನ್ಸಿಟಿ ಕಾರಿಡಾರ್ಗಳನ್ನು ಗುರುತಿಸಿ, ಮಾದರಿ ರಸ್ತೆಗಳನ್ನಾಗಿ ಮಾಡಬೇಕು ಎಂದು ಕಾರ್ಯಪಾಲಕ ಎಂಜಿನಿಯರ್ಗಳಿಗೆ ಸೂಚಿಸಿದರು. ರಸ್ತೆವಾರು ಪ್ರತ್ಯೇಕ ನೋಡಲ್ ಅಧಿಕಾರಿಗಳನ್ನು ನೇಮಿಸಿ, ನಿರ್ವಹಣೆ ಜವಾಬ್ದಾರಿಯನ್ನು ವಹಿಸಬೇಕು’ ಎಂದು ಹೇಳಿದರು.</p>.<p>‘ಮೆಟ್ರೊ ಪಿಲ್ಲರ್ಗಳು, ರಸ್ತೆ ಇಕ್ಕೆಲಗಳ ಸೌಂದರೀಕರಣಕ್ಕಾಗಿ ಗಿಡಗಳನ್ನು ನೆಡಬೇಕು. ಅಗತ್ಯ ಸ್ಥಳಗಳಲ್ಲಿ ಬೀದಿ ದೀಪಗಳನ್ನು ಅಳವಡಿಸಿ, ನಿರ್ವಹಣೆಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.</p>.<p>ಪಾದಚಾರಿ ಮಾರ್ಗ ಒತ್ತುವರಿದಾರರಿಗೆ ಒಂದು ದಿನದ ಮುಂಚಿತವಾಗಿ ನೋಟಿಸ್ ನೀಡಿ ಎಚ್ಚರಿಸಿ, ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಹಾಗೂ ಸ್ವಚ್ಛತಾ ಅಭಿಯಾನ ನಡೆಸಬೇಕು. ಏಕ ಬಳಕೆ ಪ್ಲಾಸ್ಟಿಕ್ ತಪಾಸಣೆ ನಡೆಸಬೇಕು ಎಂದು ಹೇಳಿದರು.</p>.<p>ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಜಂಟಿ ಆಯುಕ್ತ ರಂಗನಾಥ್, ಮುಖ್ಯ ಎಂಜಿನಿಯರ್ಗಳಾದ ಸುಗುಣ, ವಿಜಯಕುಮಾರ್ ಹರಿದಾಸ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>