<p><strong>ಬೆಂಗಳೂರು:</strong> ಬಿಬಿಎಂಪಿ ವ್ಯಾಪ್ತಿಯಲ್ಲಿ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 1,110 ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲು ಕಾಯ್ದಿರಿಸಿದ್ದ ಜಮೀನನ್ನು ಮುಖ್ಯಮಂತ್ರಿಯವರ ವಸತಿ ಯೋಜನೆ ಅನುಷ್ಠಾನಕ್ಕೆ ಬಳಸುವುದಕ್ಕೆ ಸಂಸದ ವಿ.ಶ್ರೀನಿವಾಸ ಪ್ರಸಾದ್ ವಿರೋಧ ವ್ಯಕ್ತಪಡಿಸಿದ್ದಾರೆ.</p>.<p>ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬುಧವಾರ ಪತ್ರ ಬರೆದಿರುವ ಶ್ರೀನಿವಾಸ ಪ್ರಸಾದ್, ‘ಈಗಾಗಲೇ ಆಯ್ಕೆಯಾಗಿರುವ 1,110 ಫಲಾನುಭವಿಗಳಿಗೆ ನಿವೇಶನ ನೀಡುವುದಕ್ಕೆ ಮಾತ್ರ ಈ ಜಮೀನನ್ನು ಉಪಯೋಗಿಸಿಕೊಳ್ಳಬೇಕು. ಇದನ್ನೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಕೂಡಲೇ ಬಡಾವಣೆ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿ ನಿವೇಶನ ಹಂಚಲು ಆದೇಶ ಮಾಡಬೇಕು. ಈ ಜಮೀನನ್ನು ವಸತಿ ನಿರ್ಮಾಣಕ್ಕೆ ಬಳಸುವ ನಿರ್ದೇಶನವನ್ನು ಕೂಡಲೇ ಹಿಂಪಡೆಯಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>‘ಮುಖ್ಯಮಂತ್ರಿಯವರ ವಸತಿ ಯೋಜನೆಗೆ ಸಾವಿರಾರು ಎಕರೆ ಸರ್ಕಾರಿ ಜಮೀನುಗಳು ಬೆಂಗಳೂರು ಸುತ್ತಮುತ್ತಲು ಲಭ್ಯ ಇವೆ. ಈ ಜಮೀನುಗಳನ್ನು ವರ್ಗಾಯಿಸಿಕೊಂಡು ವಸತಿ ಇಲಾಖೆಯ ಯೋಜನೆಗಳನ್ನು ಕಾರ್ಯರೂಪಕ್ಕೆ ತರಬಹುದು’ ಎಂದು ಅವರು ಸಲಹೆ ನೀಡಿದ್ದಾರೆ.</p>.<p>ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟರಿಗೆ ನಿವೇಶನ ಹಂಚಿಕೆ ಮಾಡಲು ಪಾಲಿಕೆಯ ಪಶ್ಚಿಮ ವಲಯ, ದಕ್ಷಿಣ ವಲಯ ಮತ್ತು ರಾಜರಾಜೇಶ್ವರಿನಗರ ವಲಯ ಜಂಟಿ ಆಯುಕ್ತರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದನಿವೇಶನ ರಹಿತ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿತ್ತು. ಈ ಕಾರ್ಯಕ್ರಮದ ಅನುಷ್ಠಾನಕ್ಕಾಗಿ ಪಾಲಿಕೆಯ ವ್ಯಾಪ್ತಿಯಲ್ಲಿ ಜಮೀನು ಲಭ್ಯ ಇರಲಿಲ್ಲ.</p>.<p>ಶ್ರೀನಿವಾಸ ಪ್ರಸಾದ್ ಕಂದಾಯ ಸಚಿವರಾಗಿದ್ದಾಗ ಅವರ ಅಧ್ಯಕ್ಷತೆಯಲ್ಲಿ 2014ರ ಜು 18ರಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಉಪಸ್ಥಿತಿಯಲ್ಲಿ ಸಭೆ ನಡೆದಿತ್ತು. ವಸತಿರಹಿತರಿಗೆ ನಿವೇಶನ ಒದಗಿಸಲು ಜಮೀನುಗಳನ್ನು ಗುರುತಿಸಿ ಪಾಲಿಕೆಗೆ ಹಸ್ತಾಂತರಿಸಲು ತೀರ್ಮಾನಿಸಲಾಗಿತ್ತು. ಈ ಉದ್ದೇಶಕ್ಕೆ ದಾಸನಪುರ ಹೋಬಳಿಯ ಲಕ್ಷ್ಮೀಪುರ ಗ್ರಾಮದ ಸರ್ವೇ ನಂಬರ್ 24 ಮತ್ತು 25ರಲ್ಲಿ ಹಾಗೂ ಕೆಂಗೇರಿ ಹೋಬಳಿಯ ಅಗರ ಗ್ರಾಮದ ಸರ್ವೇ<br />ನಂ.28ರಲ್ಲಿ ಸೇರಿ ಒಟ್ಟು 29 ಎಕರೆ 7 ಗುಂಟೆ ಪಾಲಿಕೆಗೆ ಹಸ್ತಾಂತರಿಸಲಾಗಿತ್ತು.</p>.<p>‘ಪರಿಶಿಷ್ಟರಿಗೆ ನಿವೇಶನ ನೀಡಲು ನಗರಾಭಿವೃದ್ಧಿ ಇಲಾಖೆಯ ಉನ್ನತ ಮಟ್ಟದ ಸಭೆಯಲ್ಲಿ ನಿಮ್ಮ ಮುಂದೆ ಕಡತ ಮಂಡಿಸಲು ಸಿದ್ಧತೆ ನಡೆದಿತ್ತು. ಈ ನಡುವೆ ವಸತಿ ಸಚಿವರು ಈ ಫಲಾನುಭವಿಗಳ ಜೊತೆಗೆ ಇನ್ನಷ್ಟು ಫಲಾನುಭವಿಗಳನ್ನು ಸೇರಿಸಿ ಎಲ್ಲರಿಗೂ ನಿವೇಶನದ ಬದಲು ವಸತಿ ನೀಡುವ ಯೋಜನೆಗೆ ತಮ್ಮಿಂದ ಅನುಮತಿ ಪಡೆದಿದ್ದಾರೆ.’</p>.<p>‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಭೂ ಒಡೆತನದ ಹಕ್ಕು ನೀಡುವುದು ಅತ್ಯಂತ ಪರಿಣಾಮಕಾರಿ ಮತ್ತು ದೂರದೃಷ್ಟಿಯ ಕಾರ್ಯಕ್ರಮ. ನಿವೇಶನದ ಬದಲು ವಸತಿ ನೀಡುವುದು ಈ ಕಾರ್ಯಕ್ರಮದ ಮೂಲ ಆಶಯಕ್ಕೆ ಧಕ್ಕೆ ತರುತ್ತದೆ. ಇದು ಒಂದು ದಶಕದಿಂದ ನಿವೇಶನ ಪಡೆಯಲು ಕಾಯುತ್ತಿರುವ 1,110 ಫಲಾನುಭವಿಗಳ ಮೂಲಭೂತ ಹಕ್ಕನ್ನು ಕಸಿದುಕೊಂಡಂತೆ’ ಎಂದೂ ಅವರು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಬಿಎಂಪಿ ವ್ಯಾಪ್ತಿಯಲ್ಲಿ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 1,110 ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲು ಕಾಯ್ದಿರಿಸಿದ್ದ ಜಮೀನನ್ನು ಮುಖ್ಯಮಂತ್ರಿಯವರ ವಸತಿ ಯೋಜನೆ ಅನುಷ್ಠಾನಕ್ಕೆ ಬಳಸುವುದಕ್ಕೆ ಸಂಸದ ವಿ.ಶ್ರೀನಿವಾಸ ಪ್ರಸಾದ್ ವಿರೋಧ ವ್ಯಕ್ತಪಡಿಸಿದ್ದಾರೆ.</p>.<p>ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬುಧವಾರ ಪತ್ರ ಬರೆದಿರುವ ಶ್ರೀನಿವಾಸ ಪ್ರಸಾದ್, ‘ಈಗಾಗಲೇ ಆಯ್ಕೆಯಾಗಿರುವ 1,110 ಫಲಾನುಭವಿಗಳಿಗೆ ನಿವೇಶನ ನೀಡುವುದಕ್ಕೆ ಮಾತ್ರ ಈ ಜಮೀನನ್ನು ಉಪಯೋಗಿಸಿಕೊಳ್ಳಬೇಕು. ಇದನ್ನೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಕೂಡಲೇ ಬಡಾವಣೆ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿ ನಿವೇಶನ ಹಂಚಲು ಆದೇಶ ಮಾಡಬೇಕು. ಈ ಜಮೀನನ್ನು ವಸತಿ ನಿರ್ಮಾಣಕ್ಕೆ ಬಳಸುವ ನಿರ್ದೇಶನವನ್ನು ಕೂಡಲೇ ಹಿಂಪಡೆಯಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>‘ಮುಖ್ಯಮಂತ್ರಿಯವರ ವಸತಿ ಯೋಜನೆಗೆ ಸಾವಿರಾರು ಎಕರೆ ಸರ್ಕಾರಿ ಜಮೀನುಗಳು ಬೆಂಗಳೂರು ಸುತ್ತಮುತ್ತಲು ಲಭ್ಯ ಇವೆ. ಈ ಜಮೀನುಗಳನ್ನು ವರ್ಗಾಯಿಸಿಕೊಂಡು ವಸತಿ ಇಲಾಖೆಯ ಯೋಜನೆಗಳನ್ನು ಕಾರ್ಯರೂಪಕ್ಕೆ ತರಬಹುದು’ ಎಂದು ಅವರು ಸಲಹೆ ನೀಡಿದ್ದಾರೆ.</p>.<p>ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟರಿಗೆ ನಿವೇಶನ ಹಂಚಿಕೆ ಮಾಡಲು ಪಾಲಿಕೆಯ ಪಶ್ಚಿಮ ವಲಯ, ದಕ್ಷಿಣ ವಲಯ ಮತ್ತು ರಾಜರಾಜೇಶ್ವರಿನಗರ ವಲಯ ಜಂಟಿ ಆಯುಕ್ತರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದನಿವೇಶನ ರಹಿತ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿತ್ತು. ಈ ಕಾರ್ಯಕ್ರಮದ ಅನುಷ್ಠಾನಕ್ಕಾಗಿ ಪಾಲಿಕೆಯ ವ್ಯಾಪ್ತಿಯಲ್ಲಿ ಜಮೀನು ಲಭ್ಯ ಇರಲಿಲ್ಲ.</p>.<p>ಶ್ರೀನಿವಾಸ ಪ್ರಸಾದ್ ಕಂದಾಯ ಸಚಿವರಾಗಿದ್ದಾಗ ಅವರ ಅಧ್ಯಕ್ಷತೆಯಲ್ಲಿ 2014ರ ಜು 18ರಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಉಪಸ್ಥಿತಿಯಲ್ಲಿ ಸಭೆ ನಡೆದಿತ್ತು. ವಸತಿರಹಿತರಿಗೆ ನಿವೇಶನ ಒದಗಿಸಲು ಜಮೀನುಗಳನ್ನು ಗುರುತಿಸಿ ಪಾಲಿಕೆಗೆ ಹಸ್ತಾಂತರಿಸಲು ತೀರ್ಮಾನಿಸಲಾಗಿತ್ತು. ಈ ಉದ್ದೇಶಕ್ಕೆ ದಾಸನಪುರ ಹೋಬಳಿಯ ಲಕ್ಷ್ಮೀಪುರ ಗ್ರಾಮದ ಸರ್ವೇ ನಂಬರ್ 24 ಮತ್ತು 25ರಲ್ಲಿ ಹಾಗೂ ಕೆಂಗೇರಿ ಹೋಬಳಿಯ ಅಗರ ಗ್ರಾಮದ ಸರ್ವೇ<br />ನಂ.28ರಲ್ಲಿ ಸೇರಿ ಒಟ್ಟು 29 ಎಕರೆ 7 ಗುಂಟೆ ಪಾಲಿಕೆಗೆ ಹಸ್ತಾಂತರಿಸಲಾಗಿತ್ತು.</p>.<p>‘ಪರಿಶಿಷ್ಟರಿಗೆ ನಿವೇಶನ ನೀಡಲು ನಗರಾಭಿವೃದ್ಧಿ ಇಲಾಖೆಯ ಉನ್ನತ ಮಟ್ಟದ ಸಭೆಯಲ್ಲಿ ನಿಮ್ಮ ಮುಂದೆ ಕಡತ ಮಂಡಿಸಲು ಸಿದ್ಧತೆ ನಡೆದಿತ್ತು. ಈ ನಡುವೆ ವಸತಿ ಸಚಿವರು ಈ ಫಲಾನುಭವಿಗಳ ಜೊತೆಗೆ ಇನ್ನಷ್ಟು ಫಲಾನುಭವಿಗಳನ್ನು ಸೇರಿಸಿ ಎಲ್ಲರಿಗೂ ನಿವೇಶನದ ಬದಲು ವಸತಿ ನೀಡುವ ಯೋಜನೆಗೆ ತಮ್ಮಿಂದ ಅನುಮತಿ ಪಡೆದಿದ್ದಾರೆ.’</p>.<p>‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಭೂ ಒಡೆತನದ ಹಕ್ಕು ನೀಡುವುದು ಅತ್ಯಂತ ಪರಿಣಾಮಕಾರಿ ಮತ್ತು ದೂರದೃಷ್ಟಿಯ ಕಾರ್ಯಕ್ರಮ. ನಿವೇಶನದ ಬದಲು ವಸತಿ ನೀಡುವುದು ಈ ಕಾರ್ಯಕ್ರಮದ ಮೂಲ ಆಶಯಕ್ಕೆ ಧಕ್ಕೆ ತರುತ್ತದೆ. ಇದು ಒಂದು ದಶಕದಿಂದ ನಿವೇಶನ ಪಡೆಯಲು ಕಾಯುತ್ತಿರುವ 1,110 ಫಲಾನುಭವಿಗಳ ಮೂಲಭೂತ ಹಕ್ಕನ್ನು ಕಸಿದುಕೊಂಡಂತೆ’ ಎಂದೂ ಅವರು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>