<p><strong>ಬೆಂಗಳೂರು:</strong> ಬಿಬಿಎಂಪಿ ಆಯುಕ್ತರ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಹನುಮಂತಯ್ಯ ಅವರನ್ನು ಗೋಪ್ಯ ಮಾಹಿತಿ ಸೋರಿಕೆ ಮಾಡಿದ ಆರೋಪದ ಮೇರೆಗೆ ಅಮಾನತು ಮಾಡಲಾಗಿದೆ.</p>.<p>ಬಿಬಿಎಂಪಿಯಲ್ಲಿ ಸಹಾಯಕ ಎಂಜಿನಿಯರ್ ಆಗಿದ್ದ ಕೃಷ್ಣಲಾಲ್ ಅವರು ಪ್ರಸ್ತುತ ಎರವಲು ಸೇವೆ ಮೇರೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (ಬಿಡಿಎ) ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.</p>.<p>ರಸ್ತೆ ವಿಸ್ತರಣೆ ಕಾಮಗಾರಿಗಾಗಿ ಬಿಬಿಎಂಪಿ ಕೌದೇನಹಳ್ಳಿಯಲ್ಲಿ ಖಾಸಗಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿತ್ತು. ಈ ಭೂಮಿಯ ಅಭಿವೃದ್ಧಿ ಹಕ್ಕು ವರ್ಗಾವಣೆಯ (ಟಿಡಿಆರ್) ಮೊತ್ತ ನಿಗದಿಪಡಿಸುವಾಗ ವಾಸ್ತವಕ್ಕಿಂತ ಹೆಚ್ಚು ಬೆಲೆ ನಮೂದಿಸಿದ ಸಂಬಂಧ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಲ್ಲಿ (ಎಸಿಬಿ) ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧ ವಿಚಾರಣೆ ನಡೆಸಲು ಪಾಲಿಕೆ ಆಯುಕ್ತರಿಂದ ಎಸಿಬಿ ಅಧಿಕಾರಿಗಳು ಪೂರ್ವಾನುಮತಿ ಪಡೆದಿದ್ದರು.</p>.<p>ಕೃಷ್ಣಲಾಲ್ ಅವರ ಮನೆಯಲ್ಲಿ ಎಸಿಬಿ ಅಧಿಕಾರಿಗಳು ಏ. 26ರಂದು ತಪಾಸಣೆ ನಡೆಸಿದ ಸಂದರ್ಭದಲ್ಲಿ ಅವರ ವಿರುದ್ಧ ತನಿಖೆಗೆ ಪಾಲಿಕೆ ಆಯುಕ್ತರು ಪೂರ್ವಾನುಮತಿ ನೀಡಿದ್ದ ಪತ್ರದ ಪ್ರತಿ ಪತ್ತೆಯಾಗಿತ್ತು. ಅದನ್ನು ಆಯುಕ್ತರ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಹನುಮಂತಯ್ಯ ನೀಡಿದ್ದರು ಎಂದು ಕೃಷ್ಣಲಾಲ್ ತಿಳಿಸಿದ್ದರು.</p>.<p>ಗೋಪ್ಯ ದಾಖಲೆಯ ಪ್ರತಿಯನ್ನು ಭ್ರಷ್ಟಾಚಾರ ಪ್ರಕರಣ ಆರೋಪಿಗೆ ನೀಡಿ, ಅನುಕೂಲ ಮಾಡಿಕೊಟ್ಟಿದ್ದಕ್ಕಾಗಿ ಹನುಮಂತಯ್ಯ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಎಸಿಬಿಯ ಬೆಂಗಳೂರು ನಗರ ವಿಭಾಗದ ಎಸ್ಪಿ ಅವರು ಪಾಲಿಕೆಗೆ ಶಿಫಾರಸು ಮಾಡಿದ್ದರು.</p>.<p>ಕರ್ತವ್ಯದಲ್ಲಿ ದುರ್ನಡತೆ ತೋರಿದ ಆರೋಪದ ಮೇರೆಗೆ ಹನುಮಂತಯ್ಯ ಅವರನ್ನು ಅಮಾನತು ಮಾಡಿರುವುದಾಗಿ ಪಾಲಿಕೆ ಆಡಳಿತ ವಿಭಾಗದ ಉಪ ಆಯುಕ್ತರು ಗುರುವಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಬಿಎಂಪಿ ಆಯುಕ್ತರ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಹನುಮಂತಯ್ಯ ಅವರನ್ನು ಗೋಪ್ಯ ಮಾಹಿತಿ ಸೋರಿಕೆ ಮಾಡಿದ ಆರೋಪದ ಮೇರೆಗೆ ಅಮಾನತು ಮಾಡಲಾಗಿದೆ.</p>.<p>ಬಿಬಿಎಂಪಿಯಲ್ಲಿ ಸಹಾಯಕ ಎಂಜಿನಿಯರ್ ಆಗಿದ್ದ ಕೃಷ್ಣಲಾಲ್ ಅವರು ಪ್ರಸ್ತುತ ಎರವಲು ಸೇವೆ ಮೇರೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (ಬಿಡಿಎ) ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.</p>.<p>ರಸ್ತೆ ವಿಸ್ತರಣೆ ಕಾಮಗಾರಿಗಾಗಿ ಬಿಬಿಎಂಪಿ ಕೌದೇನಹಳ್ಳಿಯಲ್ಲಿ ಖಾಸಗಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿತ್ತು. ಈ ಭೂಮಿಯ ಅಭಿವೃದ್ಧಿ ಹಕ್ಕು ವರ್ಗಾವಣೆಯ (ಟಿಡಿಆರ್) ಮೊತ್ತ ನಿಗದಿಪಡಿಸುವಾಗ ವಾಸ್ತವಕ್ಕಿಂತ ಹೆಚ್ಚು ಬೆಲೆ ನಮೂದಿಸಿದ ಸಂಬಂಧ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಲ್ಲಿ (ಎಸಿಬಿ) ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧ ವಿಚಾರಣೆ ನಡೆಸಲು ಪಾಲಿಕೆ ಆಯುಕ್ತರಿಂದ ಎಸಿಬಿ ಅಧಿಕಾರಿಗಳು ಪೂರ್ವಾನುಮತಿ ಪಡೆದಿದ್ದರು.</p>.<p>ಕೃಷ್ಣಲಾಲ್ ಅವರ ಮನೆಯಲ್ಲಿ ಎಸಿಬಿ ಅಧಿಕಾರಿಗಳು ಏ. 26ರಂದು ತಪಾಸಣೆ ನಡೆಸಿದ ಸಂದರ್ಭದಲ್ಲಿ ಅವರ ವಿರುದ್ಧ ತನಿಖೆಗೆ ಪಾಲಿಕೆ ಆಯುಕ್ತರು ಪೂರ್ವಾನುಮತಿ ನೀಡಿದ್ದ ಪತ್ರದ ಪ್ರತಿ ಪತ್ತೆಯಾಗಿತ್ತು. ಅದನ್ನು ಆಯುಕ್ತರ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಹನುಮಂತಯ್ಯ ನೀಡಿದ್ದರು ಎಂದು ಕೃಷ್ಣಲಾಲ್ ತಿಳಿಸಿದ್ದರು.</p>.<p>ಗೋಪ್ಯ ದಾಖಲೆಯ ಪ್ರತಿಯನ್ನು ಭ್ರಷ್ಟಾಚಾರ ಪ್ರಕರಣ ಆರೋಪಿಗೆ ನೀಡಿ, ಅನುಕೂಲ ಮಾಡಿಕೊಟ್ಟಿದ್ದಕ್ಕಾಗಿ ಹನುಮಂತಯ್ಯ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಎಸಿಬಿಯ ಬೆಂಗಳೂರು ನಗರ ವಿಭಾಗದ ಎಸ್ಪಿ ಅವರು ಪಾಲಿಕೆಗೆ ಶಿಫಾರಸು ಮಾಡಿದ್ದರು.</p>.<p>ಕರ್ತವ್ಯದಲ್ಲಿ ದುರ್ನಡತೆ ತೋರಿದ ಆರೋಪದ ಮೇರೆಗೆ ಹನುಮಂತಯ್ಯ ಅವರನ್ನು ಅಮಾನತು ಮಾಡಿರುವುದಾಗಿ ಪಾಲಿಕೆ ಆಡಳಿತ ವಿಭಾಗದ ಉಪ ಆಯುಕ್ತರು ಗುರುವಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>