‘2021–22ನೇ ಸಾಲಿನ ಬಿಬಿಎಂಪಿ ಲೆಕ್ಕ ಪರಿಶೋಧನೆಯನ್ನು ಜುಲೈನಲ್ಲಿ ಆರಂಭಿಸಲಾಗಿತ್ತು. ಲೆಕ್ಕ ಪುಸ್ತಕ ಹಾಜರುಪಡಿಸಲು ಲೆಕ್ಕಶಾಖೆಯ ನಿರ್ವಾಹಕ ಎಂ.ಕೆ.ಪ್ರಕಾಶ್ಗೆ ಮೌಖಿಕ ಸೂಚನೆ ನೀಡಲಾಗಿತ್ತು. ಆದರೆ, ಲೆಕ್ಕ ಪುಸ್ತಕ ಹಾಜರುಪಡಿಸದೇ ಅನಧಿಕೃತ ರಜೆ ಮೇಲೆ ತೆರಳಿದ್ದ. ಅನುಮಾನಗೊಂಡು ಕೆನರಾ ಬ್ಯಾಂಕ್ ಪರಿಶೀಲನೆ ನಡೆಸಿದಾಗ ಕಾಂಚನಾ ಎಂಬುವರ ಖಾತೆಗೆ ಹಣ ವರ್ಗಾವಣೆ ಮಾಡಿರುವುದು ಕಂಡುಬಂದಿತ್ತು’ ಎಂದು ಮೂಲಗಳು ತಿಳಿಸಿವೆ.