ಸಮಿತಿಯ ಸದಸ್ಯ ಜಯಣ್ಣ ಮಾತನಾಡಿ, ‘ಮಲ್ಲೇಶ್ವರ ಅತ್ಯಂತ ಹಳೆಯ ಬಡಾವಣೆಯಾಗಿದೆ. ಇಲ್ಲಿನ ಸಂಪಿಗೆ ರಸ್ತೆ, ಪ್ಯಾಲೆಸ್ ಗುಟ್ಟಹಳ್ಳಿ ಮುಖ್ಯರಸ್ತೆಯ ಕಾಮಗಾರಿ ಆಮೆ ಗತಿಯಲ್ಲಿ ಸಾಗಿದ್ದು, ಒಂದು ವರ್ಷದಿಂದ ಬಸ್ ಸಂಚಾರವೇ ಸ್ಥಗಿತಗೊಂಡಿದೆ. ಸಾರ್ವಜನಿಕರು ಬೇರೆಡೆ ಹೋಗಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಅಂಗಡಿ ಮಾಲೀಕರು, ತರಕಾರಿ ಹೂವಿನ ಮತ್ತು ಬೀದಿ ಬದಿ ವ್ಯಾಪಾರಿಗಳ ಜೀವನ ಸಂಕಷ್ಟಕ್ಕೆ ದೊಡಿದಂತಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.