<p>ಬೆಂಗಳೂರು: ಬಿಬಿಎಂಪಿಯ ಸಂಚಾರಿ ಎಂಜಿನಿಯರಿಂಗ್ ಕೋಶದಲ್ಲಿ (ಟಿ.ಇ.ಸಿ) ನಡೆದಿರುವ ಹಗರಣದ ತನಿಖೆಯನ್ನು ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ವಹಿಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.</p>.<p>‘ರಸ್ತೆ ಹಾಗೂ ಪಾದಚಾರಿ ಸುರಕ್ಷತಾ ಕಾಮಗಾರಿಗಳನ್ನು ನಿರ್ವಹಿಸುವುದು ಟಿ.ಇ.ಸಿ ಜವಾಬ್ದಾರಿ. 2016-17 ಮತ್ತು 2017-18ನೇ ಸಾಲುಗಳಲ್ಲಿ ₹119 ಕೋಟಿ ಮೊತ್ತದ ಕಾಮಗಾರಿಗಳನ್ನು ಪೂರ್ಣಗೊಳಿಸಿರುವುದಾಗಿ ಟಿಇಸಿ ಹೇಳಿದ್ದು, ₹108 ಕೋಟಿ ಮೊತ್ತವನ್ನು ಗುತ್ತಿಗೆದಾರರಿಗೆ ಬಿಡುಗಡೆ ಮಾಡಲಾಗಿದೆ. ಆದರೆ, ನಗರದ 1,400 ಕಿ.ಮೀ ಉದ್ದದ ಮುಖ್ಯ ರಸ್ತೆಗಳಲ್ಲಿ ಶೇ 20ರಷ್ಟು ಕಾಮಗಾರಿಯೂ ಪೂರ್ಣಗೊಂಡಿಲ್ಲ ಎಂಬ ಆರೋಪ ವ್ಯಕ್ತವಾಗಿತ್ತು.</p>.<p>‘ಟಿಇಸಿ ₹65 ಕೋಟಿ ಮೊತ್ತದ 71 ಕಾಮಗಾರಿಗಳನ್ನು ಕಾನೂನುಬಾಹಿರವಾಗಿಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಸಂಸ್ಥೆಗೆ (ಕೆಆರ್ಐಡಿಎಲ್) ವಹಿಸಿದೆ. ಘಟಕದ ಎಂಜಿನಿಯರ್ಗಳು ರಾಜಕಾರಣಿಗಳಿಗೆ ಆಪ್ತರಾಗಿರುವ ಗುತ್ತಿಗೆದಾರರಿಗೆ ಇವುಗಳ ಉಪಗುತ್ತಿಗೆ ಸಿಗುವಂತೆ ನೋಡಿಕೊಂಡಿದ್ದಾರೆ. ₹54 ಕೋಟಿ ಮೊತ್ತದ ಕಾಮಗಾರಿಗಳನ್ನು ತಮ್ಮ ಆಪ್ತ ಗುತ್ತಿಗೆದಾರರಿಗೇ ನೀಡಿದ್ದಾರೆ’ ಎಂದು ದೂರಲಾಗಿತ್ತು. ಈ ಬಗ್ಗೆ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ದೂರು ನೀಡಿದ್ದರು.</p>.<p>ಅವ್ಯವಹಾರ ನಡೆದಿದೆ ಎಂದು ಬಿಬಿಎಂಪಿಯ ತಾಂತ್ರಿಕ ಹಾಗೂ ಜಾಗೃತ ಕೋಶವು (ಟಿವಿಸಿಸಿ) ವರದಿ ನೀಡಿತ್ತು. ಈ ಪ್ರಕರಣವನ್ನು ಎಸಿಬಿಗೆ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಾಲಿಕೆಯ ಆಯುಕ್ತರಿಗೆ 2019ರ ಅಕ್ಟೋಬರ್ನಲ್ಲಿ ನಿರ್ದೇಶನ ನೀಡಿದ್ದರು.</p>.<p>ಟಿವಿಸಿಸಿ ವರದಿಯನ್ನು ಸಮಗ್ರವಾಗಿ ಪರಿಶೀಲಿಸಿದ ಆಯುಕ್ತರು, ಈ ಹಗರಣವನ್ನು ಎಸಿಬಿ ತನಿಖೆಗೆ ವಹಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರಿಗೆ ಈ ವರ್ಷದ ಜನವರಿಯಲ್ಲಿ ಪತ್ರ ಬರೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಬಿಬಿಎಂಪಿಯ ಸಂಚಾರಿ ಎಂಜಿನಿಯರಿಂಗ್ ಕೋಶದಲ್ಲಿ (ಟಿ.ಇ.ಸಿ) ನಡೆದಿರುವ ಹಗರಣದ ತನಿಖೆಯನ್ನು ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ವಹಿಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.</p>.<p>‘ರಸ್ತೆ ಹಾಗೂ ಪಾದಚಾರಿ ಸುರಕ್ಷತಾ ಕಾಮಗಾರಿಗಳನ್ನು ನಿರ್ವಹಿಸುವುದು ಟಿ.ಇ.ಸಿ ಜವಾಬ್ದಾರಿ. 2016-17 ಮತ್ತು 2017-18ನೇ ಸಾಲುಗಳಲ್ಲಿ ₹119 ಕೋಟಿ ಮೊತ್ತದ ಕಾಮಗಾರಿಗಳನ್ನು ಪೂರ್ಣಗೊಳಿಸಿರುವುದಾಗಿ ಟಿಇಸಿ ಹೇಳಿದ್ದು, ₹108 ಕೋಟಿ ಮೊತ್ತವನ್ನು ಗುತ್ತಿಗೆದಾರರಿಗೆ ಬಿಡುಗಡೆ ಮಾಡಲಾಗಿದೆ. ಆದರೆ, ನಗರದ 1,400 ಕಿ.ಮೀ ಉದ್ದದ ಮುಖ್ಯ ರಸ್ತೆಗಳಲ್ಲಿ ಶೇ 20ರಷ್ಟು ಕಾಮಗಾರಿಯೂ ಪೂರ್ಣಗೊಂಡಿಲ್ಲ ಎಂಬ ಆರೋಪ ವ್ಯಕ್ತವಾಗಿತ್ತು.</p>.<p>‘ಟಿಇಸಿ ₹65 ಕೋಟಿ ಮೊತ್ತದ 71 ಕಾಮಗಾರಿಗಳನ್ನು ಕಾನೂನುಬಾಹಿರವಾಗಿಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಸಂಸ್ಥೆಗೆ (ಕೆಆರ್ಐಡಿಎಲ್) ವಹಿಸಿದೆ. ಘಟಕದ ಎಂಜಿನಿಯರ್ಗಳು ರಾಜಕಾರಣಿಗಳಿಗೆ ಆಪ್ತರಾಗಿರುವ ಗುತ್ತಿಗೆದಾರರಿಗೆ ಇವುಗಳ ಉಪಗುತ್ತಿಗೆ ಸಿಗುವಂತೆ ನೋಡಿಕೊಂಡಿದ್ದಾರೆ. ₹54 ಕೋಟಿ ಮೊತ್ತದ ಕಾಮಗಾರಿಗಳನ್ನು ತಮ್ಮ ಆಪ್ತ ಗುತ್ತಿಗೆದಾರರಿಗೇ ನೀಡಿದ್ದಾರೆ’ ಎಂದು ದೂರಲಾಗಿತ್ತು. ಈ ಬಗ್ಗೆ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ದೂರು ನೀಡಿದ್ದರು.</p>.<p>ಅವ್ಯವಹಾರ ನಡೆದಿದೆ ಎಂದು ಬಿಬಿಎಂಪಿಯ ತಾಂತ್ರಿಕ ಹಾಗೂ ಜಾಗೃತ ಕೋಶವು (ಟಿವಿಸಿಸಿ) ವರದಿ ನೀಡಿತ್ತು. ಈ ಪ್ರಕರಣವನ್ನು ಎಸಿಬಿಗೆ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಾಲಿಕೆಯ ಆಯುಕ್ತರಿಗೆ 2019ರ ಅಕ್ಟೋಬರ್ನಲ್ಲಿ ನಿರ್ದೇಶನ ನೀಡಿದ್ದರು.</p>.<p>ಟಿವಿಸಿಸಿ ವರದಿಯನ್ನು ಸಮಗ್ರವಾಗಿ ಪರಿಶೀಲಿಸಿದ ಆಯುಕ್ತರು, ಈ ಹಗರಣವನ್ನು ಎಸಿಬಿ ತನಿಖೆಗೆ ವಹಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರಿಗೆ ಈ ವರ್ಷದ ಜನವರಿಯಲ್ಲಿ ಪತ್ರ ಬರೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>