ರಸ್ತೆ ವಿಸ್ತರಣೆ ಕಾಮಗಾರಿಗಾಗಿ ಬಿಬಿಎಂಪಿ ಕೌದೇನಹಳ್ಳಿಯಲ್ಲಿ ಖಾಸಗಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿತ್ತು. ಈ ಭೂಮಿಯ ಅಭಿವೃದ್ಧಿ ಹಕ್ಕು ವರ್ಗಾವಣೆಯ (ಟಿಡಿಆರ್) ಮೊತ್ತ ನಿಗದಿಪಡಿಸುವಾಗ ವಾಸ್ತವಕ್ಕಿಂತ ಹೆಚ್ಚು ಬೆಲೆ ನಮೂದಿಸಿದ ಸಂಬಂಧ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಲ್ಲಿ (ಎಸಿಬಿ) ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧ ವಿಚಾರಣೆ ನಡೆಸಲು ಪಾಲಿಕೆ ಆಯುಕ್ತರಿಂದ ಎಸಿಬಿ ಅಧಿಕಾರಿಗಳು ಪೂರ್ವಾನುಮತಿ ಪಡೆದಿದ್ದರು.